ಮಹಾಧರಣಿ | ಎರಡನೇ ಸ್ವಾತಂತ್ರ್ಯ ಹೋರಾಟ ಕಟ್ಟಬೇಕಿದೆ: ಎಸ್‌.ಆರ್ ಹಿರೇಮಠ್

Date:

ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ‘ಪೂರ್ಣ ಸ್ವರಾಜ್ಯ’ ಎಂಬ ಪ್ರತಿಜ್ಞೆಯನ್ನು ಘೋಷಿಸಿದ್ದರು. ಅದರ ಉದ್ದೇಶ, ದೇಶದ ಪ್ರತಿಯೊಬ್ಬ ಪ್ರಜೆಯೂ ಗೌರವಯುವ ಬದುಕನ್ನ ಕಟ್ಟಿಕೊಳ್ಳಬೇಕೆಂಬುದಾಗಿತ್ತು. ಯಾವ ಸರ್ಕಾರ ಜನರನ್ನು ಶೋಷಣೆ ಮಾಡುತ್ತದೆಯೋ, ಅಂತಹ ಸರ್ಕಾರವನ್ನು ಕಿತ್ತೊಗೆಯಬೇಕು ಎಂದೂ ಆ ಹೋರಾಟಗಾರರು ಹೇಳಿದ್ದರು. ಈಗ ನಾವೂ ‘ಚಲೇ ಜಾವ್’ ಚಳುವಳಿಯನ್ನ ಮಾಡಬೇಕಿದೆ ಎಂದು ಹಿರಿಯ ಹೋರಾಟಗಾರ ಎಸ್‌.ಆರ್ ಹಿರೇಮಠ್ ಹೇಳಿದ್ದಾರೆ.

“ಅಂಬೇಡ್ಕರ್ ಅವರು ಸಂವಿಧಾನದ ರಾಜ್ಯ ನಿರ್ದೇಶಕ ತತ್ವಗಳಲ್ಲಿ ಸರ್ಕಾರಗಳು ಜನಪರವಾದ ನೀತಿಗಳನ್ನು ತರಬೇಕು ಎಂದು ಹೇಳಿದ್ದಾರೆ. ಆದರೆ, ಅವರ ಆಶಯಕ್ಕೆ ವಿರೋಧವಾಗಿ ನೀತಿಗಳು ಜಾರಿಯಾಗುತ್ತಿವೆ. ಅದಾನಿ, ಅಂಬಾನಿಗಳಂತಹ ಬಂಡವಾಳಿಗರ ಸಂಪತ್ತು ಹೆಚ್ಚುತ್ತಿವೆ. ಸುಳ್ಳು ಭರವಸೆಗಳನ್ನು ನೀಡಿ, ಜನರನ್ನು ಸರ್ಕಾರಗಳು ಯಾಮಾರಿಸುತ್ತಿವೆ” ಎಂದರು.

“ಈಗ ಎರಡನೇ ಸ್ವಾತಂತ್ರ್ಯ ಹೋರಾಟವನ್ನ ನಾವೆಲ್ಲರೂ ಮಾಡಬೇಕಾಗಿದೆ. ಕೋಮುವಾದಿ, ಬಂಡವಾಳಶಾಹಿ ಪರವಾದ ಬಿಜೆಪಿ ಸರ್ಕಾರವನ್ನು ಸೋಲಿಸಬೇಕಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸಿದ್ದೇವೆ. ಆದರೆ, ಅವರು ಮುಂದೆ ಮತ್ತೆ ಮುನ್ನೆಲೆಗೆ ಬರುತ್ತಾರೆ. ಹೀಗಾಗಿ, ಸುದೀರ್ಘ ಹೋರಾಟಗಳು ಕೋಮುವಾದಿ, ಬಂಡವಾಳಶಾಹಿಗಳ ವಿರುದ್ಧ ನಡೆಯಬೇಕಿದೆ. ರಾಷ್ಟ್ರವನ್ನ ಕಟ್ಟುವಲ್ಲಿ ನಾವೆಲ್ಲರೂ ದುಡಿಯಬೇಕಿದೆ” ಎಂದು ಎಸ್‌.ಆರ್ ಹಿರೇಮಠ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...