ಲೈಫ್ ಟೈಂ ಟ್ಯಾಕ್ಸ್‌ | ಸರ್ಕಾರದ ವಿರುದ್ಧ ಸಿಡಿದೆದ್ದ ಗೂಡ್ಸ್‌ ವಾಹನ ಮಾಲೀಕರು; ಸೆ. 1ರಂದು ಪ್ರತಿಭಟನೆ

Date:

ರಾಜ್ಯ ಸರ್ಕಾರ ಗೂಡ್ಸ್ ವಾಹನಗಳ ತೆರಿಗೆ ಮೊತ್ತವನ್ನು ಅಧಿಕಗೊಳಿಸಿದ್ದು, ಲೈಫ್ ಟೈಂ ಟ್ಯಾಕ್ಸ್‌ ಪಾವತಿಗೆ ಜುಲೈ 28ರಂದು ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿತ್ತು. ಇದೀಗ, ಈ ಕಾಯ್ದೆ ಗೂಡ್ಸ್‌ ವಾಹನ ಮಾಲೀಕರಿಗೆ ಹೊರೆಯಾಗಿ ಪರಿಣಮಿಸಿದ್ದು, ಈ ಕಾಯ್ದೆಯನ್ನು ಕೂಡಲೇ ಹಿಂಪಡೆಯುವಂತೆ ಗೂಡ್ಸ್ ವಾಹನ ಮಾಲೀಕರು ಸೆ. 1ರಂದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ.

ಆ. 31 ರಂದು ಶಾಂತಿನಗರ ರಸ್ತೆಯುದ್ದಕ್ಕೂ 250ಕ್ಕೂ ಹೆಚ್ಚು ಎಂಜಿವಿ (ಮೀಡಿಯಂ ಗೂಡ್ಸ್ ವೆಹಿಕಲ್) ಗೂಡ್ಸ್ ವಾಹನ ನಿಲ್ಲಿಸಲಾಗಿದೆ. ನಿಲ್ದಾಣದ ಬಳಿಯ ಬಿಟಿಎಸ್ ರೋಡ್ ಬ್ಲಾಕ್ ಮಾಡಲಾಗಿದೆ. ಪ್ರತಿಭಟನಾನಿರತರು ಈ ವೇಳೆ ಶಾಂತಿನಗರ ಆರ್​ಟಿಒ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ.

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ಲಾರಿ ಅಸೋಸಿಯೇಷನ್ ಅಧ್ಯಕ್ಷ ಶಣ್ಮುಗಪ್ಪ, “ಸರ್ಕಾರ ಕೂಡಲೇ ಆದೇಶವನ್ನು ಹಿಂಪಡೆಯದೇ ಇದ್ದರೆ, ಸೆ.1 ರಂದು ಬೆಂಗಳೂರಿನಾದ್ಯಂತ ಎರಡೂವರೆ ಸಾವಿರ ಎಂಜಿವಿ ಗೂಡ್ಸ್‌ ವಾಹನ ನಿಲ್ಲಿಸಿ ಬೃಹತ್ ಪ್ರತಿಭಟನೆ ಮಾಡುತ್ತೇವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2 ಸಾವಿರದಿಂದ ಲೈಫ್ ಟ್ಯಾಕ್ಸ್‌ 70 ಸಾವಿರ ಮಾಡಿದ್ದಾರೆ. ನಮಗೆ ಈ ಟ್ಯಾಕ್ಸ್‌ ಕಟ್ಟಲು ಆಗಲ್ಲ. ಇದು ನಮ್ಮ ಮೇಲೆ ಹೆಚ್ಚಿನ ಹೊರೆ ಬೀಳುತ್ತದೆ. ಸರ್ಕಾರ ಕಳೆದ ಜುಲೈ 28ರಂದು ಅಧಿಸೂಚನೆ ಹೊರಡಿಸಿದೆ. ಟ್ಯಾಕ್ಸ್‌ ಪಾವತಿಗೆ ಇವತ್ತು ಕಡೆಯ ದಿನ. ರಾಜ್ಯಾದ್ಯಂತ 28 ಸಾವಿರ ಲಾರಿಗಳಿದ್ದು, ಬೆಂಗಳೂರಿನಲ್ಲಿ 13 ಸಾವಿರ ಲಾರಿಗಳಿವೆ” ಎಂದು ಹೇಳಿದರು.

“ಬೇರೆ ರಾಜ್ಯಗಳಲ್ಲಿ ಇಲ್ಲದ ಕಾಯ್ದೆ ನಮ್ಮ ರಾಜ್ಯದಲ್ಲಿ ಏಕೆ ಜಾರಿಗೆ ತಂದಿದ್ದಾರೆ. ಸೆ.1 ರಂದು ರಾಜ್ಯಾದ್ಯಂತ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಮಾಡುತ್ತೇವೆ. ಇದರಿಂದ ಲಾ ಅಂಡ್ ಆರ್ಡರ್‌ಗೆ ತೊಂದರೆ ಆದರೆ ಅದಕ್ಕೆ ನಾವು ಹೊಣೆಯಲ್ಲ” ಎಂದರು.

ತ್ರೈಮಾಸಿಕ ತೆರಿಗೆ ಪಾವತಿ ಬದಲಾಗಿ ವಾಹನ ನೋಂದಣಿ ವೇಳೆ ಲೈಫ್​ ಟೈಂ (ಏಕ ಕಾಲಿಕ) ಪಾವತಿ ಮಾಡಲು ರಾಜ್ಯ ಸರ್ಕಾರ ಜುಲೈ 28ರಂದು ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಆ.1ರಿಂದಲೇ ಲೈಫ್ ಟೈಮ್ ರೋಡ್ ಟ್ಯಾಕ್ಸ್ ಕಾಯ್ದೆ ಜಾರಿಗೊಳಿಸಿದೆ.

ಈ ಸುದ್ದಿ ಓದಿದ್ದೀರಾ? ಡ್ರಗ್ಸ್‌ ಹಾವಳಿ ತಡೆಗಟ್ಟಲು ವಿದ್ಯಾರ್ಥಿಗಳ ಪಡೆ ನಿರ್ಮಾಣ ಮಾಡಿದ ಬೆಂಗಳೂರು ಪೊಲೀಸರು

ಈ ಹಿಂದೆ ಹಳದಿ ಫಲಕದ ಎಲ್​ಜಿವಿ, ಎಂಜಿವಿ ವಾಹನಗಳ ಮಾಲೀಕರು ಮೂರು ತಿಂಗಳಿಗೊಮ್ಮೆ ₹2,000 ಟ್ಯಾಕ್ಸ್ ಕಟ್ಟುತಿದ್ದರು. ಈ ಕಾಯ್ದೆಯನ್ನು ಸರ್ಕಾರ ಬದಲಾವಣೆ ಮಾಡಿದೆ. ಕಳೆದ ಬಜೆಟ್ ಅಧಿವೇಶನದಲ್ಲಿ ಕರ್ನಾಟಕ ಮೋಟಾರು ವಾಹನಗಳ ಕಾಯ್ದೆ ತಿದ್ದುಪಡಿ ಮಾಡಲಾಗಿತ್ತು.

ಎರಡು ಮೂರು ಲಾರಿ ಹೊಂದಿರುವ ಮಾಲೀಕರಿಗೆ ಏಕಕಾಲಕ್ಕೆ ಭಾರೀ ಮೊತ್ತದ ತೆರಿಗೆ ಕಟ್ಟುವುದು ಕಷ್ಟವಾಗಿದೆ. ಈ ನೂತನ ಕಾಯ್ದೆಯಿಂದ ಗೂಡ್ಸ್‌ ವಾಹನ ಮಾಲೀಕರು ಕಂಗಾಲಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...