ನೆಪ ಹೇಳಿ ಸಾಮೂಹಿಕವಾಗಿ ಸರ್ಕಾರಿ ಶಾಲೆ ಮುಚ್ಚುವ ಪ್ರಕ್ರಿಯೆ ನಿಲ್ಲಲಿ

Date:

“ಶಾಲೆಗಳಲ್ಲಿ ಮಕ್ಕಳು ಮತ್ತು ಕಲಿಕೆಯೇ ಕೇಂದ್ರಬಿಂದು. ಮಕ್ಕಳಿಗೆ ಶಿಕ್ಷಣದ ಮೂಲಭೂತ ಹಕ್ಕಿನ ಭಾಗವಾಗಿ ನೀಡಬೇಕಾದ ಹಲವು ಉತ್ತೇಜಕಗಳು, ಅಗತ್ಯ ಮೂಲಸೌಕರ್ಯಗಳು ಹಾಗೂ ಪಾಠ ಮಾಡಲು ಅರ್ಹ ಶಿಕ್ಷಕರನ್ನು ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಬೇಕು. ಮುಖ್ಯವಾಗಿ ಯಾವುದೇ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಸಾಮೂಹಿಕವಾಗಿ ಮುಚ್ಚುವ ಅಥವಾ ವಿಲೀನಗೊಳಿಸುವ ಪ್ರಕ್ರಿಯೆ ಪೂರ್ಣವಾಗಿ ನಿಲ್ಲಬೇಕು” ಎಂದು ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಹೇಳಿದೆ.

“ಶಾಲೆ ಪ್ರಾರಂಭವಾಗಿ ತಿಂಗಳುಗಳೇ ಕಳೆದು ಹೋದರೂ, ಇನ್ನೂ ಮಕ್ಕಳ ಕೈಗೆ ಪಠ್ಯಪುಸ್ತಕ ಸೇರಿಲ್ಲ. ಸಮವಸ್ತ್ರ, ಶೂ, ಸಾಕ್ಸ್ ಸಕಾಲಕ್ಕೆ ದೊರೆತಿಲ್ಲ. ಎಂಟರಿಂದ ಒಂಭತ್ತನೇ ತರಗತಿಗೆ ಹೋಗುತ್ತಿರುವ ಮಕ್ಕಳಿಗೆ ಕಳೆದ ಮೂರು ವರ್ಷದಿಂದ ಉಚಿತ ಬೈಸಿಕಲ್ ಸಿಕ್ಕಿಲ್ಲ” ಎಂದು ವೇದಿಕೆ ತಿಳಿಸಿದೆ.

“ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದ ಸದನದಲ್ಲಿ ಸ್ಥಗಿತಗೊಂಡಿರುವ ಯೋಜನೆಯನ್ನು ಪುನರಾರಂಭಿಸಲಾಗುವುದು. ಮಕ್ಕಳಿಗೆ ಮುಂದಿನ ವರ್ಷದಿಂದ ಬೈಸಿಕಲ್ ನೀಡುವುದಾಗಿ ಭರವಸೆ ನೀಡಿದ್ದಾರೆ. ಇದು ಸ್ವಾಗತಾರ್ಹ. ಇದರ ಜತೆಗೆ, ಮಕ್ಕಳಿಗೆ ಉಳಿದ ಉತ್ತೇಜಕಗಳು ಸಕಾಲಕ್ಕೆ ದೊರೆಯುವಂತೆ ಕ್ರಮವಹಿಸುವುದು ಕೂಡ ಆದ್ಯತೆಯ ವಿಷಯವಾಗಬೇಕು” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಚಿವರು ಮಕ್ಕಳ ಕಲಿಕೆಗೆ ಪೂರಕವಾಗಿರುವ ವಿಷಯಗಳ ಬಗ್ಗೆ ಆದ್ಯತೆಯ ಮೇಲೆ ಗಮನ ಹರಿಸಿ, ಮುಂದಿನ ಶೈಕ್ಷಣಿಕ ವರ್ಷ 2024-25 ರಿಂದಲಾದರೂ ಎಲ್ಲ ಉತ್ತೇಜಕಗಳನ್ನು ಶೈಕ್ಷಣಿಕ ವರ್ಷದ ಪ್ರಾರಂಭದಿಂದಲೇ ಒದಗಿಸಬೇಕು” ಎಂದು ವೇದಿಕೆ ಒತ್ತಾಯಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅತ್ಯಾಚಾರ ಆರೋಪಿಯನ್ನು ದುಬೈನಲ್ಲಿ ಸೆರೆಹಿಡಿದ ಪೊಲೀಸರು

ಹಕ್ಕೊತ್ತಾಯಗಳು

  1. ಎಲ್ಲ ಮಕ್ಕಳಿಗೆ ಪರಿಷ್ಕೃತ ಪಠ್ಯಪುಸ್ತಕ ಮತ್ತು ನೋಟ್ ಪುಸ್ತಕ, 2 ಜತೆ ಸಮವಸ್ತ್ರ ಮತ್ತು 2 ಜತೆ ಷೂ ಹಾಗೂ ಸಾಕ್ಸ್ ವಿತರಣೆ ಮಾಡಬೇಕು.
  2. ಶೈಕ್ಷಣಿಕ ವರ್ಷದ ಪ್ರಾರಂಭದಲ್ಲಿ ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿ ಮಾಡಬೇಕು. ವಿಳಂಬವಾದಲ್ಲಿ ಶಾಲೆ ಪ್ರಾರಂಭದಲ್ಲಿಯೇ ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಬೇಕು.
  3. ಏಕೋಪಾಧ್ಯಾಯ / ಶೂನ್ಯ ಶಿಕ್ಷಕರಿರುವ ಶಾಲೆಗಳಿಗೆ ಕೂಡಲೇ ಖಾಯಂ ಶಿಕ್ಷಕರ ನೇಮಕ ಮಾಡಬೇಕು. ಖಾಯಂ ಶಿಕ್ಷಕರನ್ನು ಅತ್ಯಗತ್ಯವಿರುವ ಗ್ರಾಮೀಣ ಪ್ರದೇಶಗಳಿಗೆ ನಿಯೋಜನೆ ಮಾಡಬೇಕು.
  4. ಪ್ರೌಢ ಶಿಕ್ಷಣ ಮುಂದುವರಿಸಲು ಏಳನೇ ತರಗತಿಯಿಂದ ಎಂಟು ಅಥವಾ ಎಂಟರಿಂದ ಒಂಭತ್ತನೇ ತರಗತಿಗೆ ಹೋಗುತ್ತಿರುವ ಮಕ್ಕಳಿಗೆ ಉಚಿತ ಬೈಸಿಕಲ್ ನೀಡಬೇಕು.
  5. ಯಾವುದೇ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಸಾಮೂಹಿಕವಾಗಿ ಮುಚ್ಚುವ/ ವಿಲೀನಗೊಳಿಸುವ ಪ್ರಕ್ರಿಯೆ ಪೂರ್ಣವಾಗಿ ನಿಲ್ಲಬೇಕು.
  6. ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವ ಭಾಗವಾಗಿ ಮಧ್ಯಾಹ್ನದ ಬಿಸಿಯೂಟದ ವೆಚ್ಚಕ್ಕೆ ಈಗಿರುವ ಪ್ರತಿ ಮಗುವಿನ ಯುನಿಟ್ ವೆಚ್ಚವನ್ನು ಹೆಚ್ಚಿಸಬೇಕು.
  7. ಈ ಶೈಕ್ಷಣಿಕ ವರ್ಷದ ಕೊನೆಯಲ್ಲಿ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಸ್ಥಿತಿಗತಿ ಅರಿಯಲು ಸಿ ಆರ್ ಪಿ, ಶಿಕ್ಷಣ ಸಂಯೋಜಕರು, ಬಿಆರ್‌ಸಿ, ಬಿಆರ್‌ಪಿ, ಬಿಇಒ, ಡಿಡಿಪಿಐ ಮತ್ತು ಡಯಟ್ ಸಿಬ್ಬಂದಿ ಶಾಲೆಗಳಿಗೆ ಭೇಟಿ ನೀಡಿ ವಿವರವಾದ ವರದಿ ಸಲ್ಲಿಸಲು ಕ್ರಮ ವಹಿಸಬೇಕು.
  8. ಸಂವಿಧಾನದಲ್ಲಿನ ಮೂಲಭೂತ ಹಕ್ಕಾಗಿರುವ 21ಎ ಅನ್ನು ಕೊಡಮಾಡುವ ಶಿಕ್ಷಣ ಹಕ್ಕು ಕಾಯಿದೆಯನ್ನು ಸಮರ್ಪಕವಾಗಿ, ಪರಿಣಾಮಕಾರಿಯಾಗಿ ಜಾರಿಗೊಳಿಸಲು ಹಾಗೂ ನಿಗದಿತ ಸಮಯದಲ್ಲಿ ಎಲ್ಲ ಮೂಲಭೂತ ಸೌಕರ್ಯ ಒದಗಿಸಲು ಸರ್ಕಾರ ಕಾಲಮಿತಿ ಯೋಜನೆ ರೂಪಿಸಬೇಕು.
  9. ಶಾಲಾ ಹಂತದಲ್ಲಿ ಸಂವಿಧಾನ ಬದ್ಧವಾಗಿ ಕಾರ್ಯನಿರ್ವಹಿಸುತ್ತಿರುವ ಶಾಲಾ ಅಭಿವೃದ್ಧಿ ಮತ್ತು ಮೇಲು ಉಸ್ತುವಾರಿ ಸಮಿತಿಗಳನ್ನು ಪ್ರಜಾಸತ್ತಾತ್ಮಕವಾಗಿ ರಚಿಸಿ ಬಲವರ್ಧನೆಗೊಳಿಸಲು ಪರಿಣಾಮಕಾರಿ ತರಬೇತಿ ಒದಗಿಸಲು ಕ್ರಮ.
  10. ಬಾಲ್ಯಪೂರ್ವ ಆರೈಕೆ ಮತ್ತು ಶಿಕ್ಷಣವೂ ಒಳಗೊಂಡಂತೆ ಕನಿಷ್ಠ 12ನೆಯ ತರಗತಿಯವರೆಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ವಿಸ್ತರಿಸಲು ಸಂವಿಧಾನ ಹಾಗೂ ಶಿಕ್ಷಣಹಕ್ಕು ಕಾಯಿದೆಗೆ ಅಗತ್ಯ ತಿದ್ದುಪಡಿ ತರಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...