ವಿಧಾನಪರಿಷತ್ ಸದಸ್ಯರ ನೇತೃತ್ವದಲ್ಲಿ ‘ಕೆರೆ ಅಧ್ಯಯನ ಸಮಿತಿ’: ಡಿಸಿಎಂ ಡಿ ಕೆ ಶಿವಕುಮಾರ್

Date:

ಬೆಂಗಳೂರು ನಗರದ ಕೆರೆಗಳ ಒತ್ತುವರಿ ಸೇರಿದಂತೆ ಕೆರೆ ಮಾಲಿನ್ಯದ ಬಗ್ಗೆ ಅಧ್ಯಯನ ನಡೆಸಲು ವಿಧಾನಪರಿಷತ್ ಸದಸ್ಯರಾದ ಟಿ.ಎ.ಶರವಣ, ಜವರಾಯಿಗೌಡ ಹಾಗೂ ಗೋಪಿನಾಥ್ ಅವರ ನೇತೃತ್ವದಲ್ಲಿ ಪ್ರತ್ಯೇಕ ಮೂರು ಸಮಿತಿಗಳನ್ನು ಮಾಡುವಂತೆ ಡಿಸಿಎಂ ಡಿ ಕೆ ಶಿವಕುಮಾರ್ ಸೂಚನೆ ನೀಡಿದರು.

ಬನಶಂಕರಿಯಲ್ಲಿರುವ ಬೆಂಗಳೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ 2025-26ನೇ ಸಾಲಿನ ಮೊದಲನೇ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಡಿಸಿಎಂ ಮಾತನಾಡಿದರು.

“ಈ ಸಮಿತಿಯು ನಗರದಾದ್ಯಂತ ಇರುವ ಕೆರೆಗಳ ಒತ್ತುವರಿ, ಕೆರೆಗಳಿಗೆ ಕೊಳಚೆ ನೀರು ಸೇರುತ್ತಿರುವುದು ಸೇರಿದಂತೆ ಇತರೇ ಸಮಸ್ಯೆಗಳ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲಿದೆ.‌ ಕೆರೆಗಳಿಗೆ ಚರಂಡಿ ಕೊಳಚೆ ನೀರು ಬಿಡುತ್ತಿರುವವರು ಯಾರೇ ಆಗಿರಲಿ, ಯಾವುದೇ ಕೈಗಾರಿಕೆಗಳಾಗಲಿ ಯಾರಿಗೂ ಮುಲಾಜು ತೋರಬೇಡಿ.‌ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ. ಕೆರೆಗಳನ್ನು ಈಗಲೇ ಸಂರಕ್ಷಣೆ ಮಾಡದಿದ್ದರೆ ಮುಂದಕ್ಕೆ ಕಷ್ಟವಾಗಲಿದೆ” ಎಂದು ಅಧಿಕಾರಿಗಳಿಗೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮರ್ಪಕ ಆಸ್ತಿ ತೆರಿಗೆ ಏಕೆ ಬರುತ್ತಿಲ್ಲ

“ನಗರ ಇಷ್ಟು ದೊಡ್ಡದಾಗಿ ಬೆಳೆದರೂ ಸಮರ್ಪಕ ಆಸ್ತಿ ತೆರಿಗೆ ಏಕೆ ಬರುತ್ತಿಲ್ಲ? ನಗರದಲ್ಲಿ ಎಷ್ಟು ಬಾಲ್ಯ ವಿವಾಹಗಳು ನಡೆದಿವೆ ಎನ್ನುವ ಮಾಹಿತಿ ಇದೆಯೇ? ಬೆಂಗಳೂರು ನಗರದಲ್ಲಿ ವಿದ್ಯಾವಂತರು, ಬುದ್ಧಿವಂತರು, ಸುಶಿಕ್ಷಿತರು ಇದ್ದಾರೆ. ಬೆಂಗಳೂರು ದಿನೇ ದಿನೇ ಬೆಳೆಯುತ್ತಿದೆ. ಗ್ರೇಟರ್ ಬೆಂಗಳೂರು ಆಗಿ ಮಾರ್ಪಾಡಾಗಿದೆ. ಹೊರವಲಯದ ಪ್ರದೇಶಗಳನ್ನು ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಸೇರಿಸಿಕೊಳ್ಳುವ ಒತ್ತಡವಿದೆ. ನಗರದ ಸೌಲಭ್ಯಗಳನ್ನು ಪಡೆಯಲು ಜನ ಉತ್ಸುಕರಾಗಿದ್ದಾರೆ” ಎಂದು ಹೇಳಿದರು.

ಆಸಕ್ತಿ ಇದ್ದರೆ ನನ್ನ ಜೊತೆ ಕೆಲಸ ಮಾಡಿ

“ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಯಾರ್ಯಾರು ಏನೇನೂ ಮಾಡುತ್ತಿದ್ದಾರೆ ಅನ್ನೋ ಸಂಪೂರ್ಣ ಮಾಹಿತಿ ಇದೆ. ನನಗೇನೂ ಗೊತ್ತಾಗಲ್ಲ ಅನ್ನುವ ಭ್ರಮೆ ಬೇಡ. ಆತ್ಮ ಸ್ಥೈರ್ಯ ಕುಂದಿಸಬಾರದು ಎಂದು ನಿಮ್ಮ ವಿರುದ್ದ ಕ್ರಮ ತೆಗೆದುಕೊಳ್ಳುತ್ತಿಲ್ಲ. ನನ್ನ ಜೊತೆ ಕೆಲಸ ಮಾಡಲು ಆಸಕ್ತಿ ಇದ್ದರೆ ಇರಬಹುದು, ಇಲ್ಲದಿದ್ದರೆ ಬೇರೆ ಕಡೆಗೆ ನೀವು ಹೊರಡಬಹುದು” ಎಂದು ಖಡಕ್ ಎಚ್ಚರಿಕೆ ನೀಡಿದರು.

“ಶೈಕ್ಷಣಿಕ ಕ್ಷೇತ್ರಗಳಿಗೆ ಸಿಎಸ್ ಆರ್ ನಿಧಿಗಳನ್ನು ತರುವ ಬಗ್ಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಯಿ ಸಿಇಓಗಳು ಉದ್ಯಮಿಗಳ ಸಭೆ ಕರೆದು ಚರ್ಚೆ ನಡೆಸಬೇಕು. ವಿದ್ಯಾರ್ಥಿ ನಿಲಯಗಳಲ್ಲಿ ಇರುವ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶ ಉತ್ತಮಗೊಳಿಸಲು ನಿಗಾವಹಿಸಬೇಕು ಹಾಗೂ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದರು.

“ಬೆಂಗಳೂರಿನ ರಸ್ತೆಗಳನ್ನು ಸುಸ್ಥಿತಿಯಲ್ಲಿಡಿ, ಅಗತ್ಯ ಬಿದ್ದ ಕಡೆ ಹೊಸ ರಸ್ತೆ ನಿರ್ಮಾಣ ಮಾಡಿ. ನಗರದ ಪ್ರತಿಯೊಂದು ಶಾಲಾ,‌ ಕಾಲೇಜುಗಳ ಆಡಳಿತ ಮಂಡಳಿ,‌ ಮುಖ್ಯೋಪಾಧ್ಯಾಯರು, ಕುಲಪತಿಗಳ ಸಭೆ ಕರೆದು ಮಾದಕವಸ್ತು ನಿಯಂತ್ರಣದ ಬಗ್ಗೆ ತಿಳಿಸಬೇಕು. ಜೊತೆಗೆ ಶಾಲಾ, ಕಾಲೇಜುಗಳ ಹತ್ತಿರ ಅಂಗಡಿಗಳಲ್ಲಿ ಅಥವಾ ಇತರೇ ರೀತಿಯಲ್ಲಿ ಮಾದಕವಸ್ತುಗಳ ರವಾನೆ ಬಗ್ಗೆ ಅನುಮಾನ ಬಂದರೆ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು” ಎಂದು ಚರ್ಚೆ ನಡೆಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...