ಹೊಸ ವರ್ಷಾಚರಣೆ | ₹21 ಕೋಟಿ ಮೌಲ್ಯದ ಮಾದಕ ದ್ರವ್ಯ ಪ್ರಕರಣ: ಸಿನಿ ತಾರೆಯರ ಮೇಲೆ ಗುಮಾನಿ

Date:

ಬೆಂಗಳೂರಿನ ರಾಮಮೂರ್ತಿ ನಗರದ ಮನೆಯೊಂದರಲ್ಲಿ ಇತ್ತೀಚೆಗೆ ಜಪ್ತಿ ಮಾಡಿದ್ದ ₹21 ಕೋಟಿ ಮೌಲ್ಯದ ಡ್ರಗ್ಸ್ ಪ್ರಕರಣದಲ್ಲಿ ಸಿನಿ ತಾರೆಯರು, ಉದ್ಯಮಿಗಳು ಹಾಗೂ ನಾನಾ ಕ್ಷೇತ್ರದ ವ್ಯಕ್ತಿಗಳ ಹೆಸರು ಕೇಳಿಬಂದಿದೆ. ಕಳೆದ ಎರಡು ವರ್ಷಗಳ ಹಿಂದೆ ಡ್ರಗ್ಸ್‌ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ತಾರೆಯರ ಹೆಸರು ಕೇಳಿಬಂದಿತ್ತು.

ಹೊಸ ವರ್ಷಾಚರಣೆಗೆ ಬೆಂಗಳೂರು ಸಜ್ಜಾಗುತ್ತಿದೆ. ಪಾರ್ಟಿಗಳಿಗೆ ಪೂರೈಸಲೆಂದು ವಿದೇಶದಿಂದ ನಗರಕ್ಕೆ ಡ್ರಗ್ಸ್​ ಸಾಗಿಸಲಾಗುತ್ತಿತ್ತು. ನಗರದ ಮನೆಯೊಂದರಲ್ಲಿ ಡ್ರಗ್ಸ್ ಸಂಗ್ರಹಿಸಿಡಲಾಗಿತ್ತು. ಈ ಬಗ್ಗೆ ವಿಚಾರ ತಿಳಿದ ಸಿಸಿಬಿ ಪೊಲೀಸರು ಇತ್ತೀಚೆಗೆ ₹21 ಕೋಟಿ ಮೌಲ್ಯದ ಡ್ರಗ್ಸ್​ ಜಪ್ತಿ ಮಾಡಿದ್ದರು. ನೈಜೀರಿಯಾದ ಪ್ರಜೆ ಲಿಯೋನಾರ್ಡ್ ಒಕ್ವುಡಿಲಿ (44) ಎಂಬಾತನನ್ನು ಬಂಧಿಸಿದ್ದರು.

ಸದ್ಯ, ಆರೋಪಿಯನ್ನು ತೀವ್ರ ವಿಚಾರಣೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಆರೋಪಿಯ ಮೊಬೈಲ್ ಪರಿಶೀಲನೆ ನಡೆಸಿದಾಗ ಕೆಲ ಸಿನಿಮಾ ನಟ–ನಟಿಯರು, ಕೆಲ ವ್ಯಾಪಾರಿಗಳು, ಉದ್ಯಮಿಗಳು ಹಾಗೂ ನಾನಾ ಕ್ಷೇತ್ರಗಳ ಕೆಲ ವ್ಯಕ್ತಿಗಳು ಈತನಿಂದ ಡ್ರಗ್ಸ್ ಖರೀದಿಸುತ್ತಿದ್ದರು ಎಂಬ ಮಾಹಿತಿ ಇದೆ. ಆದರೆ, ಅದಕ್ಕೆ ಸಂಬಂಧಪಟ್ಟ ಪುರಾವೆಗಳು ಲಭ್ಯವಾಗಿಲ್ಲ. ಪ್ರಮುಖ ಪೆಡ್ಲರ್ ಆಗಿದ್ದ ಲಿಯೋನಾರ್ಡ್, ನಗರದಲ್ಲಿರುವ ಉಪ ಪೆಡ್ಲರ್‌ಗಳ ಮೂಲಕ ಡ್ರಗ್ಸ್ ಮಾರುತ್ತಿದ್ದನು ಎಂದು ಪೊಲೀಸ್ ಮೂಲಗಳು ಹೇಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿ ಲಿಯೋನಾರ್ಡ್, ಎಲ್ಲಿಂದ ಡ್ರಗ್ಸ್ ತಂದಿದ್ದನು? ಯಾರಿಗೆ ಮಾರಾಟ ಮಾಡುತ್ತಿದ್ದನು? ಎಷ್ಟು ಪ್ರಮಾಣದಲ್ಲಿ ವಹಿವಾಟು ನಡೆಸಿದ್ದನು? ಎಂಬಿತ್ಯಾದಿ ಸಂಗತಿಗಳ ಬಗ್ಗೆ ಸದ್ಯಕ್ಕೆ ತನಿಖೆ ನಡೆಸಲಾಗುತ್ತಿದೆ. ಈ ಡ್ರಗ್ಸ್ ಜಾಲದಲ್ಲಿ ಯಾರೆಲ್ಲ ಇದ್ದಾರೆ ಎಂಬುದನ್ನು ತಿಳಿದುಕೊಂಡು, ತನಿಖೆ ಮುಂದುವರಿಸಲಾಗುವುದು. ಅಗತ್ಯವಿದ್ದರೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? ಐಟಿ ದಾಳಿ | ಜುವೆಲ್ಲರಿ ಶಾಪ್ ಮಾಲೀಕರ ಮನೆಯಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳು ಪತ್ತೆ

ಮುಚ್ಚಳಿಕೆ ಬರೆಸಿಕೊಂಡ ಪೊಲೀಸರು

ಹೊಸ ವರ್ಷಾಚರಣೆಯಂದು ಡ್ರಗ್ಸ್ ಮಾರಾಟ ಹೆಚ್ಚಾಗುವ ಮಾಹಿತಿ ತಿಳಿದಿರುವ ಪೊಲೀಸರು, ಹಳೆ ಪ್ರಕರಣದ ಆರೋಪಿಗಳನ್ನು ವಶಕ್ಕೆ ಪಡೆದು ಮುಚ್ಚಳಿಕೆ ಬರೆಸಿಕೊಳ್ಳುತ್ತಿದ್ದಾರೆ.

ಡ್ರಗ್ಸ್ ಸಾಗಣೆ, ಮಾರಾಟ ಹಾಗೂ ಸೇವನೆಗೆ ಸಂಬಂಧಪಟ್ಟ ಅಪರಾಧಗಳನ್ನು ಎನ್‌ಡಿಪಿಎಸ್ ಕಾಯ್ದೆಯಡಿ ದಾಖಲಿಸಿಕೊಳ್ಳಲಾಗುತ್ತಿದೆ. ಪ್ರಕರಣದಲ್ಲಿ ಜೈಲಿಗೆ ಹೋಗಿದ್ದ ಸುಮಾರು 180 ಮಂದಿ ಜಾಮೀನು ಮೇಲೆ ಹೊರಗೆ ಬಂದಿದ್ದಾರೆ. ಅವರೆಲ್ಲರನ್ನೂ ವಶಕ್ಕೆ ಪಡೆದು ಮುಚ್ಚಳಿಕೆ ಬರೆಸಿಕೊಂಡು ಎಚ್ಚರಿಕೆ ನೀಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...