ಮೂಲ ವೇತನ ನೀಡದಿದ್ದರೆ ಸಾಮೂಹಿಕ ರಾಜೀನಾಮೆ: ಶುಶ್ರೂಷಾಧಿಕಾರಿಗಳ ಎಚ್ಚರಿಕೆ

Date:

ಶುಶ್ರೂಷಾಧಿಕಾರಿಗಳಿಗೆ ಮೂಲ ವೇತನ ನೀಡಿದಿದ್ದರೆ, ಗಾಂಧಿ ಅವರ ‘ದಂಡಿ ಸತ್ಯಾಗ್ರಹ’ ಸ್ಮರಣಾ ದಿನದಂದೇ (ಮಾರ್ಚ್‌ 12) ಸಾಮೂಹಿಕ ರಾಜೀನಾಮೆ ನೀಡುತ್ತೇವೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆ ಶುಶ್ರೂಷಾಧಿಕಾರಿಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷೆ ರಾಧಾಸುರೇಶ್ ಪಿ.ಎನ್ ಎಚ್ಚರಿಕೆ ನೀಡಿದ್ದಾರೆ.

ಮೂಲ ವೇತನ ಪಾವತಿಗೆ ಆಗ್ರಹಿಸಿ ಅವರು ಶುಕ್ರವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. “ಸಂಘದ ಸದಸ್ಯರು ಇತ್ತೀಚೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದೆವು. ಆ ಸಮಯದಲ್ಲಿ ನಮ್ಮನ್ನು ಭೇಟಿ ಮಾಡಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಶುಶ್ರೂಷಾಧಿಕಾರಿಗಳ ಬೇಡಿಕೆಗಳನ್ನು ಇತ್ಯರ್ಥಗೊಳಿಸಲು ಮಾರ್ಚ್‌ 10ರಂದು ಸಭೆ ಕರೆಯುವುದಾಗಿ ತಿಳಿಸಿದ್ದಾರೆ” ಎಂದು ವಿವರಿಸಿದ್ದಾರೆ.

“ಮಾರ್ಚ್‌ 10ರಂದು ನಡೆಯುವ ಸಭೆಯಲ್ಲಿ ಶುಶ್ರೂಷಾಧಿಕಾರಿಗಳ ‘ಮೂಲ ವೇತನ’ ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸದಿದ್ದರೆ, ಗಾಂಧಿ ದಂಡಿನ ಸತ್ಯಾಗ್ರಹದ ದಿನವಾದ ಮಾರ್ಚ್‌ 12ರಂದು ಮುಖ್ಯಮಂತ್ರಿಗಳಿಗೆ ನಮ್ಮ ಸಾಮೂಹಿಕ ರಾಜಿನಾಮೆ ಸಲ್ಲಿಸುತ್ತೇವೆ. ಫ್ರೀಡಂಪಾರ್ಕ್‌ನಲ್ಲಿ ಮತ್ತೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸುತ್ತೇವೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...