ರಾಜ್ಯದಲ್ಲಿನ ಮಾಂಟೇಸರಿಗಳಿಗೆ ಸರ್ಕಾರದ ಅಂಕುಶ ಬೇಕೇ ಬೇಕು : ಮೋಹನ್ ದಾಸರಿ

Date:

  • ಹಣ ಮಾಡುವ ದಂಧೆಗೆ ಇಳಿದಿರುವುದರಿಂದಾಗಿ ಈ ರೀತಿಯ ನೂರಾರು ಅಚಾತುರ್ಯ
  • ಸರ್ಕಾರವು ಈ ವಿಚಾರದಲ್ಲಿ ತಾಯ್ತನ ಹಾಗೂ ಮಾನವೀಯತೆಯನ್ನು ಮೆರೆಯಬೇಕು

ರಾಜ್ಯ ರಾಜಧಾನಿ ಬೆಂಗಳೂರಿನ ಮಾಂಟೆಸರಿವೊಂದರಲ್ಲಿ ಚಿಕ್ಕ ಮಗುವನ್ನು ದೊಡ್ಡ ಮಗು ಹೊಡೆದ ವಿಚಾರಕ್ಕೆ ಸಂಬಂಧಿಸಿದಂತೆ, ಮಾಂಟೇಸರಿ ಮಾಲೀಕರು ಮಕ್ಕಳನ್ನು ನೋಡಿಕೊಳ್ಳಲು ಸೂಕ್ತ ತರಬೇತಿ ಹೊಂದಿದ ಸಿಬ್ಬಂದಿ ನೇಮಿಸದೆ ಕೇವಲ ವ್ಯಾಪಾರಿ ದೃಷ್ಟಿಯಿಂದ ಹಣ ಮಾಡುವ ದಂದೆಗೆ ಇಳಿದಿರುವುದರಿಂದಾಗಿ ಈ ರೀತಿಯ ನೂರಾರು ಅಚಾತುರ್ಯಗಳು ನಡೆಯುತ್ತಿದೆ ಎಂದು ಆಪ್‌ನ ರಾಜ್ಯ ಕಾರ್ಯಧ್ಯಕ್ಷ ಮೋಹನ್ ದಾಸರಿ ಹೇಳಿದರು.

ಪಕ್ಷದ ಮಾಧ್ಯಮ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಂತಹ ವಾಣಿಜ್ಯ ನಗರಿಯಲ್ಲಿ ಬೆಲೆ ಏರಿಕೆಯಂತಹ ಜ್ವಲಂತ ಸಮಸ್ಯೆಗಳನ್ನು ಎದುರಿಸಲು, ಸಂಸಾರಗಳನ್ನು ಸರಿದೂಗಿಸಿಕೊಂಡು ಹೋಗಲು ದಂಪತಿ ಕೆಲಸಕ್ಕೆ ಹೋಗಬೇಕಾದ ಅನಿವಾರ್ಯ ಪರಿಸ್ಥಿತಿ ಇದೆ. ತಮ್ಮ ಮಕ್ಕಳನ್ನು ಮಾಂಟೇಸರಿಗಳಲ್ಲಿ ಅಥವಾ ಡೇ ಕೇರ್ ಸೆಂಟರ್‌ಗಳಲ್ಲಿ ಬಿಟ್ಟು ಹೋಗುವಂತಹ ಅನಿವಾರ್ಯತೆ ಇದೆ ಎಂದರು.

ಕೂಡಲೇ ರಾಜ್ಯ ಸರ್ಕಾರವು ಇವುಗಳ ಮೇಲೆ ನಿಗಾವಹಿಸಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಸರ್ಕಾರದ ಮಾರ್ಗಸೂಚಿಗಳನ್ನು ಹಾಗೂ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿ ಮಾಡುವ ಮೂಲಕ ಅವುಗಳ ಮೇಲೆ ಅಂಕುಶ ಹಾಕಬೇಕು. ಮಕ್ಕಳ ಹಾಗೂ ಪೋಷಕರ ಹಿತದೃಷ್ಟಿಯಿಂದ ಸರ್ಕಾರ ಈ ಕೂಡಲೇ ಕ್ರಮಕ್ಕೆ ಮುಂದಾಗಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರು ನಗರ ಉಪಾಧ್ಯಕ್ಷ ಅಶೋಕ್ ಮೃತ್ಯುಂಜಯ ಮಾತನಾಡಿ, ಎನ್ ಸಿ ಇ ಆರ್ ಟಿ ಈಗಾಗಲೇ 2013ರಲ್ಲಿ ವರದಿಯನ್ನು ನೀಡಿ 2016ರ ಒಳಗೆ ಅನುಷ್ಠಾನಗೊಳಿಸಬೇಕೆಂದು ಹೇಳಿದೆ. ಆದರೆ, ಇದುವರೆಗೂ ರಾಜ್ಯ ಸರ್ಕಾರ ವರದಿಯ ಮಾರ್ಗಸೂಚಿಯ ಅನುಷ್ಠಾನವನ್ನು ಮಾಡದಿರುವುದು ಸರ್ಕಾರದ ಬೇಜವಾಬ್ದಾರಿಯನ್ನು ತೋರಿಸುತ್ತದೆ. ಸಮಿತಿಯ ಯಾವುದೇ ಮಾನದಂಡಗಳನ್ನು ಮಾಂಟೇಸರಿಗಳು ಪಾಲಿಸದೆ ಹಣ ಮಾಡುವ ದಂದೆಯಲ್ಲಿ ನಿರತರಾಗಿದ್ದಾರೆ. ಕೂಡಲೇ ಶಿಕ್ಷಣ ಸಚಿವರು ಇತ್ತ ಕಡೆ ಗಮನಹರಿಸಬೇಕು ಹಾಗೂ ಕಮಿಷನ್ ನೇಮಕ ಆಗಬೇಕು ಎಂದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ದಿನದ 24 ಗಂಟೆಯೂ ಹೋಟೆಲ್ ತೆರೆಯಲು ಅನುಮತಿ ನೀಡಿ ಎಂದ ಬಿಬಿಎಚ್ಎ

ಪಕ್ಷದ ಕಾರ್ಯದರ್ಶಿ ಸುಷ್ಮಾ ವೀರ್ ಮಾತನಾಡಿ, ಸರ್ಕಾರವು ಈ ವಿಚಾರದಲ್ಲಿ ತಾಯ್ತನ ಹಾಗೂ ಮಾನವೀಯತೆಯನ್ನು ಮೆರೆಯಬೇಕು. ದೇಶದ ಭವಿಷ್ಯದ ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿಸುವಲ್ಲಿ ಸರ್ಕಾರವು ಕೂಡಲೇ ಈ ಖಾಸಗಿ ಮಾಂಟೆಸರಿಗಳ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು. ದೆಹಲಿಯ ಆಪ್ ಸರ್ಕಾರವು ನಡೆಸುತ್ತಿರುವ ಮಾಂಟೆಸರಿಗಳನ್ನು ಅಲ್ಲಿಗೆ ಹೋಗಿ ವೀಕ್ಷಿಸಿ ಅದೇ ರೀತಿಯ ಶಾಲೆಗಳನ್ನು ರಾಜ್ಯದಲ್ಲಿಯೂ ಸಹ ತೆರೆಯಬೇಕು” ಎಂದು ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...