ಮಹಾಲಕ್ಷ್ಮಿ ಹತ್ಯೆ | ದೇಹ ಕತ್ತರಿಸಿದ ಸ್ಥಳದ ಗುರುತು ಪತ್ತೆಯಾಗದಂತೆ ಮನೆ ಸ್ವಚ್ಛ ಮಾಡಿರುವ ಕೊಲೆ ಆರೋಪಿ

Date:

ಬೆಂಗಳೂರಿನ ವೈಯಾಲಿಕಾವಲ್​ನ ಮುನೇಶ್ವರ ಬ್ಲಾಕ್‌ನ ನಿವಾಸಿಯಾಗಿದ್ದ ಮಹಾಲಕ್ಷ್ಮಿ ಕೊಲೆ ಪ್ರಕರಣ ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್‌) ತಜ್ಞರಿಗೆ ತಲೆ ನೋವಾಗಿ ಪರಿಣಮಿಸಿದೆ.

ಕೊಲೆಯಾದ ಮಹಾಲಕ್ಷ್ಮಿ ಮನೆಯನ್ನು ಸಂಪೂರ್ಣವಾಗಿ ಪರಿಶೀಲನೆ ನಡೆಸಿದರೂ ಎಫ್​ಎಸ್​​ಎಲ್​ ತಜ್ಞರಿಗೆ ರಕ್ತದ ಕಲೆಗಳು ಮತ್ತು ದೇಹ ಕತ್ತರಿಸಿದ ಸ್ಥಳದ ಗುರುತುಗಳು ಪತ್ತೆಯಾಗಿಲ್ಲ. ಕೊಲೆ ಆರೋಪಿ ಯಾವುದೇ ಗುರುತು ಸಿಗದಂತೆ ಮನೆಯನ್ನು ಸ್ವಚ್ಛಗೊಳಿಸಿ ಪರಾರಿಯಾಗಿದ್ದಾನೆ.

ಕೊಲೆ ನಡೆದ ಸ್ಥಳದಲ್ಲಿ, ರಕ್ತ ಕಾಣಬಾರದೆಂದು ಸ್ವಚ್ಛ ಮಾಡಿದ ಮೇಲೂ ಕಲೆಗಳನ್ನು ಪತ್ತೆ ಹಚ್ಚಬಹುದು. ಎಫ್​ಎಸ್​ಎಲ್​ ತಜ್ಞರು ಲುಮಿನಾಲ್ ಎಂಬ ಕೆಮಿಕಲ್ ಬಳಸಿ ರಕ್ತದ ಕಲೆಗಳನ್ನು ಪತ್ತೆ ಹಚ್ಚುತ್ತಾರೆ. 200 ದಿನಗಳ ಹಿಂದಿನ ರಕ್ತದ ಕಲೆಗಳನ್ನೂ ಸಹ ಲುಮಿನಾಲ್ ಕೆಮಿಕಲ್ ಬಳಸಿ ಪತ್ತೆ ಮಾಡಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಮಹಾಲಕ್ಷ್ಮಿ ಕೊಲೆ ಪ್ರಕರಣದಲ್ಲಿ ಲುಮಿನಾಲ್ ಕೆಮಿಕಲ್ ಬಳಸಿದರೂ ರಕ್ತದ ಕಲೆಗಳು ಪತ್ತೆಯಾಗಿಲ್ಲ. ಹೀಗಾಗಿ ಕೊಲೆ ಆರೋಪಿ ಯಾವುದೋ ಕೆಮಿಕಲ್ ಬಳಸಿ ಮನೆ ಸ್ವಚ್ಛ ಮಾಡಿರುವ ಶಂಕೆ ಪೊಲೀಸರಿಗೆ ಬಂದಿದೆ. ಇನ್ನು, ಆರೋಪಿ ಮಹಾಲಕ್ಷ್ಮಿಯನ್ನು ಕೊಲೆ ಮಾಡಲು, ಪಕ್ಕಾ ಪ್ಲ್ಯಾನ್​ ಮಾಡಿದ್ದಾನೆ. ಕೊಲೆ ಮಾಡಿದ ಬಳಿಕ ಸಾಕ್ಷ್ಯ ಹೇಗೆ ನಾಶ ಮಾಡಬೇಕು ಎಂಬುವುದನ್ನೂ ಮುಂಚೆಯೇ ಅಧ್ಯಯನ ಮಾಡಿದ್ದಾನೆ ಎಂಬ ಶಂಕೆ ತನಿಖಾಧಿಕಾರಿಗಳಿಗೆ ವ್ಯಕ್ತವಾಗಿದೆ.

ಮಹಾಲಕ್ಷ್ಮಿ ಸಂಪರ್ಕದಲ್ಲಿದ್ದ ಆಶ್ರಫ್​

ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪೊಲೀಸರು ಕಟಿಂಗ್ ಶಾಪ್​ನಲ್ಲಿ ಕೆಲಸ ಮಾಡುತ್ತಿದ್ದ ಅಶ್ರಫ್ ಎಂಬಾತನನ್ನು, ಕರೆದು ವಿಚಾರಣೆ ಮಾಡಿದ್ದಾರೆ. ವಿಚಾರಣೆ ವೇಳೆ ಆಶ್ರಫ್​, ಮಹಾಲಕ್ಷ್ಮಿ ಜೊತೆ ಸಂಪರ್ಕದಲ್ಲಿದ್ದೆ ಎಂದು ಹೇಳಿದ್ದಾನೆ.

“ಮಹಾಲಕ್ಷ್ಮಿ ಜೊತೆ ಸಂಪರ್ಕ ಇದ್ದಿದ್ದು ನಿಜ. ಆದರೆ ನಾನು ಕೊಲೆ ಮಾಡಿಲ್ಲ. ಆರು ತಿಂಗಳ ಹಿಂದೆ ಆಕೆ ಜೊತೆ ಸಂಪರ್ಕ ಇತ್ತು. ಈಗ ದೂರ ಆಗಿದ್ದೆ. ನಮ್ಮ ಇಬ್ಬರ ವಿಚಾರ ಕುಟುಂಬಸ್ಥರಿಗೆ ಗೊತ್ತಾಗಿ ಜಗಳವಾದ ಮೇಲೆ ಆಕೆಯ ತಂಟೆಗೆ ಹೋಗಿಲ್ಲ. ಈ ಕೊಲೆಗೂ, ನನಗೂ ಯಾವುದೇ ಸಂಬಂಧ ಇಲ್ಲ” ಎಂದು ಹೇಳಿದ್ದಾನೆ.

ಇದನ್ನು ಓದಿದ್ದೀರಾ? ಶಿರೂರು ದುರಂತ | ಡ್ರೆಜ್ಜಿಂಗ್ ಕಾರ್ಯಾಚರಣೆಯ ವೇಳೆ ಮೂಳೆ ಪತ್ತೆ: ಡಿಎನ್‌ಎ ಪರೀಕ್ಷೆ ನಡೆಸಲು ರವಾನೆ

ಬಳಿಕ, ಪೊಲೀಸರು ಅಶ್ರಫ್ ಮೊಬೈಲ್​ ಪರಿಶೀಲಿಸಿದಾಗ, ಇಬ್ಬರ ಮಧ್ಯೆ ಕಳೆದ ಆರು ತಿಂಗಳಿಂದ ಸಂಪರ್ಕ ಇಲ್ಲದಿರುವುದು ತಿಳಿದಿದೆ. ಸದ್ಯ ಪೊಲೀಸರು ಅಶ್ರಫ್​ನನ್ನು ಬಿಟ್ಟು ಕಳುಹಿಸಿದ್ದಾರೆ.

ಮಹಾಲಕ್ಷ್ಮಿಯ ಮೊಬೈಲ್ ಪತ್ತೆ

ಮಹಾಲಕ್ಷ್ಮಿ ಮನೆಯಲ್ಲೇ ಆಕೆಯ ಮೊಬೈಲ್​ ಪತ್ತೆಯಾಗಿದೆ. ಮೊಬೈಲ್ ಸ್ವಿಚ್ ಆಫ್ ಆಗಿದೆ. ಮೊಬೈಲ್​ ವಶಕ್ಕೆ ಪಡೆದ ಪೊಲೀಸರು, ಪರಿಶೀಲನೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...