ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚಾರ ಪುನರಾರಂಭ

Date:

ಮಂಗಳವಾರ ರಾತ್ರಿ ‘ನಮ್ಮ ಮೆಟ್ರೋ’ ಹಸಿರು ಮಾರ್ಗದಲ್ಲಿ ಸಂಚರಿಸಿದ ರೋಡ್‌ ಕಮ್‌ ರೈಲ್ ವಾಹನವು ಆಯತಪ್ಪಿದ್ದ ಹಿನ್ನೆಲೆಯಲ್ಲಿ ಹಸಿರು ಮಾರ್ಗದ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿತ್ತು. ಸದ್ಯ ಆರ್.ಆರ್.ವಿ ಅನ್ನು ಕ್ರೇನ್ ಸಹಾಯದಿಂದ ಟ್ರ್ಯಾಕ್‌ನಿಂದ ತೆರವುಗೊಳಿಸಲಾಗಿದ್ದು, ಮಧ್ಯಾಹ್ನ 03:40ರ ಬಳಿಕ ಕಾರ್ಯಾಚರಣೆಯನ್ನು ಎಂದಿನಂತೆ ಪುನರಾರಂಭಿಸಲಾಗಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಬಿಎಂಆರ್‌ಸಿಎಲ್, ಯಶವಂತಪುರದಿಂದ ಮಂತ್ರಿ ಸ್ಕ್ವೇರ್ ಸಂಪಿಗೆ ರಸ್ತೆ ಮೆಟ್ರೋ ನಿಲ್ದಾಣದ ನಡುವಿನ ಕಾರ್ಯಾಚರಣೆಯನ್ನು ಮಧ್ಯಾಹ್ನ 2 ಗಂಟೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ನಂತರ, ಆರ್.ಆರ್.ವಿ ವಾಹನವನ್ನು ಕ್ರೇನ್‌ನ ಸಹಾಯದಿಂದ ಟ್ರ್ಯಾಕ್‌ನಿಂದ ತೆರವುಗೊಳಿಸಲಾಗಿದೆ. 03:40ಕ್ಕೆ ರೈಲು ಕಾರ್ಯಾಚರಣೆಯನ್ನು ಎಂದಿನಂತೆ ಪುನರಾರಂಭಿಸಲಾಗಿದೆ. ಪ್ರಯಾಣಿಕರಿಗೆ ಇದರಿಂದಾಗಿರುವ ಅನಾನುಕೂಲತೆಗೆ ವಿಷಾದಿಸುತ್ತೇವೆ” ಎಂದು ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.

ಆಗಿದ್ದೇನು?
ಇಂದು ರೋಡ್‌ ಕಮ್‌ ರೈಲ್ ವಾಹನವು (ಆರ್‌ಆರ್‌ವಿ) ಡಿಪೋ ಪರೀಕ್ಷೆಯ ನಂತರ, ಪೀಣ್ಯ ಡಿಪೋದಿಂದ ನ್ಯಾಷನಲ್ ಕಾಲೇಜು ಮೆಟ್ರೋ ನಿಲ್ದಾಣದವರೆಗೆ ಕಾರ್ಯಾಚರಣೆ ಇಲ್ಲದ ವೇಳೆಯಲ್ಲಿ ರಾಜಾಜಿನಗರದ ಬಳಿ ತಿರುವು ಸ್ಥಳಗಳನ್ನು ಟ್ರಯಲ್ ನಡೆಸುವ ಸಮಯದಲ್ಲಿ ವಾಹನ ಹಿಂದಿನ ಚಕ್ರದ ರಸ್ತೆ ಮತ್ತು ರೈಲು ಆಯತಪ್ಪಿತ್ತು. ಇದನ್ನು ಇತರ ಆರ್‌ಆರ್‌ವಿ ವಾಹನದ ಸಹಾಯದಿಂದ ಕೂಡ ಸರಿಪಡಿಸಲು ಸಾಧ್ಯವಾಗಿರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ವೇಳೆ ಈ ಸಮಸ್ಯೆಯಿಂದ ಯಶವಂತಪುರದ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರು ಹರಸಾಹಸ ಪಡಬೇಕಾಗಿತ್ತು. ಮೆಟ್ರೋ ಪ್ರಯಾಣಿಕರಿಗಾದ ಅನಾನುಕೂಲತೆಯನ್ನು ಕಡಿಮೆ ಮಾಡಲು, ಮೊದಲು ಯಶವಂತಪುರ ನಂತರ ರಾಜಾಜಿನಗರದಿಂದ ಮಂತ್ರಿ ಸ್ಕ್ವೇರ್ ಸಂಪಿಗೆ ರಸ್ತೆ ಮೆಟ್ರೋ ನಿಲ್ದಾಣದವರೆಗೆ ಎಲ್ಲ ಕಾರ್ಯಾಚರಣೆಯ ವಿಧಾನವನ್ನು ಅನುಸರಿಸಿ ಬೆಳಗ್ಗೆ 06.30 ರಿಂದ 2 ಗಂಟೆಗಳವರೆಗೆ ಏಕಮುಖ ಮಾರ್ಗದಲ್ಲಿ ಮೆಟ್ರೋ ರೈಲು ಕಾರ್ಯಾಚರಣೆಗಳನ್ನು ನಡೆಸಲಾಗಿತ್ತು. ಈಗ ತೆರವುಗೊಳಿಸಲಾಗಿದ್ದು, ಮಧ್ಯಾಹ್ನ 03:40ರ ಬಳಿಕ ಕಾರ್ಯಾಚರಣೆಯನ್ನು ಎಂದಿನಂತೆ ಪುನರಾರಂಭಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...