ನ್ಯಾ. ಪಾಟೀಲ್ ನಾಗಲಿಂಗನಗೌಡರಿಂದ ಮೋಟಾರು ವಾಹನ ಕಾಯ್ದೆ ಉಲ್ಲಂಘನೆ : ವಜಾಕ್ಕೆ ಆಗ್ರಹ

Date:

ಕರ್ನಾಟಕ ಭೂ ಕಬಳಿಕೆ ವಿಶೇಷ ನ್ಯಾಯಾಲಯದ ನ್ಯಾಯಿಕ ಸದಸ್ಯರಾದ ಪಾಟೀಲ್ ನಾಗಲಿಂಗನಗೌಡ ಅವರಿಂದಲೇ ಮೋಟಾರು ವಾಹನ ಕಾಯ್ದೆ ಉಲ್ಲಂಘನೆಯಾಗಿದೆ. ಇವರು ಕರ್ನಾಟಕ ಸರ್ಕಾರದ ಲಾಂಛನ ಮತ್ತು ಫಲಕವನ್ನು ಕಬಳಿಕೆ ಮಾಡಿರುವುದರಿಂದ ತಕ್ಷಣ ಅವರನ್ನು ನ್ಯಾಯಿಕ ಸದಸ್ಯತ್ವದಿಂದ ವಜಾಗೊಳಿಸಬೇಕು ಎಂದು ನೈಜ ಹೋರಾಟಗಾರರ ವೇದಿಕೆ ಒತ್ತಾಯಿಸಿದೆ.

ಈ ಬಗ್ಗೆ ನೈಜ ಹೋರಾಟಗಾರರ ವೇದಿಕೆಯ ಎಚ್.ಎಂ.ವೆಂಕಟೇಶ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಪತ್ರದಲ್ಲೇನಿದೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ಸರ್ಕಾರದ ಭೂಕಬಳಿಕೆ ವಿಶೇಷ ನ್ಯಾಯಾಲಯದಲ್ಲಿ ನ್ಯಾಯಿಕ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿರುವ ನ್ಯಾಯಾಧೀಶರಾದ ಪಾಟೀಲ್ ನಾಗಲಿಂಗನಗೌಡ ರವರಿಗೆ ಸರ್ಕಾರವು ಸಂಚರಿಸಲು ಇನ್ನೋವಾ ಕಾರನ್ನು (KA 01 GA 0414) ನೀಡಿದೆ. ಆದರೆ, ಅವರು ಸ್ವಂತ ಖರೀದಿಸಿರುವ WHITE PEARL CRYSTAL CAR (KA 01 MV 8009) ಕಾರಿಗೆ ಸರ್ಕಾರದ ಲಾಂಛನ ಮತ್ತು ಕರ್ನಾಟಕ ಸರ್ಕಾರ ಎಂಬ ನಾಮಫಲಕವನ್ನು ಅಳವಡಿಸಲಾಗಿದೆ. ಇದೇ ವಾಹನದಲ್ಲಿ ನ್ಯಾಯಾಧೀಶರು ಮತ್ತು ಅವರ ಕುಟುಂಬದ ಸದಸ್ಯರು ಸಂಚರಿಸುತ್ತಿದ್ದಾರೆ” ಎಂದು ಉಲ್ಲೇಖಿಸಿದ್ದಾರೆ.

ಈ ಬಗ್ಗೆ ನಮ್ಮ ವೇದಿಕೆ ಗಮನಕ್ಕೆ ಬಂದ ತಕ್ಷಣ ಕರ್ನಾಟಕ ಸರ್ಕಾರದ ಆರ್. ಟಿ. ಓ. ಸೆಂಟ್ರಲ್ ಎಚ್.ಎಸ್.ಆರ್ ಲೇಔಟ್ ಅವರಿಗೆ ಈ ಕಾರಿನ ಸಂಖ್ಯೆಗೆ ಮತ್ತು ಮಾಲೀಕರಿಗೆ ಕರ್ನಾಟಕ ಸರ್ಕಾರದ ಲಾಂಛನವನ್ನು ಮತ್ತು ಕರ್ನಾಟಕ ಸರ್ಕಾರ ಎಂಬ ಫಲಕವನ್ನು ಅಳವಡಿಸಿ ಸಂಚರಿಸಲು ಅನುಮತಿ ನೀಡಿದ್ದೀರಾ? ನೀಡಿದ್ದಲ್ಲಿ ಅದರ ಅನುಮತಿ ಪತ್ರವನ್ನು ನೀಡುವಂತೆ ಕೇಳಲಾಗಿತ್ತು. ಇದಕ್ಕೆ ಆರ್.ಟಿ.ಓ ಸೆಂಟ್ರಲ್ ಎಚ್.ಎಸ್.ಆರ್ ಲೇಔಟ್‌ನಿಂದ ಮಾಹಿತಿ ನೀಡಿದ್ದು, “ಯಾವುದೇ ರೀತಿಯ ಅನುಮತಿಯನ್ನು ನೀಡಿಲ್ಲ” ಎಂದು ತಿಳಿಸಿದ್ದಾರೆ.

“ಕರ್ನಾಟಕ ಸರ್ಕಾರದ ಸಾರಿಗೆ ಇಲಾಖೆ ಇಂತಹ ನಾಮಫಲಕಗಳನ್ನು ಹಾಕಿಕೊಂಡು ಸಂಚರಿಸುತ್ತಿರುವ ಕಾರಿನ ಮಾಲೀಕರಿಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ಆಶ್ಚರ್ಯವಾಗಿದೆ. ಸಾಮಾನ್ಯವಾಗಿ ಕಾನೂನಿನ ಅರಿವು ಇಲ್ಲದ ವ್ಯಕ್ತಿಗಳು ಈ ರೀತಿ ಸರ್ಕಾರದ ಲಾಂಛನವನ್ನು ಬಳಸಿಕೊಂಡರೆ, ಅವರಿಗೆ ತಿಳಿವಳಿಕೆಯನ್ನು ನೀಡಬಹುದು. ಆದರೆ, ಕರ್ನಾಟಕದ ನ್ಯಾಯಾಂಗದಲ್ಲಿ ಜಿಲ್ಲಾ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿ ನಿವೃತ್ತಿಯಾದ ನಂತರ ಕರ್ನಾಟಕ ಸರ್ಕಾರವು ಅವರನ್ನು ಭೂಕಬಳಿಕೆ ವಿಶೇಷ ನ್ಯಾಯಾಲಯದ ನ್ಯಾಯಿಕ ಸದಸ್ಯರನ್ನಾಗಿ ನೇಮಿಸಿ ಭೂಕಬಳಿಕೆ ಮಾಡಿರುವವರ ವಿರುದ್ಧ ವಿಚಾರಣೆಯನ್ನು ನಡೆಸಿ ತೀರ್ಪನ್ನು ನೀಡುವ ಈ ನ್ಯಾಯಾಧೀಶರೇ ಕಾನೂನು ಬಾಹಿರವಾಗಿ ಸಾರಿಗೆ ಕಾಯ್ದೆಗಳನ್ನು ಉಲ್ಲಂಘಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗಬ್ಬೆದ್ದು ನಾರುತ್ತಿರುವ ಪಾರಂಪರಿಕ ರಸೆಲ್ ಮಾರುಕಟ್ಟೆ: ಕ್ರಮ ಕೈಗೊಳ್ಳದ ಬಿಬಿಎಂಪಿ

“ಕರ್ನಾಟಕ ಸರ್ಕಾರ ನ್ಯಾಯಾಧೀಶರಿಗೆ ಸಂಚರಿಸಲು ಸರ್ಕಾರದ ವತಿಯಿಂದ ಇನ್ನೋವಾ ಕಾರು ನೀಡಿದರು, ಅವರು ಸದರಿ ಕಾರನ್ನು ಕುಟುಂಬದವರ ಸಂಚಾರಕ್ಕೆ ಬಳಸುತ್ತಿದ್ದಾರೆ. ಹಾಗೂ ಅವರು ಸ್ವಂತ ಕಾರನ್ನು ನ್ಯಾಯಾಲಯಕ್ಕೆ ತೆಗೆದುಕೊಂಡು ಬರುತ್ತಿದ್ದಾರೆ. ಒಮ್ಮೆ ಸರ್ಕಾರದ ಲಾಂಛನ ಮತ್ತು ನಾಮಫಲಕವಿರುವ ಅವರ ಸ್ವಂತ ಕಾರನ್ನು ಅವರ ಕುಟುಂಬದವರು ಬಳಸುತ್ತಿದ್ದು ಸಾರ್ವಜನಿಕರು ಈ ಕಾರನ್ನು ನೋಡಿ ಗೊಂದಲಕ್ಕೆ ಒಳಗಾಗಿದ್ದಾರೆ” ಎಂದು ಬರೆದಿದ್ದಾರೆ.

“ಸರ್ಕಾರದ ಲಾಂಛನ ಮತ್ತು ಸರ್ಕಾರದ ನಾಮಫಲಕವನ್ನೇ ಕಬಳಿಸಿರುವ ಇವರನ್ನು ಭೂಕಬಳಿಕ ವಿಶೇಷ ನ್ಯಾಯಾಲಯದ ನ್ಯಾಯಿಕ ಸದಸ್ಯತ್ವದಿಂದ ತಕ್ಷಣ ಬಿಡುಗಡೆಗೊಳಿಸಿ, ಸದರಿ ನ್ಯಾಯಿಕ ಸದಸ್ಯ ಸ್ಥಾನಕ್ಕೆ (ಅಯೋಗ್ಯರನ್ನು ಹೊರತುಪಡಿಸಿ) ಯೋಗ್ಯರನ್ನು ಆಯ್ಕೆ ಮಾಡಬೇಕೆಂದು” ನೈಜ ಹೋರಾಟಗಾರರ ವೇದಿಕೆ ಮನವಿ ಮಾಡಿದೆ.

“ಪಾಟೀಲ್ ನಾಗಲಿಂಗನಗೌಡರು ಸರ್ಕಾರದ ಲಾಂಛನ ಮತ್ತು ಸರ್ಕಾರದ ನಾಮಫಲಕವನ್ನು ಕಾನೂನುಬಾಹಿರವಾಗಿ ದುರುಪಯೋಗ ಪಡಿಸಿಕೊಂಡಿದ್ದು, ಅವರ ಮೇಲೆ ಕಾನೂನಿನ ಕ್ರಮ ಕೈಗೊಂಡು, ಈ ನೆಲದ ಕಾನೂನು ಪ್ರತಿಯೊಬ್ಬರಿಗೂ ಒಂದೇ ಎಂಬುದನ್ನು ಸಾಬೀತು ಪಡಿಸಬೇಕು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...