ಕೆಇಎ ಸೀಟ್‌ ಬ್ಲಾಕಿಂಗ್ ಹಗರಣ; 10 ಮಂದಿ ಆರೋಪಿಗಳ ಬಂಧನ

Date:

ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಡಿಯಲ್ಲಿ ಸರ್ಕಾರಿ ಕೋಟಾದಡಿ ನೀಡಲಾಗುವ ಸೀಟ್‌ಗಳ ಹಂಚಿಕೆಯಲ್ಲಿ ಹಗರಣ ನಡೆದಿದೆ. ಹಣ ಪಡೆದು ಸೀಟ್‌ ಬ್ಲಾಕಿಂಗ್‌ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಈವರೆಗೆ 10 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸರ್ಕಾರಿ ಕೋಟಾದಡಿ ಖಾಸಗಿ ಕಾಲೇಜುಗಳಲ್ಲಿ ಸೀಟು ಸಿಕ್ಕರೂ ಸುಮಾರು 2,625 ಅಭ್ಯರ್ಥಿಗಳು ಕಾಲೇಜುಗಳಿಗೆ ದಾಖಲಾಗಿರಲಿಲ್ಲ. ಆ ಅಭ್ಯರ್ಥಿಗಳು ಪ್ರವೇಶ ಪಡೆಯದಿದ್ದಾಗ ಅರ್ಹ ಅಭ್ಯರ್ಥಿಗಳಿಗೆ ಸೀಟು ನೀಡದೆ ವಂಚಿಸಲಾಗಿದೆ. ಜೊತೆಗೆ, ಸೀಟು ಅಗತ್ಯವಿಲ್ಲದ ಅಭ್ಯರ್ಥಿಗಳನ್ನು ಸಂಪರ್ಕಿಸಿ ಕೌನ್ಸೆಲಿಂಗ್​ಗೆ ಬರುವಂತೆ ಮಾಡಿದ್ದು, ಉದ್ದೇಶಪೂರ್ವಕವಾಗಿ ಅರ್ಹ ಅಭ್ಯರ್ಥಿಗಳಿಗೆ ಸೀಟು ಸಿಗದಂತೆ ಮಾಡಲಾಗಿದೆ. ಸರ್ಕಾರಿ ಕೋಟಾದ ಸೀಟುಗಳನ್ನು ಮ್ಯಾನೆಜ್‌ಮೆಂಟ್‌ ಕೋಟಾದ ಸೀಟುಗಳಾಗಿ ಪರಿವರ್ತಿಸಿ, ಹೆಚ್ಚು ಶುಲ್ಕ ವಸೂಲಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಸೀಟ್‌ ಬ್ಲಾಕಿಂಗ್‌ ಹಗರಣದ ಬಗ್ಗೆ ಕೆಇಎ ಆಡಳಿತಾಧಿಕಾರಿ ಇಸಾಲುದ್ದೀನ್ ಜೆ. ಗಾಡಿಯಲ್ ಅವರು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ಬೆಂಗಳೂರಿನ ಬಿಎಂಎಸ್ ಕಾಲೇಜು, ಆಕಾಶ್ ಇನ್​ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಕಾಲೇಜು ಹಾಗೂ ನ್ಯೂ ಹಾರಿಜನ್ ಇಂಜಿನಿಯರಿಂಗ್ ಕಾಲೇಜುಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಸಿಕೊಂಡಿದ್ದಾರೆ. 10 ಮಂದಿಯನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...