‘ಬ್ರ್ಯಾಂಡ್‌ ಬೆಂಗಳೂರ್’ಗೆ ಮುನ್ನ ಡಿಸಿಎಂ ನಮ್ಮೊಂದಿಗೆ ಪಾದಯಾತ್ರೆ ಮಾಡಲಿ: ಎಎಪಿ ಸವಾಲು

Date:

ಐಷಾರಾಮಿ ಹೋಟೆಲ್‌ಗಳಲ್ಲಿ ಕೂತು ‘ಬ್ರ್ಯಾಂಡ್‌ ಬೆಂಗಳೂರು’ ಮಾಡುವುದಾಗಿ ಪ್ರಚಾರ ಮಾಡುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ನಗರದ ಪಾದಚಾರಿ ಮಾರ್ಗಗಳೆಲ್ಲವೂ ಯಮಪಾಶವಾಗಿ ಪರಿಣಮಿಸಿರುವುದು ಗೊತ್ತಿದೆಯೇ? ಗುಂಡಿಬಿದ್ದ ರಸ್ತೆಗಳು, ಬೀದಿದೀಪಗಳಿಲ್ಲದ ಬೀದಿಗಳ ಬಗ್ಗೆ ಅರಿವಿದೆಯೇ? ಪ್ರತಿನಿತ್ಯ ನಾಗರಿಕರ ಸಾವು-ನೋವುಗಳಿಗೆ ಕಾರಣವಾಗಿರುವ ಇಂತಹ ಲೋಪಗಳನ್ನು ನಗರದುದ್ದಕ್ಕೂ ನಾವು ತೋರಿಸಿಕೊಡುತ್ತೇವೆ. ಡಿ.ಕೆ.ಶಿವಕುಮಾರ್‌ ಅವರೇ ನಿಮಗೆ ಧೈರ್ಯವಿದ್ದಲ್ಲಿ ನಮ್ಮ ಜೊತೆ ಪಾದಯಾತ್ರೆ ಮಾಡಿ. ನಾಗರಿಕರ ಜೀವ ಬಲಿಪಡೆಯಲು ಕಾದಿರುವ ಯಮಸದೃಶ ಜಾಗಗಳನ್ನು ನಾವು ತೋರಿಸುತ್ತೇವೆ ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಸವಾಲು ಹಾಕಿದರು.

ಹೋಪ್‌ ಫಾರ್ಮ್‌ ಜಂಕ್ಷನ್‌ ಬಳಿಯ ಪಾದಚಾರಿ ಮಾರ್ಗದಲ್ಲಿ ಕಂಬದಿಂದ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ತಾಯಿ-ಮಗು ಮೃತಪಟ್ಟಿದ್ದು ಅತ್ಯಂತ ದುಃಖಕರ ಸಂಗತಿಯಾಗಿದೆ. ಬೆಸ್ಕಾಂನ ನಿರ್ಲಕ್ಷ್ಯವೇ ಅವಘಡಕ್ಕೆ ಕಾರಣ. ಬೆಂಗಳೂರು ನಗರದ ಉಸ್ತುವಾರಿ ಹೊತ್ತಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಕ್ಷಣ ವೈಫಲ್ಯದ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಮೋಹನ್ ದಾಸರಿ ಒತ್ತಾಯಿಸಿದರು.

“ಕಳೆದ 5 ವರ್ಷದಲ್ಲಿ ಬೆಸ್ಕಾಂ ನಿರ್ಲಕ್ಷ್ಯಕ್ಕೆ 81 ಜನರಿಗೆ ವಿದ್ಯುತ್​ ತಂತಿ ತಗುಲಿದ್ದು, ಇದರಲ್ಲಿ ಒಟ್ಟು 70 ಜನ ಮೃತಪಟ್ಟಿದ್ದಾರೆ. ಈ ವರ್ಷ ಬೆಸ್ಕಾಂ ವಿದ್ಯುತ್‌ ತಂತಿ ಅವಘಡದಿಂದ 8 ಮಂದಿ ಮೃತಪಟ್ಟಿದ್ದಾರೆ. ಕಳೆದ ವರ್ಷ ಒಟ್ಟು 21 ಜನರಿಗೆ ಬೆಸ್ಕಾಂ ವಿದ್ಯುತ್​ ತಂತಿ ತಗುಲಿತ್ತು. ಈ ಪೈಕಿ 19 ಜನ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದರು. ಅಧಿಕಾರಿಗಳ ಬೇಜವಾಬ್ದಾರಿಗಳಿಂದ ಸಂಭವಿಸುತ್ತಿರುವ ಸಾವು-ನೋವುಗಳು ಅಮಾನವೀಯವಾಗಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿರಂತರವಾಗಿ ಇಂತಹ ದುರಂತಗಳು ನಡೆಯುತ್ತಿದ್ದರೂ ಅಧಿಕಾರದಲ್ಲಿರುವವರು ಮೃತಪಟ್ಟ ದುರ್ದೈವಿಗಳ ಕುಟುಂಬ ಸದಸ್ಯರಿಗೆ ₹5 ಲಕ್ಷ ಪರಿಹಾರವನ್ನು ಕೊಟ್ಟು ಕೈ ತೊಳೆದುಕೊಳ್ಳುತ್ತಿದ್ದಾರೆ. ಮುಂದೆಂದೂ ಇಂತಹ ಘಟನೆ ನಡೆಯದಿರುವಂತೆ ಯಾವುದೇ ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳದಿರುವುದು ಖಂಡನಾರ್ಹ. ಒಂದು ಜೀವಕ್ಕೆ ₹5 ಲಕ್ಷ ಬೆಲೆಕಟ್ಟುತ್ತಿರುವುದು ಅತ್ಯಂತ ಅಮಾನವೀಯ ನಡೆಯಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೆಳಕಾದ ‘ಬೆಂಗಳೂರು ವಿಶ್ವವಿದ್ಯಾಲಯ’ಕ್ಕೇ ಇಲ್ಲ ಬೆಳಕು

“ಇಂತಹ ದುರ್ಘಟನೆ ಮೂಲಕ ಯಾವ ಸಂದೇಶ ಹೋಗುತ್ತಿದೆ? ನವೆಂಬರ್‌ 29ರಿಂದ 3 ದಿನಗಳ ಕಾಲ ಅಂತಾರಾಷ್ಟ್ರೀಯ ಹೂಡಿಕೆದಾರರನ್ನು ಸೆಳೆಯುವ ಬೆಂಗಳೂರು ಟೆಕ್‌ ಸಮ್ಮಿಟ್‌ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ರಸ್ತೆ ಬದಿ ನಡೆದು ಹೋಗುತ್ತಿರುವ ಮಂದಿ ಇದ್ದಕ್ಕಿದ್ದಂತೆ ಜೀವಂತವಾಗಿ ಸುಟ್ಟು ಹೋಗುತ್ತಾರೆ ಎಂದಾದರೆ ಯಾರು ತಾನೆ ಹೂಡಿಕೆ ಮಾಡಲು ಮುಂದೆ ಬರುತ್ತಾರೆ? ನಗರ ಬೀದಿಯಲ್ಲಿ ಓಡಾಡುವ ಪ್ರತಿಯೊಬ್ಬನು ಎಲ್ಲಿ ವಿದ್ಯುತ್‌ ತಂತಿ ತಲೆ ಮೇಲೆ ಬೀಳುತ್ತದೆ? ಎಲ್ಲಿ ಪಾದಚಾರಿ ರಸ್ತೆ ಕುಸಿದು ಚರಂಡಿ ಒಳಗೆ ಹೋಗುತ್ತೇವೆ, ಎಲ್ಲಿ ಒಣಗಿದ ಮರದ ಕೊಂಬೆ ಬೀಳುತ್ತದೆ, ಎಲ್ಲಿ ತುಂಡಾಗಿ ಬಿದ್ದ ವಿದ್ಯುತ್‌ ತಂತಿಯನ್ನು ತುಳಿದು ಸಾವನ್ನಪ್ಪುತ್ತೇವೆ ಎಂಬ ಭಯದಲ್ಲೇ ದಿನನಿತ್ಯವೂ ಓಡಾಡಬೇಕಾದ ದುಸ್ಥಿತಿ ಬಂದೊದಗಿದೆ” ಎಂದು ಮೋಹನ್ ದಾಸರಿ ಕಳವಳ ವ್ಯಕ್ತಪಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...