ಮಹಾಧರಣಿ | ದುಡಿವ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಿಎಂ ಸಭೆ: ಸಚಿವ ಕೃಷ್ಣ ಬೈರೇಗೌಡ

Date:

ಧರಣಿನಿರತರ ಹಕ್ಕೊತ್ತಾಯಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚಿಸಲು ಒಪ್ಪಿದ್ದಾರೆ. ಶೀಘ್ರದಲ್ಲೇ ಹೋರಾಟಗಾರರೊಂದಿಗೆ ಸಭೆ ನಡೆಸಲು ದಿನಾಂಕ ನಿಗದಿ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಬೆಂಗಳೂರಿನಲ್ಲಿ ನಡೆಯುತ್ತಿರುವ ದುಡಿಯುವ ಜನರ ಮಹಾಧರಣಿ ಸ್ಥಳಕ್ಕೆ ಬಂದು ಹೋರಾಟಗಾರರ ಹಕ್ಕೊತ್ತಾಯಗಳನ್ನು ಆಲಿಸಿ, ಅವರು ಮಾತನಾಡಿದರು. “ಮುಖ್ಯಮಂತ್ರಿಗಳು ಜನತಾ ದರ್ಶನ ಕಾರ್ಯಕ್ರಮದಲ್ಲಿದ್ದಾರೆ. ಇಲ್ಲಿನ ಹೋರಾಟದ ಬಗ್ಗೆ ಅವರಿಗೆ ಅರಿವಿದೆ. ಅವರ ಪರವಾಗಿ ನನ್ನನ್ನು ಕಳಿಸಿದ್ದಾರೆ. ಹೋರಾಟಗಾರರು ಮುಂದಿಟ್ಟಿರುವ ಎಲ್ಲ ಹಕ್ಕೊತ್ತಾಯಗಳ ಬಗ್ಗೆ ಚರ್ಚಿಸಲು ಸಮಯ ಕೊಡುತ್ತೇನೆಂದು ಹೇಳಿದ್ದಾರೆ” ಎಂದರು.

“ಹೋರಾಟಗಾರರು 18 ಹಕ್ಕೊತ್ತಾಯಗಳನ್ನು ನಮ್ಮ ಮುಂದಿಟ್ಟಿದ್ದಾರೆ. ಇವುಗಳಲ್ಲಿ ಮೂರು ಕಂದಾಯ ಇಲಾಖೆಗೆ ಸಂಬಂಧಿಸಿದ ವಿಚಾರಗಳೂ ಇವೆ. ಮಂಗಳವಾರ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೊಂದಿಗೆ ಸಭೆ ಇದೆ. ಅಲ್ಲಿ, ಇಲ್ಲಿನ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಮಯ ನಿಗದಿ ಮಾಡಿಸಲು ನಾನು ಒತ್ತುಕೊಡುತ್ತೇನೆ. ಶೀಘ್ರದಲ್ಲೇ ಹೋರಾಟಗಾರರೊಂದಿಗಿನ ಸಭೆಯನ್ನು ನಿಗದಿ ಮಾಡಿಸುತ್ತೇನೆ” ಎಂದು ಸಚಿವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾರ್ಮಿಕರು, ಭೂಮಿ ರಹಿತರು ಸೇರಿದಂತೆ ನಾನಾ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ಬರ ಪರಿಹಾರಕ್ಕೆ ಅನುದಾನ ಕೇಂದ್ರದಿಂದ ಬಂದಿಲ್ಲ. ಅದರ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿಗಳು ದೆಹಲಿಗೆ ತೆರಳಲಿದ್ದಾರೆ. ಡಿಸೆಂಬರ್ 4ರಿಂದ ಅಧಿವೇಶನವೂ ಇದೆ. ಈ ಎಲ್ಲದರ ನಡುವೆ ಸಮಯವನ್ನು ನೋಡಿಕೊಂಡು, ಸಭೆ ನಿಗದಿ ಮಾಡಿಸುತ್ತೇನೆ. ಎಲ್ಲರ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತೇವೆ” ಎಂದಿದ್ದಾರೆ.

“ಹೋರಾಟಗಾರರು ಮುಂದಿಟ್ಟಿರುವ ಎಲ್ಲ ವಿಷಯಗಳು ಶ್ರಮಿಕರು, ಬಡವರ ಪರವಾಗಿವೆ. ಅವುಗಳೆಲ್ಲವನ್ನೂ ನಾವು ಈಡೇರಿಸಲು ಸಾಧ್ಯವಾಗುತ್ತದೆಯೋ, ಇಲ್ಲವೋ ಗೊತ್ತಿಲ್ಲ. ಆದರೆ, ಬಡವರು, ರೈತರು, ಕಾರ್ಮಿಕರ ಪರವಾಗಿ ನಡೆಯುತ್ತಿರುವ ಹೋರಾಟ ಸ್ವಾಗತಾರ್ಹ. ಸಾಮಾನ್ಯ ಜನರ ವಿಷಯಗಳು ಚರ್ಚೆಯಾಗಬೇಕು. ಜೀವನಾಧಾರ ವಿಷಯಗಳ ಬಗ್ಗೆ ಚರ್ಚೆ ನಡೆಯಬೇಕು. ಅದಕ್ಕಾಗಿ, ಎಲ್ಲ ಹಕ್ಕೊತ್ತಾಯಗಳ ಬಗ್ಗೆ ಖಂಡಿತವಾಗಿಯೂ ಚರ್ಚಿಸುತ್ತೇನೆ. ಸಭೆ ಕರೆಯುತ್ತೇವೆ” ಎಂದು ಕೃಷ್ಣ ಬೈರೇಗೌಡ ಹೇಳಿದ್ದಾರೆ.

 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...