ಲಾಲ್‌ಬಾಗ್‌ | ಹೂವಲ್ಲಿ ಅರಳಿದೆ ಅಂಬೇಡ್ಕರ್‌ ಜೀವನಗಾಥೆ

Date:

ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯೋತ್ಸವ ಅಂಗವಾಗಿ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. ಈ ಬಾರಿಯ ಥೀಮ್‌ ಡಾ ಬಿ ಆರ್ ಅಂಬೇಡ್ಕರ್‌. ಪ್ರದರ್ಶನ ಆಗಸ್ಟ್ 19ರವರೆಗೆ ನಡೆಯಲಿದೆ.

ಸ್ವಾತಂತ್ರ್ಯೋತ್ಸವ ಅಂಗವಾಗಿ ಸಸ್ಯಕಾಶಿ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ನಡೆಯುವ ಫಲಪುಷ್ಪ ಪ್ರದರ್ಶನದಲ್ಲಿ ಕಳೆದ ವರ್ಷ ವಿಶ್ವಗುರು ಬಸವಣ್ಣ ಇದ್ರೆ, ಈ ಬಾರಿ ಸಂವಿಧಾನ ಶಿಲ್ಪಿ ಡಾ ಬಿಆರ್‌ ಅಂಬೇಡ್ಕರ್‌ ಇದ್ದಾರೆ. ಪ್ರತಿ ವರ್ಷವೂ ಒಂದೊಂದು ಥೀಮ್‌ ನಡಿ ಪ್ರದರ್ಶನ ವಿನ್ಯಾಸ ಮಾಡುವುದು ರೂಢಿ. ಅಂತೆಯೇ ಈ ಸಲ ಬಾಬಾಸಾಹೇಬ್ ಅಂಬೇಡ್ಕರ್ ಅವರ ಜೀವನ, ಸಾಧನೆ, ದೇಶಕ್ಕೆ ನೀಡಿದ ಕೊಡುಗೆ, ಸಾಮಾಜಿಕ ನ್ಯಾಯದ ಹೋರಾಟ, ಬೌದ್ಧ ಮತ ಸ್ವೀಕಾರ, ಸಂವಿಧಾನ ರಚನಾ ಸಮಿತಿಯಲ್ಲಿ ಪಾತ್ರ, ಸಂವಿಧಾನದ ಆಶಯಗಳು, ಪ್ರಜಾಪ್ರಭುತ್ವ ವ್ಯವಸ್ಥೆ, ಸಂವಿಧಾನದ ಪ್ರತಿರೂಪ ಹೂವುಗಳ ಮೂಲಕ ಅರಳಿದೆ.

LALBAG 1

ಫ್ಲವರ್‌ ಶೋಗಾಗಿಯೇ ತಮಿಳುನಾಡು, ಕೇರಳ, ಅಸ್ಸಾಂ, ಜಮ್ಮು ಮತ್ತು ಕಾಶ್ಮೀರ, ಕೊಲಂಬಿಯಾ, ನೆದರ್‌ಲ್ಯಾಂಡ್‌, ಬೆಲ್ಜಿಯಂ, ಕೀನ್ಯಾ, ಆಸ್ಪ್ರೇಲಿಯಾದಿಂದ ಹೂಗಳನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ವಿವಿಧ ತಳಿಗಳ ಸುಮಾರು 30 ಲಕ್ಷ ಹೂವುಗಳನ್ನು ಈ ಪುಷ್ಪ ಪ್ರದರ್ಶನದಲ್ಲಿ ಬಳಸಲಾಗಿದೆ. ಈ ಬಾರಿಯ ಫ್ಲವರ್‌ ಶೋಗೆ ಒಟ್ಟಾರೆ 60ಕ್ಕೂ ಹೆಚ್ಚು ಬಗೆಯ ಹೂಗಳನ್ನು ಬಳಕೆ ಮಾಡಲಾಗಿದ್ದು, ಇವುಗಳಲ್ಲಿ ಆಂಥೋರಿಯಂ, ಗುಲಾಬಿ, ಜರ್ಬೆರಾ, ಆರ್ಕಿಡ್‌, ರೆಡ್‌ಹಾಟ್‌ ಪೋಕರ್‌, ಆಲ್‌ಸ್ಟೋ ಮೇರಿಯನ್‌ ಲಿಲ್ಲಿ, ಪೂಷಿಯಾ, ಅಗಪಾಂಥಸ್‌, ಸೈಕ್ಲೋಮನ್‌, ಲಿಲ್ಲಿ, ಸುಗಂಧರಾಜ ಸೇರಿದಂತೆ ವಿವಿಧ ಬಗೆಯ ಹೂಗಳು ಇದ್ದು, ಲಾಲ್‌ಬಾಗ್ ಮದುವಣಗಿತ್ತಿಯಂತೆ ಬಗೆ ಬಗೆಯ ಹೂವುಗಳಿಂದ ಸಿಂಗಾರಗೊಂಡಿದೆ. ಗಾಜಿನ ಮನೆಯ ಮುಂಭಾಗ 3.6 ಲಕ್ಷ ಗುಲಾಬಿ ಹೂವು ಹಾಗೂ 2.4 ಲಕ್ಷ ಸೇವಂತಿಗೆ ಹೂಗಳನ್ನು ಪ್ರದರ್ಶನಕ್ಕೆ ಇರಿಸಲಾಗಿದೆ. ಅದರ ಮುಂಭಾಗದಲ್ಲಿ 12 ಅಡಿ ಎತ್ತರದ ಅಂಬೇಡ್ಕರ್‌ ಪ್ರತಿಮೆ ರಾರಾಜಿಸುತ್ತಿದೆ. ಬಿ.ಆರ್‌ ಅಂಬೇಡ್ಕರ್‌ ಅವರ ಜನ್ಮಸ್ಥಳದ ಸ್ಮಾರಕ 3.4 ಲಕ್ಷ ಪುಷ್ಪಗಳಲ್ಲಿ ಕಂಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
LALBAG

ಲಾಲ್‌ ಬಾಗ್‌ ಒಳಗೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದ್ದು, ಪ್ರವಾಸಿಗರು ಕ್ಯಾಮೆರಾಗಳನ್ನು ಕೊಂಡೊಯ್ಯ ಬಹುದಾಗಿದೆ. ಪ್ಲಾಸ್ಟಿಕ್‌ ಬಳಕೆಯನ್ನ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಫಲಪುಷ್ಪ ಪ್ರದರ್ಶನಕ್ಕೆ ವಯಸ್ಕರಿಗೆ ವಾರದ ದಿನಗಳಲ್ಲಿ 80 ರೂ. ಹಾಗೂ ಶನಿವಾರ, ಭಾನುವಾರ ಮತ್ತು ಸರಕಾರಿ ರಜಾ ದಿನಗಳಲ್ಲಿ 100 ರೂಪಾಯಿ ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ. ಸಮವಸ್ತ್ರ ಮತ್ತು ಶಾಲೆಯ ಐಡಿ ಕಾರ್ಡ್‌ ತೋರಿಸುವ ವಿದ್ಯಾರ್ಥಿಗಳಿಗೆ ಫಲಪುಷ್ಪ ಪ್ರದರ್ಶನಕ್ಕೆ ಉಚಿತ ಪ್ರವೇಶ ಇದೆ. ಲಾಲ್‌ ಬಾಗ್‌ ನ ಎಲ್ಲಾ 4 ಪ್ರವೇಶ ದ್ವಾರಗಳಲ್ಲಿ ಮೆಟಲ್‌ ಡಿಟೆಕ್ಟರ್‌ ಗಳನ್ನು ಅಳವಡಿಸಲಾಗಿದ್ದು, ಲಾಲ್‌ ಬಾಗ್‌ ಮತ್ತು ಗಾಜಿನಮನೆಯಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಆಗಸ್ಟ್‌ 8 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರದರ್ಶನಕ್ಕೆ ಚಾಲನೆ ನೀಡಿದ್ದರು. ಬಿ ಆರ್‌ ಅಂಬೇಡ್ಕರ್‌ ಅವರ ಮೊಮ್ಮಗ ಡಾ. ಭೀಮರಾವ್‌ ಯಶವಂತ ಅಂಬೇಡ್ಕರ್‌ ಕೂಡಾ ಪ್ರದರ್ಶನವನ್ನು ವೀಕ್ಷಿಸಿ, ಮೆಚ್ಚುಗೆಯ ಮಾತುಗಳನ್ನಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...