ಮೂರನೇ ದಿನ ಶಕ್ತಿ ಯೋಜನೆಯ ಲಾಭ ಪಡೆದ 51 ಲಕ್ಷ ಮಹಿಳೆಯರು

Date:

  • ಜೂ. 11ರಂದು 5,71,023 ಮಹಿಳೆಯರ ಪ್ರಯಾಣ
  • ಶಕ್ತಿ ಯೋಜನೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ತನ್ನ 5 ಗ್ಯಾರಂಟಿಗಳಲ್ಲಿ ಒಂದಾದ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದೆ. ಮೂರನೇ ದಿನ ಒಟ್ಟು 51,52,769 ಮಹಿಳೆಯರು ಈ ಯೋಜನೆಯ ಲಾಭ ಪಡೆದುಕೊಂಡಿದ್ದಾರೆ.

ಮೊದಲ ದಿನ 5,71,023 ಮಹಿಳೆಯರು ಉಚಿತ ಪ್ರಯಾಣಿಸಿದ್ದು, ಒಟ್ಟು ₹1,40,22,878 ಕೋಟಿ ಟಿಕೆಟ್‌ ಮೊತ್ತವಾಗಿತ್ತು. ಎರಡನೇಯ ದಿನ ಅಂದರೆ, ಜೂನ್ 12ರಂದು ಒಟ್ಟು 1,03,67,039 ಪ್ರಯಾಣಿಕರು ಸಂಚರಿಸಿದ್ದು, ಈ ಪೈಕಿ 41,34,726 ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ₹8,83,53,434 ಕೋಟಿ ಮಹಿಳಾ ಪ್ರಯಾಣಿಕರ ಟಿಕೆಟ್ ಮೊತ್ತವಾಗಿದೆ.

ಜೂ. 11ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶಕ್ತಿ ಯೋಜನೆಗೆ ಚಾಲನೆ ನೀಡಿದರು. ರಾಜ್ಯ ಸಾರಿಗೆ ನಾಲ್ಕು ನಿಗಮಗಳ ಲಕ್ಸುರಿ ಬಸ್‌ಗಳನ್ನು ಹೊರತುಪಡಿಸಿ ಸಾಮಾನ್ಯ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೊದಲ ದಿನದ ಅಂಕಿ-ಅಂಶ

ಮಧ್ಯಾಹ್ನ 1 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೂ ಮಹಿಳೆಯರು ಪ್ರಯಾಣಿಸಿದ ವಿವರಗಳನ್ನು ನಿಗಮ ನೀಡಿದೆ.

ಜೂನ್ 11ರಂದು ನಾಲ್ಕು ಸಾರಿಗೆ ನಿಗಮಗಳ ವಾಹನದಲ್ಲಿ ಒಟ್ಟಾರೆಯಾಗಿ 5,71,023 ಮಹಿಳೆಯರು ಪ್ರಯಾಣಿಸಿದ್ದು, ಒಟ್ಟು ₹1,40,22,878 ಪ್ರಯಾಣಿಸಿದ ಮೊತ್ತವಾಗಿದೆ ಎಂದು ಸಾರಿಗೆ ನಿಗಮ ಮಾಹಿತಿ ನೀಡಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ದ ಬಸ್‌ಗಳಲ್ಲಿ 1,93,831 ಮಹಿಳೆಯರು ಪ್ರಯಾಣಿಸಿದ್ದು, ₹58,16,178 ಪ್ರಯಾಣದ ಮೌಲ್ಯವಾಗಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಬಸ್‌ಗಳಲ್ಲಿ 2,01,215  ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದು, ₹26,19,604 ಮೊತ್ತವಾಗಿದೆ.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಎನ್‌ಡಬ್ಲೂಕೆಎಸ್‌ಆರ್‌ಟಿಸಿ) ಬಸ್‌ಗಳಲ್ಲಿ 1,22,354 ಮಹಿಳೆಯರು ಯೋಜನೆಯ ಲಾಭವನ್ನು ಪಡೆದುಕೊಂಡಿದ್ದು, ₹36,17,096 ಪ್ರಯಾಣದ ಮೊತ್ತವಾಗಿದೆ.

ಎರಡನೇ ದಿನದ ಅಂಕಿ-ಅಂಶ

ಜೂನ್‌ 12ರಂದು ಒಟ್ಟು 1,03,67,039 ಪ್ರಯಾಣಿಕರು ಪ್ರಯಾಣಿಸಿದ್ದು, ಇದರಲ್ಲಿ 41,34,726 ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಕರಾರಸಾಸಂಸ್ಥೆಯಲ್ಲಿ ಒಟ್ಟು 36,31,075 ಪ್ರಯಾಣಿಕರ ಪೈಕಿ ಮಹಿಳೆಯರು 11,40,057 ಪ್ರಯಾಣಿಸಿದ್ದಾರೆ. ಮಹಿಳೆಯರ ಟಿಕೆಟ್ ಮೌಲ್ಯ ₹3,57,84,677 ಆಗಿದೆ.

ಬೆಂಮಸಾಸಂಸ್ಥೆಯಲ್ಲಿ 34,94,714 ಒಟ್ಟು ಪ್ರಯಾಣಿಕರಲ್ಲಿ 17,57,887 ಮಹಿಳಾ ಪ್ರಯಾಣಿಕರಿದ್ದು, ₹1,75,33,234 ಕೋಟಿ ಟಿಕೆಟ್‌ ಮೌಲ್ಯವಾಗಿದೆ.

ವಾಕರಸಾಸಂಸ್ಥೆಯಲ್ಲಿ 18,31,832 ಒಟ್ಟು ಪ್ರಯಾಣಿಕರಲ್ಲಿ 8,31,840 ಮಹಿಳೆಯರು ಪ್ರಯಾಣಿಸಿದ್ದಾರೆ. ಟಿಕೆಟ್‌ ಮೊತ್ತ ₹2,10,66,638 ಮೊತ್ತವಾಗಿದೆ.

ಕರಾರಸಾಸಂಸ್ಥೆಯಲ್ಲಿ 14,09,418 ಒಟ್ಟು ಪ್ರಯಾಣಿಕರಲ್ಲಿ 4,04,942 ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ₹1,39,68,885 ಟಿಕೆಟ್‌ ಮೊತ್ತವಾಗಿದೆ.

ಈ ಸುದ್ದಿ ಓದಿದ್ದೀರಾ? ಶಕ್ತಿ ಯೋಜನೆ | ಮೊದಲ ದಿನ: 5 ಲಕ್ಷ ಮಹಿಳೆಯರ ಪ್ರಯಾಣ

ಮೂರನೇ ದಿನದ ಅಂಕಿ-ಅಂಶ

ಜೂನ್‌ 13 ರಂದು ಒಟ್ಟು 1,16,66,621 ಪ್ರಯಾಣಿಕರು ಪ್ರಯಾಣಿಸಿದ್ದು, ಈ ಪೈಕಿ 51,52,769 ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ₹10,82,02,191 ಮಹಿಳಾ ಪ್ರಯಾಣಿಕರ ಟಿಕೆಟ್ ಮೌಲ್ಯವಾಗಿದೆ.

ಕರಾರಸಾಸಂಸ್ಥೆಯಲ್ಲಿ 38,27,640 ಒಟ್ಟು ಪ್ರಯಾಣಿಕರಲ್ಲಿ 13,97,665 ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ₹4,12,26,780 ಕೋಟಿ ಟಿಕೆಟ್‌ ಮೊತ್ತವಾಗಿದೆ.

ಬೆಂಮಸಾಸಂಸ್ಥೆಯಲ್ಲಿ 40,17,974 ಒಟ್ಟು ಪ್ರಯಾಣಿಕರು ಪ್ರಯಾಣಿಸಿದ್ದು, ಈ ಪೈಕಿ 20,56,856 ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ₹2,02,14,395 ಟಿಕೆಟ್ ಮೊತ್ತವಾಗಿದೆ.

ವಾಕರಸಾಸಂಸ್ಥೆಯಲ್ಲಿ 22,53,930 ಒಟ್ಟು ಪ್ರಯಾಣಿಕರಲ್ಲಿ 11,08,930 ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ₹2,72,19,029 ಕೋಟಿ ಮಹಿಳಾ ಟಿಕೆಟ್‌ ಮೊತ್ತವಾಗಿದೆ.

ಕರಾರಸಾಸಂಸ್ಥೆಯಲ್ಲಿ 15,67,077 ಒಟ್ಟು ಪ್ರಯಾಣಿಕರ ಪೈಕಿ 5,89,318 ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ₹1,95,41,987 ಕೋಟಿ ಮಹಿಳಾ ಟಿಕೆಟ್‌ ಮೊತ್ತವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...