ಬ್ರ್ಯಾಂಡ್ ಬೆಂಗಳೂರಲ್ಲ, ಮೊದಲು ಬಿಬಿಎಂಪಿ ಚುನಾವಣೆ ನಡೆಸಿ: ಆಪ್

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆ ನಡೆದು ಎರಡು ವರ್ಷಗಳು ಕಳೆದಿವೆ. ಹಿಂದಿನ ಬಿಜೆಪಿ ಸರ್ಕಾರ ಗ್ರೇಟರ್‌ ಬೆಂಗಳೂರು ಮಾಡುವುದಾಗಿ ತಿಳಿಸಿತ್ತು. ಅದರಂತೆ, ನಾಲ್ಕೈದು ಪಾಲಿಕೆಗಳನ್ನು ವಿಂಗಡಿಸಲು ನಿರ್ಧಾರ ಮಾಡಿತ್ತು. ಕೊರೊನಾ ಬಂದ ಬಳಿಕ ನಿರ್ಧಾರ ಕೈಬಿಡಲಾಗಿತ್ತು. ಇನ್ನೂ ಬಿಬಿಎಂಪಿ ಚುನಾವಣೆ ಯಾವಾಗ ನಡೆಯಲಿದೆ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಡಾ. ಸತೀಶ್ ಕುಮಾರ್ ಅವರು ಸರ್ಕಾರಕ್ಕೆ ಪ್ರಶ್ನಿಸಿದರು.

“ಬಿಬಿಎಂಪಿ ಮರುವಿಂಗಡಣೆಗೆ ಮುಂದಾಗಿದ್ದ ಬಿಜೆಪಿ ಸರ್ಕಾರದ ಅವಧಿಯಲ್ಲೇ, ಸಾರ್ವಜನಿಕ ವಲಯ ಹಾಗೂ ನಾನಾ ಸಂಘಟನೆಗಳಿಂದ ವಾರ್ಡ್​ಗಳ ವಿಂಗಡಣೆ ಸಮರ್ಪಕವಾಗಿ ಆಗಿಲ್ಲವೆಂದು 3,200ಕ್ಕೂ ಹೆಚ್ಚು ಆಕ್ಷೇಪಣೆಗಳು ಬಂದಿದ್ದವು. ಆದರೆ, ನಗರಾಭಿವೃದ್ಧಿ ಇಲಾಖೆ ಈ ಆಕ್ಷೇಪಣೆಗಳನ್ನು ಯಾವುದೇ ರೀತಿ ಪರಿಶೀಲನೆ ಮಾಡದೆ, ಮೂರು ದಿನಗಳಲ್ಲೇ 243 ವಾರ್ಡ್ ಮರುವಿಂಗಡಣೆ ಮಾಡಿ ಆದೇಶ ಹೊರಡಿಸಿದೆ” ಎಂದರು.

“ಈ ವಿಚಾರ ನ್ಯಾಯಾಲಯದ ಮೆಟ್ಟಿಲೇರಿದ ಬಳಿಕ, ಕೋರ್ಟ್ 12 ವಾರಗಳ ಗಡುವು ನೀಡಿತ್ತು. ಸೆಪ್ಟೆಂಬರ್ 18ಕ್ಕೆ ಕೋರ್ಟ್ ನೀಡಿರುವ ಈ ಗಡುವು ಮುಕ್ತಾಯವಾಗಲಿದೆ. ಇದೀಗ, ಕಾಂಗ್ರೆಸ್ ಸರ್ಕಾರ ತರಾತುರಿಯಲ್ಲಿ 243 ವಾರ್ಡ್​ಗಳ ಬದಲಿಗೆ 225ಕ್ಕೆ ಮಾಡಿ ಅಧಿಸೂಚನೆ ಹೊರಡಿಸಿದೆ. ಈಗಲೂ ವಾರ್ಡ್ ಮರುವಿಂಗಡಣೆಗೆ 3,300 ಆಕ್ಷೇಪಣೆಗಳು ಬಂದಿವೆ. ಆದರೂ, 3,300 ಆಕ್ಷೇಪಣೆಗಳಿಗೆ ಸರ್ಕಾರ ಏನು ಉತ್ತರ ನೀಡಿದೆ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಲ್ಲಿಂದ ಎಷ್ಟು ದೂರು?

ಯಶವಂತಪುರ-1878, ಚೌಡೇಶ್ವರಿ ವಾರ್ಡ್ (ಯಲಹಂಕ)- 525, ಕಲ್ಕೆರೆ (ಕೆ.ಆರ್ ಪುರಂ) – 311, ಶಿವಾಜಿನಗರ- 109 ಆಕ್ಷೇಪಣೆಗಳು ಬಂದಿವೆ.

ಬ್ರ್ಯಾಂಡ್ ಬೆಂಗಳೂರಲ್ಲ, ಬೆಸ್ಟ್ ಬೆಂಗಳೂರು ಮಾಡಿ

“2 ವರ್ಷಗಳಿಂದ ಬಿಬಿಎಂಪಿ ಚುನಾವಣೆಯಾಗಿಲ್ಲ, ಕಾರ್ಪೋರೇಟರ್‌ಗಳೂ ಇಲ್ಲ. ಆದರೂ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬ್ರ್ಯಾಂಡ್ ಬೆಂಗಳೂರು ಮಾಡಲು ಹೊರಟಿದ್ದಾರೆ. 3 ವರ್ಷ ಆದ್ರೂ ಚುನಾವಣೆ ನಿರ್ಧಾರವಾಗಿಲ್ಲ. ವಾರ್ಡ್ ಪಟ್ಟಿಗಳ ಅಂತಿಮಗೊಂಡಿಲ್ಲ. ಮೀಸಲಾತಿಯ ಓಬಿಸಿ ಪಟ್ಟಿ ಅಂತಿಮವಾಗಿಲ್ಲ. ಆಗಲೇ ಬ್ರ್ಯಾಂಡ್ ಬೆಂಗಳೂರು ಸಮಾವೇಶಕ್ಕೆ ತಯಾರಿ ಮಾಡಿಕೊಂಡಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ರೋಗ ಕಣ್ಗಾವಲು ಡ್ಯಾಶ್‌ಬೋರ್ಡ್ ಮತ್ತು ಮೊಬೈಲ್ ಅಪ್ಲಿಕೇಶನ್‌ ಅನಾವರಣ

“70 ಸಾವಿರ ಸಲಹೆಗಳನ್ನು ಬೆಂಗಳೂರಿಗರು ಸರ್ಕಾರಕ್ಕೆ ಕೊಟ್ಟಿದ್ದಾರೆ. ಸಲಹೆಗಳನ್ನು ಹೇಗೆ ವರ್ಗೀಕರಿಸಿದ್ದೀರಿ. 10-15 ದಿನಗಳಲ್ಲಿ ಸಲಹೆಗಳನ್ನು ವರ್ಗೀಕರಿಸಲು ಹೇಗೆ ಸಾಧ್ಯ. ಇದು ಕಣ್ಣೊರೆಸುವ ತಂತ್ರ. ಬ್ರ್ಯಾಂಡ್ ಬೆಂಗಳೂರಲ್ಲ, ಮೊದಲು ಬೆಸ್ಟ್ ಬೆಂಗಳೂರು ಮಾಡಿ. ರಸ್ತೆಗುಂಡಿ, ಚರಂಡಿ ಸರಿ ಮಾಡಿಸಿ, ಈಗಿರುವ ಬೆಂಗಳೂರನ್ನು ಬೆಸ್ಟ್ ಮಾಡಿ ಸಾಕು. ಕ್ರಮೇಣ ಈ ಬೆಸ್ಟ್ ಬೆಂಗಳೂರು ತಾನಾಗಿಯೇ ಬ್ರ್ಯಾಂಡ್ ಬೆಂಗಳೂರು ಆಗುತ್ತದೆ. ನಿಮಗೆ ಬ್ರ್ಯಾಂಡ್ ಬೆಂಗಳೂರು ಬಗ್ಗೆ ಅಷ್ಟೊಂದು ಇಚ್ಛಾಶಕ್ತಿ ಇದ್ರೆ, ಬದ್ಧತೆ ಇದ್ರೆ, ಈ ಕೂಡಲೇ ಬಿಬಿಎಂಪಿ ಚುನಾವಣೆಗಿರುವ ಅಡೆತಡೆ, ಸಮಸ್ಯೆ, ನೂನ್ಯತೆಗಳನ್ನ ನಿವಾರಿಸಿ. ಆದಷ್ಟು ಬೇಗ ಚುನಾಯಿತ ಪ್ರತಿನಿಧಿಗಳನ್ನು ನೇಮಿಸಿ” ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಅಲ್ಲದೆ, ಆದಷ್ಟು ಬೇಗ ಬಿಬಿಎಂಪಿ ಚುನಾವಣೆಗೆ ತಯಾರಿ ನಡೆಸದಿದ್ರೆ ವಿನೂತನ ಪ್ರತಿಭಟನೆ ಮಾಡುವುದಾಗಿ ಆಪ್ ಪಕ್ಷ ಎಚ್ಚರಿಸಿದೆ.

ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಿಶ್ವನಾಥ್ ಟಿಜಿ ಮತ್ತು ಮಾಧ್ಯಮ ಉಸ್ತುವಾರಿ ಅನಿಲ್ ನಾಚಪ್ಪ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...