ಮಹಾಧರಣಿ | ಕೃಷಿ ಉತ್ಪನ್ನಕ್ಕೆ ಖರ್ಚಿಗಿಂತ 50% ಆದಾಯ ಕೊಡುತ್ತೇವೆ ಎಂದಿದ್ದವರು ಉಲ್ಟಾ ಹೊಡೆದಿದ್ದಾರೆ: ವಿಜು ಕೃಷ್ಣನ್

Date:

2014ರ ಸಾರ್ವತ್ರಿಕ ಚುನಾವಣೆ ವೇಳೆ ಬಿಜೆಪಿಗರು ಉತ್ಪಾದನೆ ಖರ್ಚಿಗಿಂತ 50% ಹೆಚ್ಚು ಅದಾಯ ಬರುವಂತೆ ಬೆಂಬಲ ಬೆಲೆ ನೀಡುತ್ತೇವೆ ಎಂದಿದ್ದರು. ಆದರೆ, ಈಗ ಉಲ್ಟಾ ಹೊಡೆಯುತ್ತಿದ್ದಾರೆ. ರೈತ, ದಲಿತ, ಕಾರ್ಮಿಕ, ಯುವಜನ ವಿರೋಧಿ ನೀತಿಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಎಂದು ರೈತ ಹೋರಾಟಗಾರ ಡಾ. ವಿಜು ಕೃಷ್ಣನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ ಮಹಾಧರಣಿಯಲ್ಲಿ ಅವರು ಮಾತನಾಡಿದರು. “2014ರಲ್ಲಿ ಚುನಾವಣೆ ಬಂದಾಗ ಹಲವಾರು ಭರವಸೆಗಳನ್ನು ಬಿಜೆಪಿ ನೀಡಿತ್ತು. ಆ ಮೂಲಕ ಅಧಿಕಾರಕ್ಕೆ ಬಂದಿತು. ರೈತರು, ಯುವಜನರು ಹಾಘೂ ಮಹಿಳೆಯರಿಗೆ ‘ಅಚ್ಛೇ ದಿನ್’ ಬರುತ್ತದೆ ಎಂದಿದ್ದರು. ಆದರೆ, ಯಾರಿಗೆ ಅಚ್ಛೇ ದಿನ್ ಬಂದಿದೆ. ರೈತರು, ಯುವಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ” ಎಂದು ಕಿಡಿಕಾರಿದರು.

“ಉತ್ಪಾದನೆ ಖರ್ಚಿಗಿಂತ 50% ಹೆಚ್ಚು ಅದಾಯ ಬರುವಂತೆ ಬೆಂಬಲ ಬೆಲೆ ನೀಡುತ್ತೇವೆ ಎಂದಿದ್ದರು. ಆದರೆ, ಈಗ ಕೃಷಿ ಮಂತ್ರಿಯನ್ನ ಕೇಳಿದರೆ, ‘ಚುನಾವಣಾ ಸಮಯದಲ್ಲಿ ಎಲ್ಲ ರಾಜಕೀಯ ಪಕ್ಷಗಳು ಭರವಸೆ ನೀಡುತ್ತವೆ. ಅದೆಲ್ಲವನ್ನೂ ಅನುಷ್ಠಾನಕ್ಕೆ ತರಲು ಸಾಧ್ಯವಿಲ್ಲ’ ಎಂದು ಈಗ ಅವರು ಹೇಳುತ್ತಿದ್ದಾರೆ. ರೈತರ ಭೂಮಿಯನ್ನು ಕಸಿದುಕೊಳ್ಳುವ ನೀತಿಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದರು. ಅದರ ವಿರುದ್ಧ ದಲಿತ, ಕಾರ್ಮಿಕರ, ರೈತರು ಐಕ್ಯ ಹೋರಾಟ ನಡೆಸಿದರು. ಹೀಗಾಗಿ, ಸಂಸತ್ತಿನಲ್ಲಿ ಆ ಮಸೂದೆಯನ್ನು ಹಿಂಪಡೆದುಕೊಂಡರು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೊರೊನಾ ಸಮಯದಲ್ಲಿ ರೈತ ವಿರೋಧಿ ನೀತಿಗಳನ್ನು ಜಾರಿಗೆ ತಂದರು. ಅವುಗಳ ವಿರುದ್ಧ ಸಾಂಕ್ರಾಮಿಕ ರೋಗಕ್ಕೂ ಹೆದರದೆ, ರೈತರು ಹೋರಾಟ ನಡೆಸಿದರು. ಸಂಯುಕ್ತ ಕಿಸಾನ್ ಮೂರ್ಚಾ, ‘ಗ್ರಾಮೀಣ್ ಭಾರತ್ ಬಂದ್’ಗೆ ಕರೆಕೊಟ್ಟು, ದೆಹಲಿ ಗಡಿಯಲ್ಲಿ ಒಂದು ವರ್ಷದ ಕಾಲ ಹೋರಾಟ ನಡೆಸಿದರು. ಆ ಹೋರಾಟ ಗೆದ್ದಿತು. ಅದಕ್ಕೆ ಕಾರಣ, ಎಲ್ಲರ ಐಕ್ಯತೆ. ಈ ಐಕ್ಯತೆಯನ್ನ ಎಲ್ಲರೂ ಮುಂದೆ ಕೊಂಡೊಯ್ಯಬೇಕು” ಎಂದರು.

“ನರಗುಂದ, ನವಲಗುಂದ ರೈತ ಹುತಾತ್ಮರ ಭೂಮಿ. ರಾಜ್ಯದ ರೈತರು, ದಲಿತರು, ಆದಿವಾಸಿಗಳು ಹೋರಾಟದ ಐಕ್ಯತೆಯಲ್ಲಿ ಇಡೀ ದೇಶದಲ್ಲೇ ಎರಡು ಹೆಜ್ಜೆ ಮುಂದಿದ್ದಾರೆ. ಎಲ್ಲೆಡೆ, ಇನ್ನೂ ಎಲ್ಲರನ್ನೂ ಒಗ್ಗೂಡಿಸಲು ಪ್ರಯತ್ನಿಸಲಾಗುತ್ತಿದೆ. ಇಲ್ಲಿ, ಎಲ್ಲರೂ ಒಗ್ಗೂಡಿ ಹೋರಾಟ ನಡೆಸುತ್ತಿದ್ದಾರೆ” ಎಂದರು.

“ಪ್ರಸ್ತುತ ಐದು ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ. ಅಲ್ಲಿ, ಮೋದಿ ಅವರ ಹೆಸರಿನಲ್ಲಿ ಭರವಸೆ ನೀಡಲಾಗುತ್ತಿದೆ. ಅವರು ರಾಜಸ್ಥಾನದಲ್ಲಿ 450 ರೂ.ಗೆ ಅಡುಗೆ ಅನಿಲ ನೀಡುತ್ತೇವೆಂದು ಹೇಳುತ್ತಿದ್ದಾರೆ. ಆದರೆ, ಮೋದಿ ಅವರು ಅಧಿಕಾರಕ್ಕೆ ಬರುವ ಮುನ್ನ 380 ರೂ. ಇದ್ದ ಸಿಲಿಂಡರ್ ಬೆಲೆ, ಈಗ 1250 ರೂ. ದಾಟಿದೆ. ಈಗ ಅವರು ಸುಳ್ಳು ಭರವಸೆಗಳನ್ನ ನೀಡುತ್ತಿದ್ದಾರೆ” ಎಂದು ಆರೋಪಿಸಿದರು.

“ಇನ್ಫೋಸಿಸ್ ನಾರಾಯಣ ಮೂರ್ತಿ ಅವರು ಹೇಳುತ್ತಿದ್ದಾರೆ – ಕಾರ್ಮಿಕರು 72 ಗಂಟೆ ಕೆಲಸ ಮಾಡಬೇಕು ಅಂತ. ಆ ನೀತಿಯನ್ನು ಬಿಜೆಪಿ ಸರ್ಕಾರ ಜಾರಿಗೆ ತಂದಿದೆ. ಆದರೆ, ಈಗ ಅಧಿಕಾರದಲ್ಲಿರುವ ಕಾಂಗ್ರೆಸ್‌ ಕೂಡ ಆ ನೀತಿಯನ್ನು ಹಿಂಪಡೆದುಕೊಂಡಿಲ್ಲ. ತಮಿಳುನಾಡಿನಲ್ಲಿ ಈ ನೀತಿಯ ವಿರುದ್ಧ ಹೋರಾಟಗಳು ನಡೆದವು. ಅಲ್ಲಿನ ಸರ್ಕಾರ ಕಾರ್ಮಿಕ ವಿರೋಧಿ ನೀತಿಯನ್ನು ಹಿಂಪಡೆದುಕೊಂಡಿತು. ಆದರೆ, ರಾಜ್ಯದಲ್ಲಿ ಇನ್ನೂ ಆ ನೀತಿ ಹಾಗೆಯೇ ಉಳಿದಿದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...