‘ಇಂದಿರಾ ಕ್ಯಾಂಟೀನ್‌’ನಲ್ಲಿ ಇನ್ಮುಂದೆ ರಾಗಿ ಮುದ್ದೆ, ರೋಟಿ ಕರಿ!

Date:

  • 243 ಇಂದಿರಾ ಕ್ಯಾಂಟೀನ್‌ ಸ್ಥಾಪನೆ ಮಾಡಲು ಸಿದ್ಧತೆ ನಡೆಸಿದ ಬಿಬಿಎಂಪಿ
  • ಕ್ಯಾಂಟೀನ್‌ನಲ್ಲಿ ಇನ್ನುಮುಂದೆ ರಾಗಿ ಮುದ್ದೆ, ರೋಟಿ ಕರಿ ನೀಡಲು ಸರ್ಕಾರ ಚಿಂತನೆ

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೆಚ್ಚಿನ ಯೋಜನೆಯಾದ ಇಂದಿರಾ ಕ್ಯಾಂಟೀನ್‌ 2013ರಲ್ಲಿ ಜಾರಿಗೆ ಬಂದಿತು. ಕಾಂಗ್ರೆಸ್‌ ಸರ್ಕಾರದ ಅಧಿಕಾರದ ಅವಧಿಯಲ್ಲಿ ಮುನ್ನೆಲೆ ಇದ್ದ ಈ ಕ್ಯಾಂಟೀನ್‌ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮಲತಾಯಿ ಧೋರಣೆಗೆ ಒಳಗಾಯಿತು. ಇದೀಗ 2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರ ಸ್ಪಷ್ಟ ಬಹುಮತದೊಂದಿಗೆ ಅಸ್ತಿತ್ವಕ್ಕೆ ಬಂದಿದ್ದು, ಇಂದಿರಾ ಕ್ಯಾಂಟೀನ್‌ ಹೊಸ ರೂಪದೊಂದಿಗೆ ಮತ್ತೆ ಅಸ್ತಿತ್ವಕ್ಕೆ ಬರಲು ಸಜ್ಜಾಗಿದೆ.

ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಅತೀ ಕಡಿಮೆ ಬೆಲೆಯಲ್ಲಿ ಆಹಾರ ನೀಡುವ ಈ ಯೋಜನೆ ಇಂದಿರಾ ಕ್ಯಾಂಟೀನ್. ಇಲ್ಲಿ ಹಲವು ಜನರಿಗೆ ನೆಚ್ಚಿನ ತಿಂಡಿ ಎಂದರೆ ಇಡ್ಲಿ. ಗುತ್ತಿಗೆದಾರರಿಗೆ ಕೋಟ್ಯಂತರ ಬಿಲ್ ಪಾವತಿ ಮಾಡದ ಹಿನ್ನೆಲೆ, ಗುತ್ತಿಗೆ ಪಡೆದ ಕಂಪನಿಗಳು ಕ್ಯಾಂಟೀನ್‌ಗಳಿಗೆ ಇಡ್ಲಿ ಸರಬರಾಜು ಮಾಡುವುದನ್ನು ನಿಲ್ಲಿಸಿದ್ದವು. ಇದೀಗ ಕಾಂಗ್ರೆಸ್‌ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದಿರುವುದರಿಂದ ಕ್ಯಾಂಟೀನ್‌ಗಳಿಗೆ ಮರುಜೀವ ಸಿಕ್ಕಿದೆ. ಇದೀಗ, ಹೊಸ ಮೆನು ತಯಾರಾಗುತ್ತಿದ್ದು, ಕ್ಯಾಂಟೀನ್‌ನಲ್ಲಿ ಇನ್ನುಮುಂದೆ ರಾಗಿ ಮುದ್ದೆ, ರೋಟಿ ಕರಿ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಆದೇಶದ ಬೆನ್ನಲ್ಲೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕ್ಯಾಂಟೀನ್‌ಗಳನ್ನು ಮರು ಸ್ಥಾಪಿಸಲು ಸಿದ್ಧತೆ ನಡೆಸಿದ್ದು, ರಾಜಧಾನಿಯಲ್ಲಿ ವಾರ್ಡ್‌ವಾರು ಒಟ್ಟು 243 ಇಂದಿರಾ ಕ್ಯಾಂಟೀನ್‌ ಸ್ಥಾಪನೆ ಮಾಡಲು ಸಿದ್ಧತೆ ನಡೆಸಿದೆ. ಈಗಾಗಲೇ ಟೆಂಡರ್‌ ಪ್ರಕ್ರಿಯೆ ಆರಂಭವಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಡವರ ಫೈವ್ ಸ್ಟಾರ್ ಹೋಟೆಲ್ ಹಾಗೂ ಅಗ್ಗದ ದರದಲ್ಲಿ ನಗರದ ಜನತೆಗೆ ಆಹಾರಗಳನ್ನು ಒದಗಿಸುತ್ತಿದ್ದ ಇಂದಿರಾ ಕ್ಯಾಂಟಿನ್​ನಲ್ಲಿ ರಾಗಿ ಮುದ್ದೆ, ರೋಟಿ ಕರಿ ನೀಡಲು ಚಿಂತನೆ ನಡೆದಿದ್ದು, ಇನ್ನು ಮುಂದೆ ಗ್ರಾಹಕರು ವೈವಿಧ್ಯ ಆಹಾರಗಳನ್ನು ಸವಿಯಬಹುದು.

ಈ ಹಿಂದೆ ಬೆಳಗ್ಗೆ ಉಪಾಹಾರಕ್ಕೆ ಇಡ್ಲಿ, ಉಪ್ಪಿಟ್ಟು, ರೈಸ್ ಬಾತ್, ಪೊಂಗಲ್, ಬಿಸಿಬೇಳೆ ಬಾತ್ ನೀಡಲಾಗುತ್ತಿದ್ದು, ಮಧ್ಯಾಹ್ನದ ಊಟಕ್ಕೆ ಅನ್ನ ಸಾಂಬರ್, ಮೊಸರನ್ನ ಇತ್ತು. ಇನ್ಮುಂದೆ ಇಂದಿರಾ ಕ್ಯಾಂಟೀನ್‌ನಲ್ಲಿ ಮೆನುಗಳ ಸಂಖ್ಯೆ ಏರಿಕೆಯಾಗಲಿದೆ. ಮೆನುವಿನಲ್ಲಿ ರಾಗಿ ಮುದ್ದೆ, ರೋಟಿ ಕರಿ ಇರಲಿದೆ.

ಇಂದಿರಾ ಕ್ಯಾಂಟೀನ್​ನಲ್ಲಿ ರಾಗಿ ಮುದ್ದೆ ನೀಡಬೇಕು ಎಂಬುದು ಅನೇಕರ ಬೇಡಿಕೆ ಆಗಿತ್ತು. ಅದರಂತೆ ಕೊನೆಗೂ ಸಿದ್ದರಾಮಯ್ಯನವರ ಸರ್ಕಾರ ಜನರ ಬೇಡಿಕೆ ಈಡೇರಿಸಲು ಮುಂದಾಗಿದ್ದು, ಆಹಾರದ ಪ್ರಮಾಣ (ಕ್ವಾಂಟಿಟಿ), ಗುಣಮಟ್ಟ ಹೆಚ್ಚಿಸಲಿದೆ. ಇದರಿಂದ ಬೆಲೆ ಸಹ 5-10 ರೂಪಾಯಿ ಹೆಚ್ಚಾಗಬಹುದು ಎಂದು ಬಿಬಿಎಂಪಿ ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯ ವಿಜೇತರ ಘೋಷಣೆ

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ವಿಜಯನಗರ ನಿವಾಸಿ ಲೋಕೇಶ್, “ಕಳೆದ ಹಲವು ವರ್ಷಗಳಿಂದ ಕಡಿಮೆ ಬೆಲೆಯಲ್ಲಿ ನಮಗೆ ಇಂದಿರಾ ಕ್ಯಾಂಟೀನ್‌ ಆಹಾರ ಒದಗಿಸುತ್ತಿತ್ತು. ಬೇರೆ ಊರಿನಿಂದ ದುಡಿಮೆಗಾಗಿ ಬೆಂಗಳೂರಿಗೆ ಬಂದಿದ್ದೆವು. ಹೊರಗಡೆ ಹೋಟೆಲ್‌ಗಳಲ್ಲಿ ಟೀ ಕುಡಿಯೋಣವೆಂದರೆ ₹15 ರಿಂದ ₹20 ನೀಡಬೇಕು. ಅದೇ ಕ್ಯಾಂಟೀನ್‌ನಲ್ಲಿ ₹5ಕ್ಕೆ ಹೊಟ್ಟೆ ತುಂಬ ತಿಂಡಿ ಸಿಗುತ್ತದೆ” ಎಂದರು.

“ಕಳೆದ ಕೆಲವು ತಿಂಗಳಿನಿಂದ ಇಡ್ಲಿ ಸಿಗುತ್ತಿರಲಿಲ್ಲ. ನನಗೆ ಇಡ್ಲಿ ತುಂಬಾ ಇಷ್ಟ. ₹5 ನೀಡಿದರೇ ನಾಲ್ಕು ಇಡ್ಲಿ ಕೊಡುತ್ತಾರೆ. ಅದೇ ಹೊರಗಡೆ ₹30 ಇದೆ. ಹಾಗಾಗಿ, ಮತ್ತೆ ಇಡ್ಲಿ ನೀಡಬೇಕು. ಜತೆಗೆ ರಾಗಿ ಮುದ್ದೆ, ರೋಟಿ ಕರಿ ನೀಡಿದರೆ ಅನುಕೂಲವಾಗುತ್ತದೆ” ಎಂದು ತಿಳಿಸಿದರು.

ಸುಂಕದಕಟ್ಟೆ ನಿವಾಸಿ ಆಟೋ ಚಾಲಕ ಮಂಜುನಾಥ್ ಈ ದಿನ.ಕಾಮ್‌ ಜತೆಗೆ ಮಾತನಾಡಿ, “ನಮಗೆ ಇಂದಿರಾ ಕ್ಯಾಂಟೀನ್‌ ಫೈವ್ ಸ್ಟಾರ್ ಹೋಟೆಲ್ ದೊಡ್ಡ ಹೋಟೆಲ್‌ಗಳಿಗೆ ಹೋಗಿ ತಿನ್ನುವಷ್ಟು ಸ್ಥಿತಿವಂತರು ನಾವಲ್ಲ. ಕ್ಯಾಂಟೀನ್‌ನಲ್ಲಿ ಇಡ್ಲಿ ನೀಡುವುದನ್ನು ಮತ್ತೆ ಆರಂಭಿಸಬೇಕು. ಟೀ ನೀಡಿದರೇ ಇನ್ನೂ ಉತ್ತಮ” ಎಂದರು.   

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...