ನಗರ್ತಪೇಟೆ ಅಗ್ನಿ ಅವಘಡ | ಗೃಹ ಸಚಿವ ಪರಮೇಶ್ವರ್‌, ಸಚಿವ ಜಮೀರ್‌ ಅಹಮದ್‌ ಖಾನ್ ಭೇಟಿ

Date:

ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದ ಅಗ್ನಿಅವಘಡ ಸಂಭವಿಸಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಹೇಳಿದರು.

ನಗರ್ತಪೇಟೆಯಲ್ಲಿ ಅಗ್ನಿಅವಘಡ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ, ಘಟನೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

“ಎಫ್‌ಎಸ್‌ಎಲ್‌ನವರು ಸ್ಥಳಕ್ಕೆ ಭೇಟಿ ನೀಡಿ ಸ್ಯಾಂಪಲ್‌ ಸಂಗ್ರಹಿಸಿದ್ದಾರೆ. ವರದಿ ನಂತರ ಘಟನೆಯ ಬಗ್ಗೆ ಗೊತ್ತಾಗಲಿದೆ. ಸಂತ್ರಸ್ತರ ಕುಟುಂಬಸ್ಥರಿಗೆ ಸರ್ಕಾರದಿಂದ ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿಯವರೊಂದಿಗೆ ಮಾತನಾಡುತ್ತೇನೆ. ಇವತ್ತು ಬೆಳಗ್ಗೆ 3.15 ಗಂಟೆ ಸುಮಾರಿಗೆ ಕೃಷ್ಣ ಕಾಂಪ್ಲೆಕ್ಸ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. 38 ವರ್ಷದ ಮದನ್ ಎಂಬ ವ್ಯಕ್ತಿ ಮೃತಪಟ್ಟಿದ್ದಾನೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೊದಲು ನೆಲಮಹಡಿಯಲ್ಲಿ ಬೆಂಕಿ ತಗುಲಿದೆ. ತದನಂತರ ಎರಡನೇ ಮಹಡಿ, ಮೂರನೇ ಮಹಡಿವರೆಗೆ ಬೆಂಕಿ ಹಬ್ಬಿದೆ. ಮೇಲೆ ವಾಸವಿದ್ದವರು ತೀರಿಕೊಂಡಿದ್ದಾರೆ. ತನಿಖೆಯ ನಂತರ ಘಟನೆಗೆ ಕಾರಣ ಏನೆಂಬುದು ಗೊತ್ತಾಗಲಿದೆ ಎಂದು ಹೇಳಿದರು. ಪ್ಲಾಸ್ಟಿಕ್ ವಸ್ತುಗಳು, ರಬ್ಬರ್ ಮ್ಯಾಟ್‌ಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ಶೇಖರಿಸಿಟ್ಟಿದ್ದರು. ಬೆಂಕಿ ತಗುಲಿದ ನಂತರ ಮೇಲೆ ಹೋಗಲು ಆಗಿಲ್ಲ. ಕೆಳ ಮಹಡಿಯಲ್ಲಿ ಸತ್ತಿರುವ ಮದನ್ ಎಂಬಾತ ಮೇಲ್ಮಹಡಿಯ ತನ್ನ ಮನೆಗೆ ಬೀಗ ಹಾಕಿಕೊಂಡು ಬಂದಿದ್ದ. ಇದರಿಂದ ಅವರು ಹೊರಬರಲು ಸಾಧ್ಯವಾಗಿಲ್ಲ. ಘಟನೆಯಲ್ಲಿ ಒಟ್ಟು ಐವರು ತೀರಿಕೊಂಡಿದ್ದಾರೆ‌” ಎಂದರು.

“ಇದೊಂದು ದುರದೃಷ್ಟಕರ ಘಟನೆ.‌ ಈ ರೀತಿ ಆಗಬಾರದಾಗಿತ್ತು. ಚಿಕ್ಕ ಜಾಗದಲ್ಲಿ ನಾಲ್ಕೈದು ಮಹಡಿಯ ಕಟ್ಟಡಗಳನ್ನು ಕಟ್ಟಿದ್ದಾರೆ. ಈ ಭಾಗದಲ್ಲಿ ಸಾವಿರಾರು ಬಿಲ್ಡಿಂಗ್‌ಗಳು ಇದೇ ರೀತಿ ಇವೆ. ಈ ಬಗ್ಗೆ ಬಿಬಿಎಂಪಿ ಯವರು ಗಮನಹರಿಸಬೇಕು. ಟ್ರೇಡ್ ಲೈಸೆನ್ಸ್ ಕೊಡುವವರು ಬಿಬಿಎಂಪಿಯವರು. ಇಂತಹ ಅವಘಡಗಳಾದ ನಮಗೆ ಗೊತ್ತಾಗುತ್ತದೆ. ಬಹುತೇಕರು ಗೋಡನ್ ರೀತಿ ಮಾಡಿಕೊಂಡು, ಅಲ್ಲೇ ವಾಸವಿದ್ದಾರೆ” ಎಂದು ಹೇಳಿದರು.‌

ಸಚಿವ ಜಮೀರ್ 3

ದುರಂತ ಸ್ಥಳಕ್ಕೆ ಜಮೀರ್ ಅಹಮದ್ ಖಾನ್ ಭೇಟಿ

ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ವಿಲ್ಸನ್ ಗಾರ್ಡನ್ ನ ಚಿನ್ನಯ್ಯನ ಪಾಳ್ಯದಲ್ಲಿ ಸಿಲಿಂಡರ್ ಸ್ಫೋಟ ಗೊಂಡು ದುರಂತ ನಡೆದ ಸ್ಥಳ ಹಾಗೂ ನಗರ್ತಪೇಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿ ವೈಯಕ್ತಿಕ ವಾಗಿ ಪರಿಹಾರ ನೀಡಿದರು.

ವಿಲ್ಸನ್ ಗಾರ್ಡನ್ ಚೆನ್ನಯ್ಯನ ಪಾಳ್ಯದಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿ ಮನೆಗಳು ಹಾನಿ ಯಾದ ಸ್ಥಳಕ್ಕೆ ಭೇಟಿ ನೀಡಿ ಮೃತ ಬಾಲಕನ ಕುಟುಂಬಕ್ಕೆ ಐದು ಲಕ್ಷ ರೂ., ತಾಯಿ-ಮಗಳು ಗಾಯಳು ಕುಟುಂಬಕ್ಕೆ ಎರಡು ಲಕ್ಷ ರೂ., ಇಬ್ಬರು ಗಾಯಾಳು ಕುಟುಂಬಕ್ಕೆ ಎರಡು ಲಕ್ಷ ಹಾಗೂ ಸಣ್ಣ ಪುಟ್ಟ ಗಾಯಗೊಂಡವರಿಗೆ ತಲಾ 25 ಸಾವಿರ ರೂ. ನೀಡಿದರು. ಕೆ ಎಂ ಡಿಸಿ ಅಧ್ಯಕ್ಷ ಅಲ್ತಾಫ್ ಖಾನ್ ಉಪಸ್ಥಿತರಿದ್ದರು.

ನಂತರ ಬೆಂಗಳೂರು ನಗರ್ತ ಪೇಟೆಯಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕ ನಡೆದ ಸ್ಥಳಕ್ಕೆ ಭೇಟಿ ನೀಡಿದ ಸಚಿವರೂ ಮೃತರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ಮದನ್, ಸುರೇಶ್ ಕುಟುಂಬಕ್ಕೆ ವೈಯಕ್ತಿಕವಾಗಿ ತಲಾ ಐದು ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದರು. ಮುಖಂಡ ಯುವರಾಜ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...