ಮೋದಿ ರೋಡ್‌ ಶೋ | ಬೆಂಗಳೂರಿನ 34 ರಸ್ತೆಗಳು ಬಂದ್; ಎಲ್ಲೆಲ್ಲಿ… ಇಲ್ಲಿದೆ ನೋಡಿ

Date:

  • ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೂ ಸಂಚಾರ ನಿರ್ಬಂಧ
  • ಎರಡು ಹಂತಗಳಲ್ಲಿ ಸುಮಾರು 36 ಕಿ.ಮೀ ರೋಡ್​ ಶೋ ನಡೆಸಲಿರುವ ಪ್ರಧಾನಿ

ಕರ್ನಾಟಕ ವಿಧಾನಸಭೆ ಚುನಾವಣೆಯ ಪ್ರಚಾರದ ಭರಾಟೆ ಜೋರಾಗಿದೆ. ಮತದಾನದ ದಿನ ಸಮೀಪಿಸುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಅಬ್ಬರದ ಪ್ರಚಾರ ರಾಜ್ಯದೆಲ್ಲೆಡೆ ಜೋರಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಮೇ 6 ಮತ್ತು 7ರಂದು ರೋಡ್‌ ಶೋ ನಡೆಯಲಿದೆ. ಈ ಹಿನ್ನೆಲೆ, ನಗರದ ಒಟ್ಟು 34 ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಅವರು ಎರಡು ಹಂತಗಳಲ್ಲಿ ಸುಮಾರು 36 ಕಿ.ಮೀ ರೋಡ್​ ಶೋ ನಡೆಸಲಿದ್ದಾರೆ. ಮೇ 6 ಹಾಗೂ 7ರಂದು ರೋಡ್ ಶೋ ಇರುವುದರಿಂದ ನಗರದ ಹಲವು ರಸ್ತೆಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೂ ಸಂಚಾರ ನಿರ್ಬಂಧವಿರಲಿದೆ ಎಂದು ನಗರ ಸಂಚಾರ ಪೊಲೀಸ್‌ ಇಲಾಖೆ ತಿಳಿಸಿದೆ.

ಪೊಲೀಸ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೇ 6ರಂದು ಎಲ್ಲೆಲ್ಲಿ ಸಂಚಾರ ನಿರ್ಬಂಧ?

ರಾಜ ಭವನ ರಸ್ತೆ, ರಮಣ ಮಹರ್ಷಿ ರಸ್ತೆ, ಮೇಖ್ರಿ ವೃತ್ತ, ಆರ್ ಬಿ ಐ ಲೇಔಟ್ ಜೆಪಿ ನಗರ,  ಶಿರ್ಸಿ ಸರ್ಕಲ್, ಜೆಜೆ ನಗರ, ಬಿನ್ನಿ ಮಿಲ್ ರಸ್ತೆ, ಶಾಲಿನಿ ಮೈದಾನ, ಸೌತ್ ಎಂಡ್ ಸರ್ಕಲ್, ಆಮುರ್ಗಂ ಸರ್ಕಲ್, ಬುಲ್  ಟೆಂಪಲ್ ರೋಡ್, ರಾಮಕೃಷ್ಣಾಶ್ರಮ, ಉಮಾ ಟಾಕೀಸ್, ಟಿಆರ್ ಮಿಲ್, ಚಾಮರಾಜಪೇಟೆ ಮುಖ್ಯ ರಸ್ತೆ, ಬಾಳೆಕಾಯಿ ಮಂಡಿ, ಕೆ ಪಿ ಅಗ್ರಹಾರ, ಮಾಗಡಿ ರೋಡ್, ಚೇಳೂರುಪಾಳ್ಯ ರೋಡ್, ಎಂಸಿ ಸರ್ಕಲ್, ವೆಸ್ಟ್ ಆಫ್ ಕಾರ್ಡ್ ರೋಡ್, ಎಂ ಸಿ ಲೇಔಟ್, ನಾಗರಭಾವಿ ಮುಖ್ಯರಸ್ತೆ, ಬಿಜಿಎಸ್ ಮೈದಾನ, ಹಾವನೂರು ಸರ್ಕಲ್, ಎಂಟನೇ ಮುಖ್ಯರಸ್ತೆ ಬಸವೇಶ್ವರ ನಗರ, ಬಸವೇಶ್ವರ ನಗರ ಹದಿನೈದನೇ ಮುಖ್ಯ ರಸ್ತೆ, ಶಂಕರ್ ಮಠ, ಮೋದಿ ಅಸ್ಪತ್ರೆ ರೋಡ್, ನವರಂಗ್ ರಸ್ತೆ, ಎಂ ಕೆಕೆ ರಸ್ತೆ, ಮಲ್ಲೇಶ್ವರಂ ಸರ್ಕಲ್, ಸಂಪಿಗೆ ರಸ್ತೆ, ಸ್ಯಾಂಕಿ ರಸ್ತೆಗಳನ್ನು ಬಳಸದೇ ಪರ್ಯಾಯ ಮಾರ್ಗಗಳನ್ನು ಬಳಸಿ ಎಂದು ನಗರ ಸಂಚಾರ ಪೊಲೀಸ್‌ ವಾಹನ ಸವಾರರಿಗೆ ಸೂಚನೆ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...