ಕೆಂಗೇರಿ ಕೆರೆ ದುರಂತ | ಮೃತ ಮಕ್ಕಳ ಕುಟುಂಬಕ್ಕೆ ಪರಿಹಾರ ನೀಡಲು ಸಿಪಿಐ(ಎಂ) ಆಗ್ರಹ

Date:

ಬೆಂಗಳೂರಿನ ಕೆಂಗೇರಿ ಕೆರೆಯಲ್ಲಿ ಇಬ್ಬರು ಮಕ್ಕಳು ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದ್ದು, ಈ ಪೈಕಿ ಮಂಗಳವಾರ ಎರಡು ಮೃತದೇಹ ಪತ್ತೆಯಾಗಿವೆ. ಶೋಧ ಕಾರ್ಯ ಮುಂದುವರಿದಿದೆ.

ಸೋಮವಾರ ಸಂಜೆ ಈ ದುರ್ಘಟನೆ‌ ನಡೆದಿದ್ದು, ಮೃತ ಮಕ್ಕಳನ್ನು ಶ್ರೀನಿವಾಸ್ (ಜಾನ್ ಸೀನಾ) (15) ಮತ್ತು‌ ಮಹಾಲಕ್ಷ್ಮಿ (13)‌ ಎಂದು‌ ಗುರುತಿಸಲಾಗಿದೆ. ಈ ಘಟನೆಯನ್ನು ಸಿಪಿಐ(ಎಂ) ಬೆಂಗಳೂರು ದಕ್ಷಿಣ ಜಿಲ್ಲಾ ಸಮಿತಿ ತೀವ್ರವಾಗಿದೆ ಖಂಡಿಸಿದೆ.

ಮೃತ ಮಕ್ಕಳ ಕುಟುಂಬಕ್ಕೆ ಅಗತ್ಯ ಪರಿಹಾರ ನೀಡಬೇಕು ಎಂದು ಸಿಪಿಐ(ಎಂ) ಬೆಂಗಳೂರು ದಕ್ಷಿಣ ಜಿಲ್ಲಾ ಸಮಿತಿ ಬಿಬಿಎಂಪಿ ಮತ್ತು ರಾಜ್ಯ ಸರ್ಕಾರವನ್ನು ಇದೇ ಸಂದರ್ಭದಲ್ಲಿ ಆಗ್ರಹಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತ ಮಕ್ಕಳ ತಾಯಿಯನ್ನು ಸಿಪಿಐ(ಎಂ) ಕೆಂಗೇರಿ ವಲಯ ಸಮಿತಿಯ ನಿಯೋಗ ಮಂಗಳವಾರ ಭೇಟಿ ಮಾಡಿ ಸಾಂತ್ವನ ಹೇಳಿದೆ. ನಿಯೋಗದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಕೆ.ಎಸ್.ಲಕ್ಷ್ಮಿ, ಮುಖಂಡರಾದ ಎನ್.ಬಿ.ಮಹಂತೇಶ್, ಬಿ.ಕಪನಿಗೌಡ, ಕೆ.ಗುರುಪ್ರಸಾದ್ ಇದ್ದರು.

“ಅಕ್ಟೋಬರ್ 21 ರಂದು ಸುರಿದ ತೀವ್ರ ಮಳೆಯಿಂದ ಕೆಂಗೇರಿ ಅಂಗಳದಲ್ಲಿ ಮಣ್ಣು ಮೃದುವಾಗಿ ಆಟವಾಡುತ್ತಿದ್ದ ಮಕ್ಕಳು ಕಾಲು ಜಾರಿ ಕೆರೆಗೆ ಬಿದ್ದಿದ್ದಾರೆ. ಇದು ಬಿಬಿಎಂಪಿಯ ತೀವ್ರ ನಿರ್ಲಕ್ಷ್ಯವಾಗಿದ್ದು ಕೆರೆ ಅಂಗಳದಲ್ಲಿ ತಂತಿ ಬೇಲಿ ಇಲ್ಲದಿರುವುದೇ ಈ ಅನಾಹುತಕ್ಕೆ ಕಾರಣ” ಎಂದು ಸಿಪಿಐ ಆರೋಪಿಸಿದೆ.

ಈ ಸುದ್ದಿ ಓದಿದ್ದೀರಾ? ಸತತ ಮಳೆ, ಬೆಂಗಳೂರು ನಗರ ಜಿಲ್ಲೆಯಾದ್ಯಂತ ಬುಧವಾರ ಶಾಲೆಗಳಿಗೆ ರಜೆ: ಡಿಸಿ ಜಗದೀಶ್ ಆದೇಶ

“ನಾಗರತ್ನರವರು ಬಿಬಿಎಂಪಿಯಲ್ಲಿ ಒಣ ತ್ಯಾಜ್ಯ ವಿಲೇವಾರಿಯ ವಿಭಾಗದಲ್ಲಿ ಕೆಲಸ ಮಾಡುವ ದಿನಗೂಲಿ ಕಾರ್ಮಿಕಳು. ದಲಿತ ಕುಟುಂಬಕ್ಕೆ ಸೇರಿದ ಈಕೆ ಒಂಟಿ ಮಹಿಳೆ ಕೆಲಸಕ್ಕೆ ಹೋದಾಗ ಈ ಅವಘಡ ನಡೆದಿದೆ. ತನ್ನ ಸಂಸ್ಥೆಯ ದಿನಗೂಲಿ ನೌಕರಳ ಕುರಿತು ಈವರೆಗೆ ಬಿಬಿಎಂಪಿ ಉನ್ನತ ಅಧಿಕಾರಿಗಳು ಪ್ರತಿಕ್ರಿಯಿಸಿಲ್ಲ. ಇದು ಅತ್ಯಂತ ಅಮಾನವೀಯ ನಡೆಯಾಗಿದೆ” ಎಂದು ಸಮಿತಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸ್ಥಳೀಯ ಶಾಸಕರಾದ ಸೋಮಶೇಖರ್ ಆಗಲೀ, ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆಯವರಾಗಲೀ ಕನಿಷ್ಠ ಭೇಟಿ ನೀಡಿ ಸಾಂತ್ವನ ಹೇಳಲು ಬಂದಿಲ್ಲ. ಇದು ಬಡವರು ಮತ್ತು ದಲಿತ ಮಕ್ಕಳ ಕುರಿತ ನಿರ್ಲಕ್ಷ್ಯ” ಎಂದು ಸಿಪಿಐ(ಎಂ) ಕೆಂಗೇರಿ ವಲಯ ಸಮಿತಿ ದೂರಿದೆ.

“ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಕೂಡಲೇ ಮಧ್ಯಪ್ರವೇಶಿಸಬೇಕು. ಮೃತ ಮಕ್ಕಳ ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರಿಯನ್ನು ನೀಡಬೇಕು. ಕುಟುಂಬದ ನಿರ್ವಹಣೆಗೆ ಕನಿಷ್ಠ 50 ಲಕ್ಷ ಪರಿಹಾರ ಘೋಷಿಸಬೇಕು. ನಿರ್ಲಕ್ಷ್ಯ ಮಾಡಿದ ಬಿ.ಬಿ.ಎಂ.ಪಿ ಅಧಿಕಾರಿಗಳ ವಿರುದ್ಧವು ಕ್ರಮಜರುಗಿಸಬೇಕು” ಎಂದು ಆಗ್ರಹಿಸಿದೆ.

“ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಬೆಂಗಳೂರಿನ ಕೆರೆಗಳಿಗೆ ಮುಳ್ಳುತಂತಿ ಮತ್ತು ಗೇಟ್ ವ್ಯವಸ್ಥೆ ಮಾಡಬೇಕು. ಎಚ್ಚರಿಕೆಯ ಫಲಕಗಳನ್ನು ಹಾಕಬೇಕು” ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...