ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್-​ವೇ ಅವಾಂತರ: ಬಿಡದಿ ಬಳಿ ನಿರ್ಗಮನ ರಸ್ತೆ ಬಂದ್‌ ಮಾಡಿದ ಹೆದ್ದಾರಿ ಪ್ರಾಧಿಕಾರ

Date:

ಬೆಂಗಳೂರು-ಮೈಸೂರು ನಡುವೆ ಎಕ್ಸ್‌ಪ್ರೆಸ್‌-ವೇ ಆರಂಭವಾದಾಗಿನಿಂದಲೂ ನಾನಾ ರೀತಿಯ ಸಮಸ್ಯೆಗಳು, ಅವಾಂತರಗಳಿಂದ ಸುದ್ದಿಯಾಗುತ್ತಲೇ ಇದೆ. ಮಳೆ, ಅಪಘಾತ, ಟೋಲ್‌ ಕಾರಣದಿಂದಾಗಿ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿತ್ತು. ಇದೀಗ, ಬಿಡದಿ ಬಳಿ ಎಕ್ಸ್‌ಪ್ರೆಸ್‌-ವೇ ಮತ್ತು ಸರ್ವೀಸ್‌ ರಸ್ತೆ ನಡುವಿನ ನಿರ್ಗಮನ ರಸ್ತೆಯನ್ನು ಹೆದ್ದಾರಿ ಪ್ರಾಧಿಕಾರ ಬಂದ್‌ ಮಾಡಿದೆ. ಮತ್ತೆ ಆಕ್ರೋಶಕ್ಕೆ ಗುರಿಯಾಗಿದೆ.

ಆರಂಭದಲ್ಲಿ ಎಕ್ಸ್‌ಪ್ರೆಸ್‌-ವೇ ನಡುವಿನ ಸಂಚಾರ ಬೆಂಗಳೂರು-ಮೈಸೂರು ನಡುವೆ ಮಾತ್ರವೇ ಇತ್ತು. ರಸ್ತೆ ಹಾದುಹೋಗುವ ರಾಮನಗರ, ಮಂಡ್ಯ ಜಿಲ್ಲಾ ಕೇಂದ್ರಗಳು ಸೇರಿದಂತೆ ಯಾವುದೇ ಪಟ್ಟಣಕ್ಕೆ ಸಂಪರ್ಕವೇ ಇರಲಿಲ್ಲ. ಹೆದ್ದಾರಿ ಪ್ರಾಧಿಕಾರದ ಈ ಧೋರಣೆಯ ವಿರುದ್ಧ ಪ್ರತಿಭಟನೆಗಳು ನಡೆದಿದ್ದವು. ಆ ಬಳಿಕ, ಎಲ್ಲ ನಗರಗಳಿಗೆ ಸಂಪರ್ಕಿಸುವಂತೆ ಎಕ್ಸ್‌ಪ್ರೆಸ್‌-ವೇಗೆಯಿಂದ ಸರ್ವೀಸ್‌ ರಸ್ತೆಗೆ ನಿರ್ಗಮನ ಮತ್ತು ಆಗಮನ ದ್ವಾರಗಳನ್ನು ತೆರೆಯಲಾಗಿತ್ತು.

ಇನ್ನು, ಎಕ್ಸ್‌ಪ್ರೆಸ್‌-ವೇ ಸಂಚಾರಕ್ಕೆ ದುಬಾರಿ ಟೋಲ್‌ ಶುಲ್ಕ ವಿಧಿಸಲಾಗಿರುವ ಪರಿಣಾಮ, ಬೆಂಗಳೂರಿನ ಶೇಷಗಿರಿಹಳ್ಳಿ ಬಳಿಯ ಟೋಲ್‌ನಲ್ಲಿ ಸುಂಕ ಪಾವತಿಸುವುದನ್ನು ತಪ್ಪಿಸಿಲು ಹಲವಾರು ವಾಹನ ಚಾಲಕರು ಬಿಡದಿ ಬಳಿಯೇ ಎಕ್ಸ್‌ಪ್ರೆಸ್‌-ವೇ ಇಂದ ಸರ್ವೀಸ್‌ ರಸ್ತೆಗೆ ಬಂದು, ಸರ್ವೀಸ್‌ ರಸ್ತೆ ಮೂಲಕ ಬೆಂಗಳೂರು ತಲುಪುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದರಿಂದ, ಟೋಲ್ ಸಂಗ್ರಹ ಕಡಿಮೆಯಾಗುತ್ತಿತ್ತು. ಈಗ, ಟೋಲ್ ಸುಂಕವನ್ನು ವಸೂಲಿ ಮಾಡಲೇಬೇಕು ಮತ್ತು ಸಂಗ್ರಹವನ್ನು ಹೆಚ್ಚಿಸಿಕೊಳ್ಳಬೇಕೆಂದು ನಿರ್ಧರಿಸಿರುವ ಹೆದ್ದಾರಿ ಪ್ರಾಧಿಕಾರಿ, ಬಿಡದಿ ಬಳಿ ಎಕ್ಸ್‌ಪ್ರೆಸ್‌ವೇ ಮತ್ತು ಸರ್ವೀಸ್‌ ರಸ್ತೆ ನಡುವಿನ ನಿರ್ಗಮನ ರಸ್ತೆಯನ್ನು ಬಂದ್‌ ಮಾಡಿದೆ. ಎಕ್ಸ್‌ಪ್ರೆಸ್‌-ವೇನಲ್ಲಿ ಬರುವ ವಾಹನ ಸವಾರರು ಶೇಷಗಿರಿಹಳ್ಳಿ ಟೋಲ್‌ನಲ್ಲಿ ಸುಂಕ ಪಾವತಿಸಿಯೇ ಬೆಂಗಳೂರಿಗೆ ಬರಬೇಕಾದ ಅನಿವಾರ್ಯತೆ ಎದುರಾಗಿದೆ.

ಈ ವರದಿ ಓದಿದ್ದೀರಾ?: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇ | ಟೋಲ್‌ ಎಂಬ ಸರ್ಕಾರಿ ದರೋಡೆ; 20 ತಿಂಗಳಲ್ಲಿ 438 ಕೋಟಿ ವಸೂಲಿ

ಪ್ರಾಧಿಕಾರದ ನಡೆಯ ವಿರುದ್ಧ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾವುದೇ ಸೂಚನೆಯನ್ನು ನೀಡದೆ, ಏಕಾಏಕಿ ನಿರ್ಗಮನ ರಸ್ತೆಯನ್ನು ಬಂದ್‌ ಮಾಡಲಾಗಿದೆ. ಈ ಧೋರಣೆ ಸರಿಯಲ್ಲ. ಮೈಸೂರು-ಮಂಡ್ಯದಿಂದ ಬಂದವರು ಕುಂಬಳಗೋಡು ಸೇರಿದಂತೆ ಇತರ ಪ್ರದೇಶಗಳಿಗೆ ಹೋಗಬೇಕೆಂದರೆ ಎಕ್ಸ್‌ಪ್ರೆಸ್‌-ವೇಯಿಂದ ಸರ್ವೀಸ್‌ ರಸ್ತೆಗೆ ಹೇಗೆ ಬರಬೇಕು. ಕೆಂಗೇರಿಗೆ ಬಂದು, ವಾಪಸ್‌ ಹೋಗಬೇಕೇ ಎಂದು ಕಿಡಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...