ಹಿಂದಿ ದಿವಸ | ಭಾಷಾ ಹೇರಿಕೆ ವಿರುದ್ಧ ಇಂದು ಪ್ರತಿಭಟನೆ: ‘ಕರಾಳ ದಿನ’ ಆಚರಣೆಗೆ ಕರವೇ ಕರೆ

Date:

ಕೇಂದ್ರ ಸರ್ಕಾರವು ಪ್ರತಿವರ್ಷ ಸೆಪ್ಟೆಂಬರ್ 14ರಂದು (ಇಂದು) ಹಿಂದಿ ದಿವಸ ಆಚರಣೆಯನ್ನು ಮಾಡುತ್ತಿದ್ದು, ಈ ದಿನ ‘ಕರಾಳ ದಿನ’ ಆಚರಿಸಲು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕರೆ ನೀಡಿದೆ. ಹಿಂದಿ ಭಾಷೆ ಹೇರಿಕೆ ವಿರುದ್ಧ ಇಂದು ಕರವೇ ಬೃಹತ್ ಪ್ರತಿಭಟನೆಯನ್ನು ನಡೆಸಲಿದೆ.

ಈ ಹಿಂದಿ ವಿವಸ ಎಂಬುದು ಅನ್ಯಭಾಷಿಕರ ಮೇಲೆ ಹಿಂದಿ ಹೇರುವ ಹುನ್ನಾರವಾಗಿದೆ. ಈ ಹಿಂದಿ ಹೇರಿಕೆ ದೇಶದ ಏಕತೆ ಮತ್ತು ಸಮಗ್ರತೆಗೆ ಧಕ್ಕೆ ಉಂಟು ಮಾಡುತ್ತಿದೆ. ಆದ್ದರಿಂದ ಸೆಪ್ಟೆಂಬರ್ ನಾವು ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ನಡೆಸಲಿದ್ದೇವೆ ಎಂದು ಕರವೇ ರಾಜ್ಯಾಧ್ಯಕ್ಷ ಟಿ. ಎ. ನಾರಾಯಣಗೌಡ ತಿಳಿಸಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಬೆಂಗಳೂರು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿಂದಿಗೆ ಅನೈತಿಕವಾಗಿ ವಿಶೇಷ ಮನ್ನಣೆಯನ್ನು ನೀಡುವ ಸಂವಿಧಾನದ 343ರಿಂದ 351ನೇ ವಿಧಿಗಳನ್ನು ರದ್ದುಪಡಿಸಿ ಎಲ್ಲ ಭಾಷೆಗಳೂ ಒಕ್ಕೂಟದ ದೃಷ್ಟಿಯಲ್ಲಿ ಸಮಾನ ಎಂದು ಸಾರಬೇಕು ಎಂದು ಕರವೇ ಆಗ್ರಹಿಸಿದೆ.

ಇದನ್ನು ಓದಿದ್ದೀರಾ? ಕೆಪಿಎಸ್‌ಸಿ ಮರುಪರೀಕ್ಷೆಗೆ ಸೂಚನೆ; ಸಿಎಂಗೆ ಕರವೇ ಅಭಿನಂದನೆ

ಕೇಂದ್ರ ಸರ್ಕಾರವು ಕೂಡಲೇ ಸಂವಿಧಾನಕ್ಕೆ ತಿದ್ದುಪಡಿ ತಂದು 8ನೇ ಪರಿಚ್ಚೇದದಲ್ಲಿ ಉಲ್ಲೇಖಿಸಿರುವ ಎಲ್ಲ 22 ಭಾಷೆಗಳನ್ನೂ ಅಧಿಕೃತ, ಆಡಳಿತ ಭಾಷೆಗಳನ್ನಾಗಿ ಮಾಡಿ ದೇಶದ ಬಹುತ್ವ, ಸಾರ್ವಭೌಮತ್ವವನ್ನು ಕಾಪಾಡಬೇಕು ಎಂದು ಕರವೇ ನಾಯಕ ನಾರಾಯಣಗೌಡ ಒತ್ತಾಯಿಸಿದ್ದಾರೆ.

ಕರ್ನಾಟಕದಲ್ಲಿ ಕಾರ್ಯನಿರ್ವಹಿಸುವ ಎಲ್ಲ ಕೇಂದ್ರ ಸರಕಾರಿ ಇಲಾಖೆಗಳು, ಉದ್ಯಮಗಳಲ್ಲಿ ಕನ್ನಡವೇ ವ್ಯವಹಾರದ ಭಾಷೆಯಾಗಬೇಕು. ಎಲ್ಲ ಬಗೆಯ ಪತ್ರ ವ್ಯವಹಾರ ಕನ್ನಡದಲ್ಲೇ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಮಕ್ಕಳಿಗೆ ಹಿಂದಿಯನ್ನು ಒಂದು ಭಾಷೆಯನ್ನಾಗಿ ಕಡ್ಡಾಯವಾಗಿ ಕಲಿಸುವುದು ಮೊದಲ ಹಂತದ ಹೇರಿಕೆಯಾಗಿದೆ. ಹಿಂದಿ ಕಲಿತವರಿಗೆ ಮನ್ನಣೆ ನೀಡುವುದು, ನೌಕರಿ ನೇಮಕಾತಿ, ಶಿಕ್ಷಣ ನೇಮಕಾತಿಗಳೂ ಸೇರಿದಂತೆ ವಿವಿಧ ಪ್ರವೇಶ ಪರೀಕ್ಷೆಗಳಲ್ಲಿ ಹಿಂದಿ ಕಲಿತವರಿಗೆ ಮನ್ನಣೆ ನೀಡುವುದು, ಹಿಂದಿ ಸಪ್ತಾಹ-ಹಿಂದಿ ದಿವಸ ಎಂಬ ಕಾರ್ಯಕ್ರಮಗಳ ಮೂಲಕ ಇತರ ಭಾಷಿಕರು ಹಿಂದಿ ಕಲಿಯುವಂತೆ ಒತ್ತಡ ಹೇರುವುದು, ಇವೆಲ್ಲವೂ ಕೂಡಾ ಕೇಂದ್ರ ಸರ್ಕಾರದಿಡಯಲ್ಲಿ ನಡೆಯುವ ವ್ಯವಸ್ಥಿತ ಕುತಂತ್ರಗಳು ಎಂದು ಕರವೇ ರಾಜ್ಯಾಧ್ಯಕ್ಷ ಟಿ. ಎ. ನಾರಾಯಣಗೌಡ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...