ಮಹಾಧರಣಿ | ದೇಶದ ಜನರ ಅನಾರೋಗ್ಯದಲ್ಲೂ ಮೋದಿ ಸರ್ಕಾರ ಲೂಟಿ ಮಾಡಿದೆ: ರವಿ ಪುಣಚ

Date:

ರಾಜ್ಯದಲ್ಲಿ ಅಥವಾ ದೇಶದಲ್ಲಿ ಅತಿವೃಷ್ಠಿ, ಅನಾವೃಷ್ಠಿ ಬಂದರೆ ಆಳುವವರಿಗೆ ಹಬ್ಬ ಎಂಬ ಮಾತುಗಳಿದ್ದವು. ಸರ್ಕಾರಗಳು ಪರಿಹಾರದ ಹೆಸರಿನಲ್ಲಿ ಲೂಟಿ ಮಾಡುತ್ತವೆ ಎಂಬ ಆರೋಪಿಗಳಿದ್ದವು. ಆದರೆ, ಈಗ ದೇಶದ ಜನರ ಅನಾರೋಗ್ಯದಲ್ಲೂ ಮೋದಿ ಸರ್ಕಾರ ಲೂಟಿ ಮಾಡುತ್ತಿದೆ. ಕೊರೊನಾ ಸಮಯದಲ್ಲಿ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರೂ. ಘೋಷಿಸಿತ್ತು. ಆದರೆ, ಅದರ ಫಲ ಯಾರಿಗೆ ದೊರೆಯಿತು ಎಂದು ರೈತ ಹೋರಾಟಗಾರ ರವಿಕುಮಾರ್ ಪುಣಚ ಹೇಳಿದ್ದಾರೆ.

ಬೆಂಗಳೂರಿನಲ್ಲಿ ವಿವಿಧ ಸಂಘಟನೆಗಳು ನಡೆಸುತ್ತಿರುವ ಮಹಾಧರಣಿಯಲ್ಲಿ ಅವರು ಮಾತನಾಡಿದರು. “ಪ್ರಧಾನಮಂತ್ರಿ ಫಲಸ್ ಭೀಮಾ ಯೋಜನೆಯ ಹೆಸರಿನಲ್ಲಿಯೂ ಲೂಟಿ ನಡೆಯುತ್ತಿದೆ. ದುಡಿಮೆ ಅವಧಿಯನ್ನು 12 ಗಂಟೆಗಳಿಗೆ ವಿಸ್ತರಿಸಿ, ಕಾರ್ಮಿಕರ ಶ್ರಮದ ಲೂಟಿಯೂ ನಡೆಯುತ್ತಿದೆ. ಇದನ್ನ ತಡೆಯಲು ಸಂಘರ್ಷವನ್ನು ಮಾಡಬೇಕಾಗಿದೆ” ಎಂದರು.

“ಭಾರತ ಎಂದು ಹೇಳಿದರೆ ಹೊಸ ವ್ಯಾಖ್ಯಾನ ನೀಡುವ ಪ್ರಯತ್ನ ಮೋದಿ ಸರ್ಕಾರ ಮಾಡುತ್ತಿದೆ. ಅಖಂಡ ಭಾರತ ಎಂದು ಹೇಳುತ್ತಾ, ರಾಜ್ಯಗಳಿಗೆ ಇರುವ ಅಧಿಕಾರವನ್ನು ಕಿತ್ತು ರಾಜ್ಯದ ಸಂಪತ್ತನ್ನು ಕಾರ್ಪೋರೇಟ್‌ಗಳಿಗೆ ಲೂಟಿ ಮಾಡುವ ಅವಕಾಶ ಮೋದಿ ಸರ್ಕಾರ ನೀಡುತ್ತಿದೆ. ನಾವು ಈ ದೇಶದ ಮಾಲಿಕರು, ಅವರು ನಮ್ಮ ಸೇವಕರಾಗಿದ್ದಾರೆ. ನೀಟ್‌ ಸೇರಿದಂತೆ ಹಲವಾರು ಕಾನೂನು ತಂದು ಇಲ್ಲಿನ ಯುವಕರಿಗೆ ಉದ್ಯೋಗ ನೀಡುವ ಅವಕಾಶ ಕೂಡಾ ಇಲ್ಲದಂತೆ ಈ ಸರ್ಕಾರ ಮಾಡಿದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...