ಕೆಪಿಎಸ್‌ಸಿ ಮರುಪರೀಕ್ಷೆಗೆ ಸೂಚನೆ; ಸಿಎಂಗೆ ಕರವೇ ಅಭಿನಂದನೆ

Date:

ಆಗಸ್ಟ್‌ 27ರಂದು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸಿದ ಗೆಜೆಟೆಡ್ ಪ್ರೋಬೇಷನರಿ ಪರೀಕ್ಷೆಗಳಲ್ಲಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ದೊಡ್ಡ ಪ್ರಮಾಣದಲ್ಲಿ ಅನ್ಯಾಯವಾಗಿದೆ. ಹೀಗಾಗಿ, ಸರ್ಕಾರ ಕೂಡಲೇ ಎಚ್ಚೆತ್ತು ಕನ್ನಡಿಗರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು ಹಾಗೂ ಮರುಪರೀಕ್ಷೆ ನಡೆಸಬೇಕು ಎಂದು ಕೋರಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಹಾಗೂ ಪರೀಕ್ಷಾರ್ಥಿಗಳು ಸೆಪ್ಟೆಂಬರ್ 2ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮಹಾಪ್ರತಿಭಟನೆ ನಡೆಸುತ್ತಿದ್ದಾರೆ.

ಸುಮಾರು ಒಂದು ಲಕ್ಷದ ಮೂವತ್ತಾರು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದು, ಈ ಪೈಕಿ ಬಹುತೇಕರು ಅಂದರೆ, ಸುಮಾರು ಒಂದು ಲಕ್ಷಕ್ಕಿಂತಲೂ ಹೆಚ್ಚು ಮಂದಿ ಗ್ರಾಮೀಣ ಹಿನ್ನೆಲೆಯ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಇದ್ದಾರೆ. ಹಲವಾರು ವರ್ಷಗಳಿಂದ ಕನ್ನಡ ಮಾಧ್ಯಮದ ಮೂಲಕವೇ ಕೆಎಎಸ್‌ ಪರೀಕ್ಷೆಗಾಗಿ ಅಧ್ಯಯನ ನಡೆಸಿದ್ದಾರೆ. ಇಂತವರಿಗೆ ಸರಿಯಾಗಿ ಅರ್ಥವೂ ಆಗದ ಪ್ರಶ್ನೆಗಳುಳ್ಳ ಪ್ರಶ್ನೆ ಪತ್ರಿಕೆ ಸಿದ್ದಪಡಿಸಿ, ಕೊಡಲಾಗಿದೆ. 120 ಅಂಕಗಳ ಸುಮಾರು 60 ಪ್ರಶ್ನೆಗಳು ತಪ್ಪುಗಳಿಂದ ಕೂಡಿವೆ. ಜತೆಗೆ ಗೊಂದಲವನ್ನೂ ಕೂಡ ಮೂಡಿಸಿವೆ. ಇದು ಅತ್ಯಂತ ಗಂಭೀರ ಪ್ರಮಾದವಾಗಿದೆ. ಹಾಗಾಗಿ, ಈ ಕೂಡಲೇ ಸರ್ಕಾರ ಎಚ್ಚೆತ್ತು ಮರುಪರೀಕ್ಷೆ ನಡೆಸಬೇಕು ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ ಎಂದು ಕರವೇ ಹೇಳಿದೆ.

ಇನ್ನು ಪರೀಕ್ಷೆಗಳಲ್ಲಿ ಹಲವಾರು ಪ್ರಶ್ನೆಗಳು ಲೋಪದೋಷಗಳಿಂದ ಕೂಡಿವೆ. Recently introduced Karnataka Stamp Act ಎಂಬುದನ್ನು ಇತ್ತೀಚೆಗೆ ಜಾರಿಗೆ ಬಂದ ಕರ್ನಾಟಕ ಸ್ಟಾಂಪು ಅಧಿನಿಯಮ ಎಂದು ಮಾಡಲಾಗಿದೆ. ಆದರೆ, Introduced ಎಂದರೆ ಮಂಡಿಸಲಾಗಿರುವ ಎಂಬ ಅರ್ಥವನ್ನು ತಿಳಿಸುತ್ತೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

Solar cities are identified by Karnataka ಎಂಬುದನ್ನು ಸೋಲಾರ್ ನಗರಗಳು ಕರ್ನಾಟಕದಲ್ಲಿ ಗುರುತಿಸಲ್ಪಟ್ಟಿದೆ ಎಂದು ಕೊಡಲಾಗಿದೆ ಕರ್ನಾಟಕವು ಗುರುತಿಸಿರುವ ಸೋಲಾರ್ ನಗರಗಳು ಎಂದಾಗಬೇಕು. State Legislatures ಎಂಬುದನ್ನು ರಾಜ್ಯಗಳ ಶಾಸಕಾಂಗ ಎಂಬುದರ ಬದಲಾಗಿ ರಾಜ್ಯ ವಿಧಾನಮಂಡಲ ಎಂದು ಕೊಡಲಾಗಿದೆ. ಬಹುಶಃ ಗೂಗಲ್ ಟ್ರಾನ್ಸ್ ಲೇಟ್ ಬಳಸಿ ಇಷ್ಟು ಕೆಟ್ಟ ಅನುವಾದ ಮಾಡಲಾಗಿದೆ ಎಂದು ಕರವೇ ಆರೋಪಿಸಿದೆ.

ಕರವೇ

“120 ಅಂಕಗಳ ಪರೀಕ್ಷೆಯಲ್ಲಿ 60 ಪ್ರಶ್ನೆಗಳಲ್ಲಿ ಕನ್ನಡ ಪದಬಳಕೆ ತಪ್ಪಾಗಿದೆ. ಮರುಪರೀಕ್ಷೆಗೆ ಅವಕಾಶ ನೀಡಬೇಕು ಎಂದು ಪರೀಕ್ಷಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಕರವೇ ವಿದ್ಯಾರ್ಥಿಗಳ ಪರವಾಗಿದೆ. ಇದು ಕನ್ನಡ ನಾಡಿನ ಮಕ್ಕಳ ಭವಿಷ್ಯ ಎಂಬ ಎಚ್ಚರಿಕೆಯನ್ನು ಸರ್ಕಾರ ಮತ್ತು ಆಯೋಗಕ್ಕೆ ಮಾಧ್ಯಮಗಳ ಮುಖಾಂತರ ಹಂಚಿಕೊಂಡಿದ್ದೆ. ನಮ್ಮ ಬೇಡಿಕೆಗಳ ಬಗ್ಗೆ ಸರ್ಕಾರದ ಮುಂದೆ ಆಯೋಗದ ಮುಂದೆ ಹಂಚಿಕೊಂಡಿದ್ದೆ. ಇದೀಗ ಮರುಪರೀಕ್ಷೆ ನಡೆಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಘೋಷಣೆ ಮಾಡಿದ್ದಾರೆ. ಇದೀಗ ನಿರ್ಲಕ್ಷ್ಯ ತೋರಿ ಪ್ರಶ್ನೆ ಪತ್ರಿಕೆ ತಯಾರಿಸಿದ್ದ ಕೆಪಿಎಸ್‌ಸಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇವೆ” ಎಂದು ಕರವೇ ಅಧ್ಯಕ್ಷ ನಾರಾಯಣಗೌಡರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪ್ಯಾರಾಲಿಂಪಿಕ್ಸ್ | ಹೈಜಂಪ್; ಭಾರತಕ್ಕೆ ಬೆಳ್ಳಿ ಗೆದ್ದುಕೊಟ್ಟ ನಿಶಾದ್ ಕುಮಾರ್

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ಕೆಎಎಸ್ ಪರೀಕ್ಷಾರ್ಥಿ ಸಚಿನ್, “ಸುಮಾರು 60 ಪ್ರಶ್ನೆಗಳಲ್ಲಿ ಕನ್ನಡದ ತಪ್ಪು ಬಳಕೆ ಮಾಡಲಾಗಿದೆ. ಕಳೆದ ನಾಲ್ಕೈದು ವರ್ಷದಿಂದ ನಾವು ಕೆಎಎಸ್‌ಗಾಗಿ ಓದುತ್ತಿದ್ದೇನೆ. ನಾನು ಕಲಿತಿದ್ದು ಕನ್ನಡ, ಇಂಗ್ಲಿಷ್ ಬಳಕೆ ಕಡಿಮೆ ಇದೆ. ಇನ್ನು ಸುಮಾರು ವರ್ಷಗಳ ಕಾಲ ಕಷ್ಟಪಟ್ಟು ಓದಿ ಪರೀಕ್ಷೆ ಬರೆಯೋಣ ಎಂದರೆ, ಕೆಪಿಎಸ್‌ಸಿ ಅಧಿಕಾರಿಗಳು ಕನ್ನಡ ಪದಬಳಕೆ ಮಾಡಿರುವುದು ಕಂಡು ನಿಜಕ್ಕೂ ಬೇಜಾರಾಯಿತು. ಈ ರೀತಿ ನಿರ್ಲಕ್ಷ್ಯ ತೋರಿದ ಕೆಪಿಎಸ್‌ಸಿ ಅಧಿಕಾರಿಗಳ ವಿರುದ್ಧ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಈಗ ಸರ್ಕಾರ ಮರುಪರೀಕ್ಷೆ ನಡೆಸಲು ಅನುಮತಿ ನೀಡಿದೆ. ಸರ್ಕಾರ ಈ ಬಾರಿ ಪ್ರಾಮಾಣಿಕವಾಗಿ ಪ್ರಶ್ನೆಪತ್ರಿಕೆಗಳನ್ನು ತಯಾರು ಮಾಡಬೇಕು. ಎರಡು ತಿಂಗಳಿನಲ್ಲಿ ಪರೀಕ್ಷೆ ನಡೆಸಬೇಕು.  ಇಲ್ಲವಾದರೇ, ಉಗ್ರಹೋರಾಟ ಮಾಡಲಾಗುವದು” ಎಂದು ಆಗ್ರಹಿಸಿದ್ದಾರೆ.  

“ಸರ್ಕಾರದ ನಡೆ ಸ್ವಾಗತಾರ್ಹ. ಸರ್ಕಾರ ಈಗಲೇ ಎಚ್ಚೆತ್ತುಕೊಂಡು ಮುಂದಿನ ದಿನಗಳಲ್ಲಿ ಈ ರೀತಿಯಾಗದಂತೆ ನೋಡಿಕೊಳ್ಳಬೇಕು” ಎಂದು ಈ ದಿನ.ಕಾಮ್‌ ಜತೆಗೆ ಮಾತನಾಡಿದ ಕೆಪಿಎಸ್‌ಸಿ ಪರೀಕ್ಷಾರ್ಥಿ ಮೇಘಾ ಹೇಳಿದ್ದಾರೆ.

ಕರವೇ

“ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ” ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

“ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...