ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ 15 ನಿಲ್ದಾಣಗಳ ಆಧುನೀಕರಣ: ಯೋಗೇಶ್ ಮೋಹನ್

Date:

“ಬಂಗಾರಪೇಟೆ, ಕೆಂಗೇರಿ, ಕೃಷ್ಣರಾಜಪುರ, ಮಂಡ್ಯ, ಚನ್ನಪಟ್ಟಣ, ಹೊಸೂರು, ಹಿಂದೂಪುರ, ಕುಪ್ಪಂ, ಮಾಲೂರು, ರಾಮನಗರ, ತುಮಕೂರು ಹಾಗೂ ವೈಟ್‌ಫೈಲ್ಡ್ ನಿಲ್ದಾಣಗಳನ್ನು (15 ನಿಲ್ದಾಣ) ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ ಆಧುನೀಕರಿಸಲು ಉದ್ದೇಶಿಸಲಾಗಿದೆ” ಎಂದು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಯೋಗೇಶ್ ಮೋಹನ್ ಹೇಳಿದ್ದಾರೆ.

ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗವು ರೈಲ್ವೆ ವಿಭಾಗೀಯ ಕಚೇರಿಯಲ್ಲಿ ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿಯ (ಡಿಆರ್‌ಯುಸಿಸಿ) ಮೂರನೇ ಸಭೆ ನಡೆಸಿತು. ಈ ವೇಳೆ, ಮಾತನಾಡಿದ ಅವರು, “ಯಶವಂತಪುರ-ಚೆನ್ನಸಂದ್ರ ನಡುವೆ ದ್ವಿಪಥೀಕರಣ, ಬೈಯ್ಯಪ್ಪನಹಳ್ಳಿ-ಹೊಸೂರು ಮತ್ತು ಪೆನುಕೊಂಡ-ಧರ್ಮಾವರಂ ನಡುವೆ ವಿದ್ಯುದ್ದೀಕರಣದೊಂದಿಗೆ ದ್ವಿಪಥೀಕರಣ ಮತ್ತು ಬೆಂಗಳೂರು ಕಂಟೋನ್ಮೆಂಟ್ – ವೈಟ್‌ಫೀಲ್ಡ್‌ನ ಚತುಷ್ಪಥ ಕಾಮಗಾರಿ ವೇಗವಾಗಿ ನಡೆಯುತ್ತಿದೆ” ಎಂದು ಅವರು ತಿಳಿಸಿದ್ದಾರೆ.

“ನವೆಂಬರ್ 2023ರಲ್ಲಿ ವಿಭಾಗವು ತನ್ನ ಅತ್ಯಧಿಕ ಸರಕು ಆದಾಯ ₹24.22 ಕೋಟಿ ಗಳಿಸಿದೆ. ವಿಭಾಗವು ಪ್ರಸಕ್ತ ವರ್ಷದಲ್ಲಿ ಇಲ್ಲಿಯವರೆಗೆ ₹173.17 ಕೋಟಿ ಒಟ್ಟು ಸರಕು ಸಾಗಣೆ ಆದಾಯವನ್ನು ದಾಖಲಿಸಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಏಪ್ರಿಲ್ 2023ರಲ್ಲಿ ವಿಭಾಗವು, ಪೆಟ್ರೋಲಿಯಂ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಸಾಗಣೆಯನ್ನು ಹೊಸದಾಗಿ ಪ್ರಾರಂಭಿಸಿದೆ. ಇಲ್ಲಿಯವರೆಗೆ 63 ರೇಕ್‌ಗಳನ್ನು ಲೋಡ್ ಮಾಡಲಾಗಿದ್ದು, ₹9.33 ಕೋಟಿ ಆದಾಯ ಗಳಿಸಿದೆ” ಎಂದು ಮಾಹಿತಿ ನೀಡಿದ್ದಾರೆ.

“ವಿಭಾಗವು ಅಕ್ಟೋಬರ್, 2023ರಲ್ಲಿ ದೊಡ್ಡಬಳ್ಳಾಪುರದಿಂದ ರಾಜಸ್ಥಾನದ ಕನಕಪುರಕ್ಕೆ ಮೊದಲ ಬಾರಿಗೆ ಟ್ರ್ಯಾಕ್ಟರ್‌ಗಳನ್ನು ಲೋಡ್ ಮಾಡಿದೆ. ಆಟೋಮೊಬೈಲ್ ಸಾಗಣೆಗೆ ಸಂಬಂಧಿಸಿದಂತೆ, ವಿಭಾಗವು ನವೆಂಬರ್, 2023 ರವರೆಗೆ 430 ರೇಕ್‌ಗಳನ್ನು ಲೋಡ್ ಮಾಡಿದೆ. ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ 35% ಹೆಚ್ಚಾಗಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಷ್ಟ್ರದ ಭವಿಷ್ಯ ಯುವ ಸಮೂಹದ ಕೈಯಲ್ಲಿದೆ : ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

“ಒಟ್ಟಾರೆ, ಸರಕು ಲೋಡಿಂಗ್ ಕಾರ್ಯಕ್ಷಮತೆಗೆ ಸಂಬಂಧಿಸಿದಂತೆ, ವಿಭಾಗವು ನವೆಂಬರ್, 2023 ರವರೆಗೆ 515 ರೇಕ್‌ಗಳನ್ನು ಲೋಡ್ ಮಾಡಿದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ 46% ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ಕ್ಯಾತಸಂದ್ರ, ನಿಡವಂದ, ಪೆನುಕೊಂಡ ಮತ್ತು ವೈಟ್‌ಫೀಲ್ಡ್‌ನಲ್ಲಿರುವ ಗೂಡ್ಸ್ ಶೆಡ್‌ಗಳನ್ನು ಫೆನ್ಸಿಂಗ್/ಬೌಂಡರಿ, ಶೆಲ್ಟರ್, ವರ್ತಕರ ಕೊಠಡಿಗಳು, ಕಾರ್ಮಿಕರಿಗೆ ಕ್ಯಾಂಟೀನ್, ವಿಶ್ರಾಂತಿ ಕೊಠಡಿ ಮುಂತಾದ ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೆ ಏರಿಸಲು ಉದ್ದೇಶಿಸಲಾಗಿದೆ” ಎಂದು ಹೇಳಿದ್ದಾರೆ.

ರೈಲು ನಿಲ್ದಾಣಗಳಲ್ಲಿನ ಪ್ರಯಾಣಿಕರ ಸೌಕರ್ಯಗಳನ್ನು ಸುಧಾರಿಸಲು ರೈಲುಗಳಲ್ಲಿ ಪ್ರಯಾಣಿಕರ ಸುಖಾನುಭವವನ್ನು ವರ್ಧಿಸಲು ಮತ್ತು ವಿಭಾಗದ ಪಾರ್ಸೆಲ್ ಆದಾಯವನ್ನು ಹೆಚ್ಚಿಸಲು ಸಲಹೆಗಳನ್ನು ನೀಡಲು ಅವರು ಸದಸ್ಯರಿಗೆ ಕರೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...