ಬೆಂಗಳೂರು-ಮೈಸೂರು ಹೆದ್ದಾರಿ: 24 ಸ್ಕೈವಾಕ್‌ ನಿರ್ಮಿಸಲು ನಿರ್ಧರಿಸಿದ ಹೆದ್ದಾರಿ ಪ್ರಾಧಿಕಾರ

Date:

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾದ ಬಳಿಕ ಸುತ್ತಮುತ್ತ ಗ್ರಾಮಗಳಿಗಿದ್ದ ಸಂಪರ್ಕ ಕಡಿತಗೊಂಡಿದೆ. ಇದರಿಂದ ಸುತ್ತಮುತ್ತ ಗ್ರಾಮಗಳಲ್ಲಿ ವಾಸಿಸುವ ಜನರು ತಮ್ಮ ಗ್ರಾಮಗಳಿಗೆ ತೆರಳಲು ಹೆದ್ದಾರಿ ದಾಟಲು ಪರದಾಡುವಂತಾಗಿದೆ. ರಸ್ತೆ ದಾಟಲು ಜನರು ತಮ್ಮ ಪ್ರಾಣವನ್ನೇ ಪಣಕ್ಕಿಡಬೇಕಾದ ಸ್ಥಿತಿ ಎದುರಾಗಿದೆ. ಈ ಬಗ್ಗೆ ಸ್ಥಳೀಯರಿಂದ ಪದೇ ಪದೆ ದೂರುಗಳು ಬಂದ ಹಿನ್ನೆಲೆ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್‌ಎಚ್‌ಎಐ) ಬೆಂಗಳೂರು-ಮೈಸೂರು ಹೆದ್ದಾರಿಗೆ ಅಡ್ಡಲಾಗಿ ಒಟ್ಟು 24 ಸ್ಕೈವಾಕ್‌ಗಳನ್ನು ನಿರ್ಮಿಸಲು ನಿರ್ಧರಿಸಿದೆ.

“ಬೆಂಗಳೂರು-ಮೈಸೂರಿನ ಹೆದ್ದಾರಿಯಲ್ಲಿ ವಾಹನಗಳು ವೇಗವಾಗಿ ಚಲಿಸುತ್ತವೆ. ಈ ವೇಳೆ, ಸ್ಕೈವಾಕ್‌ಗಳ ಅನುಪಸ್ಥಿತಿಯಲ್ಲಿ, ಜನರು ರಸ್ತೆ ದಾಟಲು ಪ್ರಯತ್ನಿಸುವ ಮೂಲಕ ತಮ್ಮ ಪ್ರಾಣವನ್ನು ಅಪಾಯಕ್ಕೆ ತಂದುಕೊಳ್ಳುತ್ತಾರೆ” ಎಂದು ಜೂನ್‌ನಲ್ಲಿ ಹೆದ್ದಾರಿಯನ್ನು ಪರಿಶೀಲಿಸಿದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್ ಕುಮಾರ್ ಹೇಳಿದ್ದರು.

“ಪಾದಚಾರಿಗಳು ಹೆಚ್ಚಿನ ವೇಗದಲ್ಲಿ ವಾಹನಗಳು ಚಲಿಸುವ ಹೆದ್ದಾರಿಯನ್ನು ದಾಟಲು ಪ್ರಯತ್ನಿಸುವ ಮೂಲಕ ತಮ್ಮ ಪ್ರಾಣವನ್ನು ಅಪಾಯಕ್ಕೆ ತಂದುಕೊಳ್ಳುತ್ತಾರೆ. ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕು. ಹಾಗಾಗಿ, ಹಲವಾರು ಕ್ರಮಗಳನ್ನು ಹಾಕಿಕೊಳ್ಳಲಾಗಿದೆ. ಈ ಪೈಕಿ ಸ್ಕೈವಾಕ್‌ಗಳನ್ನು ನಿರ್ಮಿಸುವುದು ಒಂದು ಉತ್ತಮವಾದ ಕ್ರಮ” ಎಂದು ಸಲಹೆ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರವೇಶ ನಿಯಂತ್ರಿತ ಹೆದ್ದಾರಿಯಲ್ಲಿ ಜನರು ಪ್ರವೇಶಿಸುವುದನ್ನು ತಡೆಯಲು ಲೋಹದ ತಡೆ ಬೇಲಿಯನ್ನು ಹಾಕಲಾಗಿದೆ. ಆದರೆ, ಬೇರೆಡೆ ತೆರಳಲು ಮಾರ್ಗಗಳಿಲ್ಲದ ಕಾರಣ ಪಾದಚಾರಿಗಳು ಹಲವೆಡೆ ಹೆದ್ದಾರಿ ದಾಟಲು ಬೇಲಿಯನ್ನು ಕಡಿದು ಹಾಕಿದ್ದಾರೆ” ಎಂದು ಎನ್‌ಎಚ್‌ಎಐ ಮೂಲಗಳು ತಿಳಿಸಿವೆ.

“ಸುಮಾರು ಒಂದು ವರ್ಷದಲ್ಲಿ 24 ಸ್ಕೈವಾಕ್‌ಗಳನ್ನು ಹೆದ್ದಾರಿಗೆ ಅಡ್ಡಲಾಗಿ ನಿರ್ಮಿಸಲಾಗುವುದು. ಬೆಂಗಳೂರು ಹೊರವಲಯದಲ್ಲಿರುವ ಪಂಚಮುಖಿ ಗಣೇಶ ದೇವಸ್ಥಾನದ ನಂತರ ಪ್ರಾರಂಭವಾಗುವ ಫ್ಲೈಓವರ್ ರ್‍ಯಾಂಪ್‌ನಲ್ಲಿ ಎಲ್ಲ ವಾಹನಗಳು ಇಳಿಯುವ ಕಣಿಮಿಣಿಕೆಯಲ್ಲಿ ಮೊದಲ ಸ್ಕೈವಾಕ್ ನಿರ್ಮಿಸಿದರೆ, ಕೊನೆಯ ಸ್ಕೈವಾಕ್ ಸಿದ್ದಲಿಂಗಪುರದಲ್ಲಿ ಬರಲಿದೆ” ಎಂದು ಎನ್‌ಎಚ್‌ಎಐ ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಾಜಿ ಸಿಎಂ ಎಚ್‌ಡಿಕೆ ಆಸ್ಪತ್ರೆಗೆ ದಾಖಲು

ಈ ಸ್ಕೈವಾಕ್‌ಗಳ ನಿರ್ಮಾಣದಿಂದ ಮೈಸೂರು ಮತ್ತು ಬೆಂಗಳೂರು ನಡುವಿನ ಹೆದ್ದಾರಿಯುದ್ದಕ್ಕೂ ಅನೇಕ ಹಳ್ಳಿಗಳ ಜನರಿಗೆ ಪ್ರಯೋಜನವಾಗಿದೆ.

ಕಣಿಮಿಣಿಕೆ, ಮಂಚನಾಯಕನಹಳ್ಳಿ, ಕಲ್ಲುಗೊಪ್ಪಹಳ್ಳಿ, ಹುಲ್ತಾರ್ ಹೊಸದೊಡ್ಡಿ, ಮಾದಾಪುರ, ದಬನಗುಂದ, ರುದ್ರಾಕ್ಷಿಪುರ, ಅಗರಲಿಂಗನದೊಡ್ಡಿ, ಮೊಬ್ಬಲಗೆರೆ, ಗೆಜ್ಜಲಗೆರೆ ಕೈಗಾರಿಕಾ ಪ್ರದೇಶ, ಗೆಜ್ಜಲಗೆರೆ, ಬಿ ಗೌಡಗೆರೆ, ಬೂದನೂರು, ಕಲ್ಲಂಗಡಿ, ಗೌಡನಹಳ್ಳಿ, ಬ್ರಹ್ಮಪುರ, ಕಳಸ್ತವಾಡಿ ಮತ್ತು ಸಿದ್ದಲಿಂಗಪುರ, ಕಲಮಿಣಿಕೆಯಲ್ಲಿ ಸ್ಕೈವಾಕ್‌ಗಳು ಬರಲಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...