ಕೋವಿಶೀಲ್ಡ್‌ನಿಂದ ಅಡ್ಡ ಪರಿಣಾಮವಿದ್ದರೂ ಮೋದಿ ಸರ್ಕಾರ ಲಸಿಕೆಗೆ ಒಪ್ಪಿಗೆ ನೀಡಿದ್ದೇಕೆ?: ಮೋಹನ್ ದಾಸರಿ ಪ್ರಶ್ನೆ

Date:

ಭಾರತದಲ್ಲೇ ತಯಾರಾದ ಕೋವ್ಯಾಕ್ಸಿನ್ ಇದ್ದರೂ ಕೋವಿಶೀಲ್ಡ್ ಅನ್ನು ದೇಶದ 80 ಪ್ರತಿಶತ ಜನಕ್ಕೆ ನೀಡಲು ಕಾರಣವೇನು? ಕೋವ್ಯಾಕ್ಸಿನ್ ಕಂಪನಿ ಕೇಂದ್ರ ಸರ್ಕಾರಕ್ಕೆ ಕಿಕ್‌ಬ್ಯಾಕ್ ನೀಡದಿರುವುದಕ್ಕೆ ಆ ಲಸಿಕೆಯನ್ನು ಶಿಫಾರಸ್ಸು ಮಾಡಲಿಲ್ಲವಾ? ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಪ್ರಶ್ನೆ ಮಾಡಿದ್ದಾರೆ.

ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, 2022 ರಲ್ಲಿ 32,457 ಹೃದಯಾಘಾತ 2021ರಲ್ಲಿ 28,413 ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೋವಿಡ್ ಲಸಿಕೆ ಪಡೆದ ನಂತರ 2022 ರಲ್ಲಿ 30 ವರ್ಷದೊಳಗಿನ 3,329 ಯುವಕರು ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದರು.

ವಿಶ್ವ ಸಂಸ್ಥೆ ಲಸಿಕೆಯ ಅಡ್ಡಪರಿಣಾಮದ ಬಗ್ಗೆ ವಿಸ್ತೃತವಾಗಿ ಹೇಳಿದೆ. ಇದನ್ನು ಅರಿತ ಅನೇಕ ದೇಶಗಳು ಆ ಲಸಿಕೆಯನ್ನು ನಿಷೇಧಿಸಿವೆ. ಆದರೆ ಪ್ರಧಾನಿ ಮೋದಿ ತಮ್ಮ ಜನಪ್ರಿಯತೆ ಹೆಚ್ಚಿಸಿಕೊಳ್ಳಲು, ಜನರ ₹35,000 ಕೋಟಿ ಖರ್ಚು ಮಾಡಿ ದೇಶದ 80 ಪ್ರತಿಶತ ಮಂದಿಗೆ ವ್ಯಾಕ್ಸಿನ್ ನೀಡಲಾಗಿದೆ. ಕೋವ್ಯಾಕ್ಸಿನ್ ಅನ್ನು 20 ಪ್ರತಿಶತ ಮಂದಿಗೆ ಮಾತ್ರ ನೀಡಲಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಶ್ವದ ಅತಿ ದೊಡ್ಡ ಲಸಿಕೆ ಕಾರ್ಯಕ್ರಮದಲ್ಲಿ ಅತಿ ದೊಡ್ಡ ಹಗರಣ ನಡೆದಿದೆ ಎನ್ನುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ? ಕೋವಿಶೀಲ್ಡ್ ಹಾಕಿಸಿಕೊಳ್ಳುವ ಕಾರಣ ರಕ್ತ ಹೆಪ್ಪುಗಟ್ಟುತ್ತದೆ ಎಂದು ಅಸ್ಟ್ರಾಜನಿಕ ಒಪ್ಪಿಕೊಂಡಿದೆ. ಇಷ್ಟು ಗಂಭೀರ ಅಡ್ಡಪರಿಣಾಮ ಇದ್ದಾಗ ಹೇಗೆ ಲಸಿಕೆ ಹಾಕಲು ಒಪ್ಪಿಗೆ ನೀಡಿದಿರಿ? ಇವತ್ತು ತಮ್ಮಿಂದಾದ ತಪ್ಪನ್ನು ಒಪ್ಪಿಕೊಳ್ಳಲು ಕೂಡ ಮೋದಿ ಸಿದ್ದವಾಗಿಲ್ಲ, ಕೆಲವು ವೈದ್ಯರಿಗೆ ಹಣ ನೀಡಿ ಅಡ್ಡ ಪರಿಣಾಮ ಇಲ್ಲ ಎಂದು ಹೇಳಿಸುತ್ತಿದ್ದಾರೆ. ಹೃದಯಾಘಾತದ ಸಂಖ್ಯೆ ಕಣ್ಣು ಮುಂದೆ ಇದೆ. ಸರ್ಕಾರ ತಮ್ಮ ತಪ್ಪು ಒಪ್ಪಿಕೊಂಡು, ಲಸಿಕೆ ಪಡೆದುಕೊಂಡ ಬಳಿಕ, ಹೃದಯಾಘಾತದಿಂದ ಸಾವನ್ನಪ್ಪಿದ ಜನರಿಗೆ ಲಸಿಕಾ ಕಂಪನಿಯಿಂದ ಪರಿಹಾರ ಕೊಡಿಸಬೇಕು ಎಂದು ಮೋಹನ್ ದಾಸರಿ ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನೋಟಾವನ್ನು ಅಭ್ಯರ್ಥಿಯನ್ನಾಗಿ ಪರಿಗಣಿಸಲು ಇದು ಸಕಾಲ

ಅಷ್ಟು ಆರೋಗ್ಯವಾಗಿದ್ದು, ಸದೃಢರಾಗಿದ್ದ ಪುನೀತ್ ರಾಜ್‌ಕುಮಾರ್ ಕೂಡ ಇದ್ದಕ್ಕಿದ್ದಂತೆ ಹೃದಯಾಘತದಿಂದ ಸಾವನ್ನಪ್ಪುತ್ತಾರೆ ಎಂದರೆ ಇದು ಕೂಡ ಒಂದು ಕಾರಣ ಇರಬಹುದಲ್ಲವಾ ಎಂದು ಅನುಮಾನ ವ್ಯಕ್ತಪಡಿಸಿದರು.

ಎಎಪಿ ಬೆಂಗಳೂರು ಸಂಘಟನಾ ಕಾರ್ಯದರ್ಶಿ ಅಶೋಕ್ ಮೃತ್ಯುಂಜಯ ಮಾತನಾಡಿ, ಕೋವಿಶೀಲ್ಡ್ ತಯಾರಿಸಿದ್ದ ಅಸ್ಟ್ರಾಜನಿಕಾ ಕಂಪನಿ ಮೇಲೆ ಪ್ರಕರಣ ದಾಖಸಿದ ಬಳಿಕ, ಕಂಪನಿ ಅಂತಿಮವಾಗಿ ತಮ್ಮ ಔಷಧಿಯಿಂದ ಅಡ್ಡ ಪರಿಣಾಮ ಇದೆ ಎಂದು ನ್ಯಾಯಾಲಯದಲ್ಲಿ ಒಪ್ಪಿಕೊಂಡಿದೆ. ವಿಶ್ವಸಂಸ್ಥೆಯವರು ಕೂಡ ಲಸಿಕೆಯಿಂದ ಅಡ್ಡ ಪರಿಣಾಮ ಇದ್ದು ಜನರಿಗೆ ಮಾಹಿತಿ ನೀಡುವಂತೆ ತಿಳಿಸಿದರೂ, ಕೇಂದ್ರ ಸರ್ಕಾರ ಮಾತ್ರ ಔಷಧಿಯಿಂದ ಯಾವುದೇ ಅಡ್ಡ ಪರಿಣಾಮ ಇಲ್ಲ ಎಂದು ವಾದಿಸಿತು. ಲೋಕಸಭೆಯಲ್ಲೇ ಅಧಿಕೃತವಾಗಿ ಸರ್ಕಾರ ಘೋಷಣೆ ಮಾಡಿತ್ತು ಎಂದರು.

ಯಾವುದೇ ಲಸಿಕೆಯಾದರೂ ಅಡ್ಡ ಪರಿಣಾಮ ಇರುತ್ತದೆ. ಆದರೆ ಯಾಕೆ ಭಾರತದಲ್ಲಿ 80 ಪ್ರತಿಶತ ಜನಕ್ಕೆ ಕೋವಿಶೀಲ್ಡ್ ಲಸಿಕೆ ನೀಡಲಾಗಿದೆ. ಭಾರತದ ಕೋವ್ಯಾಕ್ಸಿನ್ ಅನ್ನು ಯಾಕೆ ಶಿಫಾರಸ್ಸು ಮಾಡಲಿಲ್ಲ, ಅಸ್ಟ್ರಾಜನಿಕಾ ಕಂಪನಿ ಯಾಕೆ ₹50 ಕೋಟಿ ಚುನಾವಣಾ ಬಾಂಡ್ ಖರೀದಿ ಮಾಡಿದೆ ಎಂದು ಪ್ರಶ್ನಿಸಿದರು.

₹35 ಸಾವಿರ ಕೋಟಿ ಜನಗಳ ದುಡ್ಡು ಖರ್ಚು ಮಾಡಿ ಲಸಿಕೆ ನೀಡಲಾಗಿದೆ. ಯಾಕೆ ಇದೇ ಕಂಪನಿಯ ಲಸಿಕೆಯನ್ನು ಕೇಂದ್ರ ಸರ್ಕಾರ ಶಿಫಾರಸ್ಸು ಮಾಡಿದೆ ಎಂದು ಸಮಸ್ತ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...