ರೌಡಿಶೀಟರ್ ಕೊಲೆ | 11 ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

Date:

  • ಜೈಲಿನಿಂದ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಕೊಲೆ
  • ಹಳೆ ದ್ವೇಷದ ಹಿನ್ನೆಲೆ ಹತ್ಯೆ ನಡೆದಿರುವ ಶಂಕೆ

ರೌಡಿಶೀಟರ್ ಸಿದ್ದಾಪುರ ಮಹೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪರಪ್ಪನ ಅಗ್ರಹಾರ ಪೊಲೀಸರು 11 ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಗ್ರೇಸ್ ವಾಲ್ಟರ್, ಶ್ರೀನಿವಾಸ ಅಲಿಯಾಸ್​​​ ಪಾಪ, ಗೋಕುಲ್, ಸುರೇಶ್​​​​​, ಕಾರ್ತಿಕ್, ವಾಲೆ ಪ್ರವೀಣ, ಸಿದ್ದಾಪುರ ಸುನೀಲ್,‌ ಕಣ್ಣನ್ ವೇಲ, ಪ್ರದೀಪ್, ಮನು ಸೇರಿ 11 ಆರೋಪಿಗಳು ಪೊಲೀಸರ ವಶದಲ್ಲಿದ್ದಾರೆ. ರೌಡಿಶೀಟರ್​ ವಿಲ್ಸನ್​ಗಾರ್ಡನ್​ ನಾಗ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಏನಿದು ಪ್ರಕರಣ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗ್ರಹದಿಂದ ಬಿಡುಗಡೆಯಾಗಿ ಹೊರ ಬಂದ ಕೆಲವೇ ಗಂಟೆಗಳಲ್ಲಿ ರೌಡಿಶೀಟರ್‌ ಸಿದ್ದಾಪುರ ಮಹೇಶ್‌ನನ್ನು ವಿರೋಧಿ ಗ್ಯಾಂಗ್ ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿತ್ತು.

ಹತ್ಯೆಯಾದ ರೌಡಿಶೀಟರ್ ಅನೇಕ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದನು. 2020ರಲ್ಲಿ ಜಯನಗರದಲ್ಲಿ ನಡೆದಿದ್ದ ಮದನ್​ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ಮಹೇಶ್​ ಜೈಲು ಸೇರಿದ್ದನು. ಈತನಿಗೆ ಆಗಸ್ಟ್‌ 6ರಂದು ಜೈಲಿನಿಂದ ಬಿಡುಗಡೆಯಾಗಿತ್ತು. ನಗರದ ಹೊಸ ರೋಡ್ ಜಂಕ್ಷನ್ ಬಳಿ ರೌಡಿಶೀಟರ್ ಕಾರಿನಲ್ಲಿ ತೆರಳುತ್ತಿದ್ದನು. ಈ ವೇಳೆ, ದಾಳಿ ನಡೆಸಿದ ದುಷ್ಕರ್ಮಿಗಳು ಕಾರು ಅಡ್ಡಗಟ್ಟಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದರು.

ಸಿದ್ದಾಪುರ ಮಹೇಶ್‌ನ ವಿರೋಧಿ ಗ್ಯಾಂಗ್​ ಎನಿಸಿಕೊಂಡಿದ್ದ ರೌಡಿಶೀಟರ್​​​ ವಿಲ್ಸನ್​​ಗಾರ್ಡನ್​​​ ನಾಗ, ಡಬಲ್ ಮೀಟರ್​ ಮೋಹನ್​​, ಸುನೀಲ್​ ಸೇರಿದಂತೆ ಹಲವರ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್​​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.  

ಹಳೆ ದ್ವೇಷದ ಹಿನ್ನೆಲೆ ಈ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ವಿಲ್ಸನ್ ಗಾರ್ಡನ್ ನಾಗನ ವಿರೋಧಿ ಗ್ಯಾಂಗ್‌ನಲ್ಲಿ ಮಹೇಶ್ ಲೀಡರ್ ಆಗಿದ್ದನು.

ವಿಲ್ಸನ್​ಗಾರ್ಡನ್​​​ ನಾಗನ ವಿರೋಧಿಗಳನ್ನು ಒಗ್ಗೂಡಿಸಿ ರೌಡಿಶೀಟರ್ ಸಿದ್ದಾಪುರ ಮಹೇಶ್ ಕೊಲೆಗೆ ಸಂಚು ರೂಪಿಸಿದ್ದನು ಎಂದು ತಿಳಿದುಬಂದಿದೆ. ಈ ಸಂಚಿನ ಬಗ್ಗೆ ತಿಳಿದ ನಾಗನ ಗ್ಯಾಂಗ್ ಮಹೇಶ್‌ನನ್ನು ಹತ್ಯೆ ಮಾಡಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಜೈಲಿಂದ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ರೌಡಿಶೀಟರ್‌ನ ಕೊಲೆ

ಈ ಹಿಂದೆ ಶಾಂತಿನಗರ ಲಿಂಗನನ್ನು ನಾಗನ ಗ್ಯಾಂಗ್ ಕೊಲೆ ಮಾಡಿತ್ತು. ಅದಕ್ಕೆ ಪ್ರತೀಕಾರವಾಗಿ ಮಹೇಶ್ ನಾಗನ ಗೆಳೆಯ ಮದನ್​ನನ್ನು ಕೊಲೆ ಮಾಡಿದ್ದನು. ಮದನ ಕೊಲೆಗೆ ಸೇಡು ತೀರಿಸಿಕೊಳ್ಳಲು ಮಹೇಶನನ್ನು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇದೀಗ ವಿಲ್ಸನ್ ಗಾರ್ಡನ್ ನಾಗನ ಗ್ಯಾಂಗ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದೆ. ಡಬಲ್ ಮೀಟರ್ ಮೋಹನ್ ಹಾಗೂ ವಿಲ್ಸನ್​ ಗಾರ್ಡನ್​ ನಾಗನಿಗಾಗಿ ಪೊಲೀಸರ ಹುಡುಕಾಟ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...