ನಿತ್ಯದ ಆದಾಯದಲ್ಲಿ ಶೇ.50ಕ್ಕಿಂತ ಹೆಚ್ಚಿನ ತೆರಿಗೆ ಸರ್ಕಾರಕ್ಕೆ ಪಾವತಿಸಬೇಕು : ವ್ಯಕ್ತಿಯೊಬ್ಬರ ಅಳಲು, ಟ್ವೀಟ್‌ ವೈರಲ್

Date:

ಬೆಂಗಳೂರಿನ ವ್ಯಕ್ತಿಯೊಬ್ಬರು ತಾವು ನಿತ್ಯ ದುಡಿಯುವ ಆದಾಯದಲ್ಲಿ ಶೇ.50ಕ್ಕಿಂತ ಹೆಚ್ಚಿನ ತೆರಿಗೆಯನ್ನು ಸರ್ಕಾರಕ್ಕೆ ಪಾವತಿಸಬೇಕಾಗುತ್ತದೆ ಎಂದು ಟ್ವೀಟ್‌ ಮಾಡಿದ್ದಾರೆ. ಈ ಟ್ವೀಟ್‌ ವೈರಲ್‌ ಆಗಿದ್ದು, ಹಲವರು ಕಮೆಂಟ್‌ ಮಾಡುತ್ತಿದ್ದಾರೆ.

ಫ್ಲಿಪ್‌ಕಾರ್ಟ್‌ನ ವರ್ಗ ವ್ಯವಸ್ಥಾಪಕ ಸಂಚಿತ್ ಗೋಯಲ್ ಎಂಬುವವರು ಜುಲೈ 15ರಂದು ಟ್ವೀಟ್‌ ಮಾಡಿದ್ದು, “ಇಂದು ನಾನು ₹5000 ಸಂಪಾದಿಸಿದ್ದೇನೆ. ಸರ್ಕಾರಕ್ಕೆ 30% ತೆರಿಗೆ ನೀಡಬೇಕು. ನಾನು ಉಳಿದ ಹಣದಿಂದ ಕೆಲವು ಕೆಫೀನ್ ಹೊಂದಿರುವ ಪಾನೀಯ ಖರೀದಿಸಲು ಯೋಚಿಸಿದೆ ಮತ್ತು ತೆರಿಗೆಯಾಗಿ 28% ನೀಡಬೇಕಾಯಿತು. ದಿನಕ್ಕೆ 12 ಗಂಟೆಗಳ ಕಾಲ ಕೆಲಸ ಮಾಡಿ ನನ್ನ ಆದಾಯದ ಶೇ. 50ಕ್ಕಿಂತ ಹೆಚ್ಚು ಹಣವನ್ನು ಸರ್ಕಾರಕ್ಕೆ ತೆರಿಗೆಯಾಗಿ ಪಾವತಿಸಬೇಕು ಎಂಬುದನ್ನು ನಾನು ಅರಿತುಕೊಂಡೆ” ಎಂದು ಬರೆದುಕೊಂಡಿದ್ದಾರೆ.

ಅವರ ಟ್ವೀಟ್‌ಗೆ 595.4K ವೀಕ್ಷಣೆಗಳು, 8940 ಲೈಕ್‌ಗಳು ಮತ್ತು 2,164 ಜನ ರೀಟ್ವೀಟ್‌ ಮಾಡಿದ್ದಾರೆ. ಹಲವು ಜನ ಟ್ವೀಟ್‌ಗೆ ಕಾಮೆಂಟ್‌ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೃಷಿಯಿಂದ ಹಣ ಸಂಪಾದಿಸಿ ಮತ್ತು ತೆಂಗಿನಕಾಯಿ ನೀರನ್ನು ಕುಡಿಯಿರಿ. 0% ತೆರಿಗೆ” ಎಂದು ಹರಿಪ್ರಸಾದ್ ಸಲಹೆ ನೀಡಿದ್ದಾರೆ.

“ತೆರಿಗೆ ಆದಾಯದ ಹೆಚ್ಚಿನ ಭಾಗವು ಮೂಲಸೌಕರ್ಯಗಳನ್ನು ನಿರ್ಮಿಸುವುದಕ್ಕಿಂತ ಹೆಚ್ಚಾಗಿ ಸರ್ಕಾರಿ ನೌಕರರ ಸಂಬಳ, ಪಿಂಚಣಿ ಮತ್ತು ಅನಗತ್ಯ ಉಚಿತಗಳ ಕಡೆಗೆ ಹೋಗುತ್ತಿದೆ ಎಂದು ತಿಳಿದಾಗ ರಕ್ತ ಕುದಿಯುತ್ತದೆ” ಎಂದು ಸತೀಶ್ ರೆಡ್ಡಿ ಎಂಬುವವರು ಬರೆದುಕೊಂಡಿದ್ದಾರೆ.

“ಒಬ್ಬ ವ್ಯಕ್ತಿಗೆ ₹10 ಲಕ್ಷ ಪಿಎಗಿಂತ ಹೆಚ್ಚಿನ ಆದಾಯದ ಮೇಲೆ 30% ತೆರಿಗೆ ಮತ್ತು ಅದರ ಅನುಪಾತದಿಂದ ಉಳಿಸಲು ವಿಧಾನಗಳಿವೆ. ಭಾರತದಲ್ಲಿ ತೆರಿಗೆಯ ಹೊರೆಯು ಅನೇಕ ಅಭಿವೃದ್ಧಿ ಹೊಂದಿದ ದೇಶಗಳಿಗಿಂತ ಕಡಿಮೆಯಾಗಿದೆ” ಎಂದು ಶಶಾಂಕ ತಿವಾರಿ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಂಚಿತ್ ಗೋಯಲ್, “ನಾವು ದೇಶಗಳನ್ನು ಹೋಲಿಸುತ್ತಿದ್ದರೆ, ಬಹಳಷ್ಟು ದೇಶಗಳು ವಿಧಿಸುವ ತೆರಿಗೆಗಳಿಗೂ ಆ ರೀತಿಯ ಸೌಲಭ್ಯಗಳನ್ನು ನೀಡುತ್ತವೆ. ಯುಎಇಯಂತಹ ದೇಶಗಳು ಯಾವುದೇ ತೆರಿಗೆಗಳಿಲ್ಲದೆ ಉತ್ತಮ ಸೌಲಭ್ಯಗಳನ್ನು ನೀಡುತ್ತವೆ. ನಾನು ತೆರಿಗೆ ಪಾವತಿಸಲು ಸಿದ್ಧ. ಆದರೆ ನನಗೆ ಉತ್ತಮ ಗಾಳಿ, ಆಹಾರ ಮತ್ತು ನೀರು ಬೇಕು” ಎಂದು ಹೇಳಿದ್ದಾರೆ.

“ಇದು ಇಂದಿನ ಮಧ್ಯಮ ವರ್ಗದವರ ನೋವು. ನೀವು ಕಾರನ್ನು ಖರೀದಿಸಿದರೆ 28% ಜಿಎಸ್‌ಟಿ ಮಾತ್ರವಲ್ಲದೆ 22% ಸೆಸ್ ಕೂಡ ಇರುತ್ತದೆ. ಜೊತೆಗೆ 10% ರಸ್ತೆ ತೆರಿಗೆ. ಸರಿಸುಮಾರು 150% ಇಂಧನ ತೆರಿಗೆ ಮತ್ತು 2.5% ಪ್ರತಿ ಕಿಮೀ ಟೋಲ್ ತೆರಿಗೆ” ಎಂದು ಮತ್ತೊಬ್ಬರು ಟ್ವೀಟ್‌ ಮಾಡಿದ್ದಾರೆ.

“ರಸ್ತೆ ಬದಿಯಲ್ಲಿ ಕಿರಾಣಿ ಅಂಗಡಿಯನ್ನು ಪ್ರಾರಂಭಿಸಿ, ಜ್ಯೋತಿಷಿಯಾಗು ಅಥವಾ ಡೇ ಕೇರ್ ಪ್ರಾರಂಭಿಸಿ. ಎಲ್ಲ ತೆರಿಗೆ ಮುಕ್ತ ಆದಾಯವಿರಲಿದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ | ನಿಯಮ ಉಲ್ಲಂಘಿಸಿ ವಿರುದ್ಧ ದಿಕ್ಕಿನಲ್ಲಿ ಚಲಿಸಿದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ವಿರುದ್ಧ ಕ್ರಮ

“ಇದು ನಿಜವಾಗಿಯೂ ನೋವಿನ ಸಂಗತಿಯಾಗಿದೆ, ನಾವು 30% ತೆರಿಗೆಯನ್ನು ಪಾವತಿಸುತ್ತೇವೆ ಮತ್ತು ನಾವು ಏನು ಪಡೆಯುತ್ತೇವೆ. ನೀವು ಖರೀದಿಸುವ ಪ್ರತಿಯೊಂದಕ್ಕೂ ತೆರಿಗೆ ಪಾವತಿಸಬೇಕು. ನೀವು ನಿಮ್ಮ ಕೆಲಸವನ್ನು ಕಳೆದುಕೊಂಡರೆ, ಸರ್ಕಾರದ ಜವಾಬ್ದಾರಿ ಇಲ್ಲ. ನೀವು ಖರೀದಿಸುವ ಪ್ರತಿಯೊಂದಕ್ಕೂ ಜಿಎಸ್‌ಟಿ ಇದೆ. ಸರ್ಕಾರವು ಉತ್ತಮ ಆರೋಗ್ಯ ಸೇವೆಯನ್ನು ನೀಡಲು ಸಾಧ್ಯವಿಲ್ಲ. ಮೆಡಿಕ್ಲೈಮ್ ಪಡೆಯಿರಿ. ಹೆದ್ದಾರಿಯಲ್ಲಿ ಸಂಚಾರ ಮಾಡಲು ಟೋಲ್ ಪಾವತಿಸಬೇಕು” ಎಂದು ಯುವರಾಜಸಿಂಹ ಜಡೇಜಾ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...