ಇನ್ಮುಂದೆ ಪ್ರತಿ 13 ನಿಮಿಷಗಳಿಗೊಮ್ಮೆ ಚಲಿಸಲಿವೆ ನಮ್ಮ ಮೆಟ್ರೋ ಹಳದಿ ಮಾರ್ಗದ ರೈಲುಗಳು

Date:

ಮಂಗಳವಾರದಿಂದ (ಡಿಸೆಂಬರ್ 23) ನಮ್ಮ ಮೆಟ್ರೋ ಹಳದಿ ಮಾರ್ಗದ ರೈಲುಗಳು ಸೋಮವಾರದಿಂದ ಶನಿವಾರದವರೆಗೆ ಜನದಟ್ಟಣೆ ಅಧಿಕವಾಗಿರುವ ಸಮಯದಲ್ಲಿ ಪ್ರತಿ 13 ನಿಮಿಷಗಳಿಗೊಮ್ಮೆ ಚಲಿಸಲಿವೆ. ಆರನೇ ರೈಲು ಈ ಮಾರ್ಗದಲ್ಲಿ ಆರಂಭವಾದ ಕಾರಣದಿಂದಾಗಿ ಪ್ರಯಾಣಿಕರ ಕಾಯುವಿಕೆ ಅವಧಿ ಕಡಿಮೆಯಾಗುತ್ತಿದೆ.

ಭಾನುವಾರ ಮಾತ್ರ ಜನದಟ್ಟಣೆ ಅಧಿಕವಾಗಿರುವ ಸಮಯದಲ್ಲಿ 15 ನಿಮಿಷ ರೈಲು ಈ ಮಾರ್ಗದಲ್ಲಿ ಸಾಗಲಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ಪ್ರಕಾರ, ಎರಡೂ ಟರ್ಮಿನಲ್ ನಿಲ್ದಾಣಗಳಿಂದ -ಆರ್‌ವಿ ರೋಡ್ ಮತ್ತು ಬೊಮ್ಮಸಂದ್ರದಿಂದ ಮೊದಲ ಮತ್ತು ಕೊನೆಯ ರೈಲು ಸಮಯಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಇದನ್ನು ಓದಿದ್ದೀರಾ? ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ರೈಲು ಸಂಚಾರ ಇಂದಿನಿಂದ ಆರಂಭ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತುರ್ತು ಪರಿಸ್ಥಿತಿಗಳಿಗಾಗಿ ಒಂದು ರೈಲನ್ನು ಇರಿಸಲಾಗುತ್ತಿದೆ. ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ರೈಲು ಕಾರ್ಯಾಚರಣೆ ಆಗಸ್ಟ್ 11ರ ಬೆಳಿಗ್ಗೆಯಿಂದ ಪ್ರಾರಂಭವಾಗಿದೆ. ಈ ಮಾರ್ಗ ಆರಂಭವಾದ ಬಳಿಕ ದೈನಂದಿನ ಪ್ರಯಾಣಿಕರ ಸಂಖ್ಯೆ ಒಂದು ಮಿಲಿಯನ್‌ಗಿಂತಲೂ ಅಧಿಕವಾಗಿತ್ತು.

ಹಳದಿ ಮಾರ್ಗದಲ್ಲಿ ಕೇವಲ 3 ರೈಲುಗಳಿದ್ದ ಕಾರಣದಿಂದಾಗಿ ಪ್ರತಿ 25-30 ನಿಮಿಷಕ್ಕೊಮ್ಮೆ ರೈಲುಗಳು ಸಂಚರಿಸುತ್ತಿದ್ದವು. ಇದರಿಂದಾಗಿ ಪ್ರಯಾಣಿಕರು ಒಂದು ರೈಲು ತಪ್ಪಿದರೂ ಮತ್ತೆ 30 ನಿಮಿಷ ಕಾಯಬೇಕಾಗಿತ್ತು.

ಇದೀಗ ಹೊಸದಾಗಿ ಆರನೇ ರೈಲು ಆರಂಭವಾಗಲಿರುವ ಕಾರಣ ಕಾಯುವ ಅವಧಿ ಕಡಿಮೆಯಾಗಲಿದೆ. 2026ರ ಜನವರಿ ವೇಳೆಗೆ ಇನ್ನೂ ಎರಡು ರೈಲುಗಳನ್ನು ಸೇರಿಸಲು ಯೋಜಿಸಲಾಗಿದೆ. ವರ್ಷದ ಅಂತ್ಯದ ವೇಳೆಗೆ ಕಾಯುವ ಅವಧಿಯನ್ನು 10 ನಿಮಿಷಕ್ಕೆ ತಗ್ಗಿಸುವ ಗುರಿಯನ್ನು BMRCL ಹೊಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...