ಕೋಗಿಲು ಬಡಾವಣೆ ಪ್ರಕರಣ: ಜ.8ರೊಳಗೆ 30 ಮಂದಿಗೆ ಮನೆ, ಕನ್ನಡಿಗರಿಗೆ ಮೊದಲ ಆದ್ಯತೆ ನೀಡಲು ತೀರ್ಮಾನ

Date:

ಕೋಗಿಲು ಬಡಾವಣೆ ಮನೆ ಧ್ವಂಸ ಪ್ರಕರಣದಲ್ಲಿ ಫಕೀರ್ ಕಾಲೋನಿಯ 25-30 ಮಂದಿಗೆ ಜನವರಿ 8ರೊಳಗೆ ಮನೆ ನೀಡಲು ನಿರ್ಧರಿಸಲಾಗಿದೆ. ಹಾಗೆಯೇ ವಸೀಂ ಕಾಲನಿಯಲ್ಲಿರುವವರ ಮಾತೃ ಭಾಷೆ ಬೇರೆ ಯಾವುದೇ ಆದರೂ ಕರ್ನಾಟಕದ ಮೂಲದವರಾಗಿದ್ದರೆ, ಕರ್ನಾಟಕದಲ್ಲೇ ನೆಲೆಸಿದ್ದವರಾದರೆ ಮನೆ ನೀಡಬೇಕು. ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು ಎಂದು ತೀರ್ಮಾನಿಸಲಾಗಿದೆ.

ಕೋಗಿಲು ಲೇಔಟ್ ನಿರಾಶ್ರಿತರಿಗೆ ಸರ್ಕಾರಿ ಮನೆ ಮಂಜೂರು ಮಾಡುವ ವಿಚಾರದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ವಸತಿ ಸಚಿವ ಜಮೀರ್ ಅಹ್ಮದ್ ನೇತೃತ್ವದಲ್ಲಿ ವಿಕಾಸಸೌಧದಲ್ಲಿ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

ಇದನ್ನು ಓದಿದ್ದೀರಾ? ಕೋಗಿಲು ಗೆ ‘ಸರ್ಕಾರಿ ಬೇಲಿ’ : ನಿವಾಸಿಗಳೊಡನೆ ಮಾತಿನ ಚಕಮಕಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾತೃ ಭಾಷೆ ಬೇರೆಯಾಗಿದ್ದರೂ ಹಲವು ತಲೆಮಾರಿನಿಂದ ಕರ್ನಾಟಕದಲ್ಲಿ ವಾಸವಿದ್ದರೂ, ಮೂಲ ತಾಲೂಕು-ಊರು ಯಾವುದೆಂದು ತಿಳಿದು ಅಲ್ಲಿನ ವಿಎ ಹಾಗೂ ದಫೇದಾರ್ ಮೂಲಕ ಪರಿಶೀಲಿಸಿ ಅದಾದ ಬಳಿಕ ನಿರಾಶ್ರಿತರಿಗೆ ಮನೆ ನೀಡಬೇಕು. ಬಡವರು ಬಡವರೇ ಭಾರತೀಯರು ಭಾರತೀಯರೇ. ಆದರೆ ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಸಭೆಯಲ್ಲಿ ನಿರ್ಧರಿಸಲಾಗಿದೆ.

ಐದು ವರ್ಷ ಕರ್ನಾಟಕದಲ್ಲಿ ನೆಲೆಸಿದ್ದರೆ ಅಂತಹ ಬಡವರಿಗೆ 1 ಲಕ್ಷ ಮನೆ ನೀಡುವ ಸರ್ಕಾರದ ವಸತಿ ಯೋಜನೆ ಅಡಿಯಲ್ಲಿ ಅರ್ಜಿ ಹಾಕಿ ಮನೆ ಪಡೆಯಬಹುದು. ಒಂದೇ ಕುಟುಂಬದವರು ಮನೆಗಾಗಿ ಎರಡು ಅರ್ಜಿ ಹಾಕಿದರೆ ಒಂದು ರೇಷನ್ ಕಾರ್ಡ್ ಆಧಾರದಲ್ಲಿ ಒಂದು ಮನೆ ನೀಡಬೇಕು. ಹೊರ ರಾಜ್ಯದವರು ಯಾರೆಂದು ಪತ್ತೆಹಚ್ಚುವ ನಿಟ್ಟಿನಲ್ಲಿ ಕನ್ನಡಿಗರಿಗೆ ಮನೆ ನೀಡಲು ತಡ ಮಾಡುವುದು ಸರಿಯಲ್ಲ. ಮೊದಲು ಅರ್ಹರಿಗೆ ಮನೆ ನೀಡಲು ಆರಂಭಿಸಿ ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಇದನ್ನು ಓದಿದ್ದೀರಾ? ಕೋಗಿಲು ಬಡಾವಣೆ ಮನೆಗಳ ಧ್ವಂಸ: ಕರ್ನಾಟಕ ‘ಬುಲ್ಡೋಜರ್ ರಾಜ್ಯ’ ಎಂದ ಕೇರಳ ಸಿಎಂ ಪಿಣರಾಯಿ

ಸರ್ಕಾರಿ ಜಮೀನಿನಲ್ಲಿ ಯಾರಿಗೋ ಹಣ ನೀಡಿ ಒತ್ತುವರಿ ಮಾಡಲಾಗುತ್ತಿದೆ. ಅಲೆಮಾರಿಗಳಿಗೆ ಭೂ ಒತ್ತುವರಿ ಅಗತ್ಯ ಇಲ್ಲ. ಅವರು ಒಂದೆಡೆ ನೆಲೆಸುವವರಲ್ಲ. ಆದರೆ ಭೂ ಒತ್ತುವರಿದಾರರನ್ನು ಸಹಿಸಲಾಗದು. ಈ ರೀತಿ ಸರ್ಕಾರಿ ಜಮೀನು ಒತ್ತುವರಿ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಯಿತು.

ಈ ರೀತಿ ಸರ್ಕಾರಿ ಜಮೀನಿನಲ್ಲಿ ಶೆಡ್ ಹಾಕಿದ ಮಾತ್ರಕ್ಕೆ ಅವರಿಗೆ ಮನೆ ನೀಡಿದರೆ ಸಮಾಜಕ್ಕೆ ತಪ್ಪು ಸಂದೇಶ ಹೋಗುತ್ತದೆ. ಆದರೆ ಕೋಗಿಲು ಕ್ರಾಸ್ ಪ್ರಕರಣದಲ್ಲಿ ಬಡವರಿಗೆ ಮಾನವೀಯತೆ ಅಡಿ ಮನೆ ನೀಡಬೇಕಾಗುತ್ತದೆ. ಆದರೆ ಆ ಕೆಲಸ ಕಾನೂನುಬದ್ಧವಾಗಿಯೇ ನಡೆಯಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...