ಸದ್ದಿಲ್ಲದೇ ಹೆಚ್ಚಳವಾಗುತ್ತಿರುವ ಈರುಳ್ಳಿ ದರ

Date:

ಟೊಮ್ಯಾಟೋ ಬೆಲೆ ಏರಿಕೆಯಿಂದ ಹೈರಾಣಾಗಿದ್ದ ಜನ ಬೆಲೆ ಕುಸಿತ ಕಂಡ ನಂತರ ನಿಟ್ಟುಸಿರು ಬಿಟ್ಟು ಟೊಮ್ಯಾಟೋ ಕೊಳ್ಳಲು ಮುಂದಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಈರುಳ್ಳಿ ದರ ಸದ್ದಿಲ್ಲದಂತೆ ಹೆಚ್ಚಳವಾಗುತ್ತಿದೆ. ಕಳೆದ ಒಂದು ವಾರದಿಂದ ಕೆಜಿ ಈರುಳ್ಳಿ ಬೆಲೆ ಸುಮಾರು ₹12-15 ರಷ್ಟು ಏರಿಕೆ ಕಂಡಿದೆ.

ಕಳೆದ ನಾಲ್ಕು ತಿಂಗಳಿನಿಂದ ಟೊಮ್ಯಾಟೋ ದರ ₹200 ಗಡಿ ದಾಟಿತ್ತು. ಇದರಿಂದ ಜನರು ಟೊಮ್ಯಾಟೋ ಕೊಳ್ಳುವುದನ್ನು ಕಡಿಮೆ ಮಾಡಿದ್ದರು. ಅಂದರೆ ಕೆಜಿ ಟೊಮ್ಯಾಟೋ ತೆಗೆದುಕೊಳ್ಳುತ್ತಿದ್ದ ಗ್ರಾಹಕ ಅರ್ಧ ಕೆಜಿ ಟೊಮ್ಯಾಟೋ ಖರೀದಿ ಮಾಡುತ್ತಿದ್ದರು. ಇನ್ನೂ ಕೆಲವರು ಟೊಮ್ಯಾಟೋ ದರ ಹೆಚ್ಚಳದಿಂದ ಟೊಮ್ಯಾಟೋ ಬಳಸದೇ ಹುಣಸೆಹಣ್ಣು ಹಾಕಿ ಅಡುಗೆ ಮಾಡುತ್ತಿದ್ದರು. ಕಳೆದ ಒಂದು ವಾರದಿಂದ ಟೊಮ್ಯಾಟೋ ದರದಲ್ಲಿ ಭಾರೀ ಇಳಿಕೆಯಾಗುತ್ತಿದ್ದು, ಕಳೆದ ವಾರ ಕೆಜಿ ಟೊಮ್ಯಾಟೋಗೆ ₹80 ರಿಂದ ₹90 ಇತ್ತು. ಇದೀಗ ₹50 ರಿಂದ ₹60 ಆಗಿದೆ. ಟೊಮ್ಯಾಟೋ ದರ ಇಳಿಕೆ ಕಂಡಿದೆ ಎಂದು ಗ್ರಾಹಕ ಸಂತಸ ಪಡುವಷ್ಟರಲ್ಲಿಯೇ ಈರುಳ್ಳಿ ದರ ಏರಿಕೆಯಾಗುತ್ತಿರುವುದರಿಂದ ಮತ್ತೆ ಕಂಗಾಲಾಗಿದ್ದಾರೆ.  

ಸದ್ದಿಲ್ಲದೇ ಹೆಚ್ಚಳವಾಗುತ್ತಿರುವ ಈರುಳ್ಳಿ ದರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದ್ದಿಲ್ಲದಂತೆ ಈರುಳ್ಳಿ ದರ ಹೆಚ್ಚಳವಾಗುತ್ತಿದೆ. ಕಳೆದ ವಾರ ₹25 ಇದ್ದ ಈರುಳ್ಳಿ ದರ ಇದೀಗ ₹30 – ₹40 ತಲುಪಿದೆ. ಸೂಪರ್‌ ಮಾರುಕಟ್ಟೆಗಳಲ್ಲಿ ಕೆಜಿ ಈರುಳ್ಳಿಗೆ ₹45 ನಂತೆ ಮಾರಾಟ ಮಾಡಲಾಗುತ್ತಿದೆ.

ಜೂನ್ ತಿಂಗಳಿನಲ್ಲಿ ವಾಡಿಕೆಯಂತೆ ಮಳೆಯಾಗಿಲ್ಲ. ಮುಂಗಾರು ಕೈಕೊಟ್ಟ ಕಾರಣ ರಾಜ್ಯದ ಹಲವೆಡೆ ಉತ್ತಮ ಬೆಳೆ ಬಂದಿಲ್ಲ. ಚಿತ್ರದುರ್ಗ, ದಾವಣಗೆರೆ ಸೇರಿದಂತೆ ರಾಜ್ಯದ ಹಲವು ಕಡೆಗಳಿಂದ ಈರುಳ್ಳಿ ಪೂರೈಕೆಯಾಗುತ್ತಿಲ್ಲ. ಈ ವರ್ಷ ರಾಜ್ಯದಲ್ಲಿ 4000 ಹೆಕ್ಟೇರ್ ಬೆಳೆ ಕೊರತೆ ಎದುರಾಗಿದೆ. ಮುಂದಿನ ದಿನಗಳಲ್ಲಿ ಈರುಳ್ಳಿ ಬೆಲೆ ₹50 – ₹60 ಏರಿಕೆಯಾಗುವ ಸಾಧ್ಯತೆ ಇದೆ.

ಆಂಧ್ರ ಪ್ರದೇಶ ಮತ್ತು ಕರ್ನಾಟಕದಲ್ಲಿ ಈರುಳ್ಳಿಯ ಹೊಸ ಬೆಳೆ ಒಂದು ತಿಂಗಳು ವಿಳಂಬವಾಗಿದೆ. ಅಹ್ಮದ್‌ ನಗರದಲ್ಲಿಯೂ ಪೂರೈಕೆ ಕಡಿಮೆ ಇದೆ. ಹೀಗಾಗಿ, ಈರುಳ್ಳಿ ಬೆಲೆ ಏರಿಕೆಯಾಗಿದೆ.

ಕಳೆದ ಎರಡು ತಿಂಗಳಿನಿಂದ ಬೆಳ್ಳುಳ್ಳಿ ಬೆಲೆ ಹೆಚ್ಚಳವಾಗಿದ್ದು, ಪ್ರಸ್ತುತ ಕೆಜಿಗೆ ₹200 ಇದೆ. ಹೊಸ ಬೆಳೆ ಬರುವವರಿಗೆ ಈ ದರ ಮುಂದುವರೆಯುವ ಸಾಧ್ಯತೆ ಇದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಭೂಮಿ, ವಸತಿ ಹಕ್ಕುಪತ್ರಕ್ಕಾಗಿ ಕಾಯುತ್ತಿರುವ ಲಕ್ಷಾಂತರ ಕುಟುಂಬಗಳು

ಮಹಾರಾಷ್ಟ್ರದಲ್ಲಿ ಕ್ವಿಂಟಾಲ್ಈರುಳ್ಳಿ ದರ ಶೇ. 48ರಷ್ಟು ಏರಿಕೆ

ದೇಶದಲ್ಲಿ ಅತಿ ಹೆಚ್ಚು ಈರುಳ್ಳಿ ಬೆಳೆಯುವ ರಾಜ್ಯ ಮಹಾರಾಷ್ಟ್ರ. ಇಲ್ಲಿ ಕಳೆದ ಒಂದು ವಾರದಲ್ಲಿ ಕ್ವಿಂಟಾಲ್‌ ಈರುಳ್ಳಿ ದರ ಶೇ. 48ರಷ್ಟು ಏರಿಕೆ ಕಂಡಿದೆ. ಆಗಸ್ಟ್ 4 ರಂದು ಕ್ವಿಂಟಲ್‌ಗೆ ₹1,550 ಇದ್ದ ಈರುಳ್ಳಿ ದರ ಶುಕ್ರವಾರ ₹2,300ಗೆ ತಲುಪಿದೆ. ಮಹಾರಾಷ್ಟ್ರದ ಲಾಸಲ್‌ಗಾಂವ್ ಎಪಿಎಂಸಿಯಲ್ಲಿ ಈರುಳ್ಳಿಯ ಸಗಟು ಬೆಲೆ ಹೆಚ್ಚಳವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...