ವಿಪಕ್ಷಗಳಿಂದ ಸರ್ಕಾರ ಅಸ್ಥಿರಗೊಳಿಸುವ ಹುನ್ನಾರ; ದಲಿತ ಸಂಘರ್ಷ ಸಮಿತಿಯಿಂದ ಸೆ.3ರಂದು ಬೃಹತ್‌ ಪ್ರತಿಭಟನೆ

Date:

“ಬಿಜೆಪಿಯೇತರ ಸರ್ಕಾರಗಳನ್ನು ಕೆಡವಲು, ವಿರೋಧ ಪಕ್ಷಗಳ ನಾಯಕರನ್ನು ಹಣಿಯಲು ಪ್ರಧಾನಿ ಮೋದಿ ಮತ್ತು ಅಮಿತ್‌ ಶಾ ಹೆಣೆಯುತ್ತಿರುವ ತಂತ್ರದ ಭಾಗವಾಗಿ ನ್ಯಾಯಬದ್ಧವಾಗಿ ಮುಡಾ ನಿವೇಶನ ಪಡೆದಿದ್ರೂ ಸಿ ಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಹೊರಿಸಲಾಗಿದೆ. ಈ ಕುತಂತ್ರ ರಾಜಕಾರಣವನ್ನು ನಾವು ಖಂಡಿಸುತ್ತೇವೆ” ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಗುರುಪ್ರಸಾದ್‌ ಕೆರಗೋಡು ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಳಸಮುದಾಯದ ನಾಯಕನೊಬ್ಬನನ್ನು ದುಷ್ಟ ಕಾರಣಗಳಿಗಾಗಿ ಬಲಿಪಶು ಮಾಡಲು ಬಿಡುವುದಿಲ್ಲ. ಬಿಜೆಪಿಯ ಈ ಸಂವಿಧಾನ ವಿರೋಧಿ ನಡವಳಿಕೆಯ ವಿರುದ್ದ ಸೆ. 3ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ದಲಿತ ಸಂಘರ್ಷ ಸಮಿತಿ ವತಿಯಿಂದ ಬೃಹತ್‌ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ರಾಜ್ಯಪಾಲರು ಪ್ರಧಾನಿ ಮೋದಿ ಮತ್ತು ಅಮಿತ್‌ ಶಾ ಅವರ ಕೈಗೊಂಬೆಯಾಗಿ ಕೆಲಸ ಮಾಡುವ ಮೂಲಕ ಸಂವಿಧಾನ, ಪ್ರಜಾಪ್ರಭುತ್ವ, ಒಕ್ಕೂಟ ವ್ಯವಸ್ಥೆಗೆ ಧಕ್ಕೆಯುಂಟು ಮಾಡುತ್ತಿರುವುದು ವಿಷಾದಕರ ಸಂಗತಿ. ಬಿಜೆಪಿಯ ಶಶಿಕಲಾ ಜೊಲ್ಲೆ, ಮುರುಗೇಶ್‌ ನಿರಾಣಿ, ಜನಾರ್ದನ ರೆಡ್ಡಿ, ಜೆಡಿಎಸ್‌ ನ ಎಚ್‌ ಡಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಲೋಕಾಯುಕ್ತ ಮತ್ತು ಎಸ್‌ಐಟಿಯಂತಹ ತನಿಖಾ ಸಂಸ್ಥೆಗಳು ಕೇಳಿ ವರ್ಷ ಕಳೆದರೂ ರಾಜ್ಯಪಾಲರು ಯಾವುದೇ ಕ್ರಮ ಕೈಗೊಂಡಿಲ್ಲ. ಸಿದ್ದರಾಮಯ್ಯ ವಿರುದ್ಧದ ಖಾಸಗಿ ದೂರಿಗೆ ಒಂದೇ ದಿನದಲ್ಲಿ ಶೋಕಾಸ್‌ ನೋಟಿಸ್‌ ನೀಡಿದ್ದು, ಅವರು ಕೇಂದ್ರದ ಕೈಗೊಂಬೆಯಾಗಿದ್ದಾರೆ ಎಂಬುದಕ್ಕೆ ಸಾಕ್ಷಿ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರ ಸರ್ಕಾರ ತನ್ನ ಅಧೀನದಲ್ಲಿರುವ ಸಿಬಿಐ, ಇಡಿ ಬಳಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ, ಸಚಿವ ಸತ್ರೇಂದ್ರ ಜೈನ್‌, ಜಾರ್ಖಂಡ್‌ ಮುಖ್ಯಮಂತ್ರಿ, ಹೇಮಂತ್‌ ಸೋರೆನ್‌, ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್‌ ಭಗೇಲ್ ಅವರನ್ನು ಪ್ರಕರಣಗಳಲ್ಲಿ ಸಿಲುಕಿಸಿರುವುದು, ಇಪ್ಪತ್ತೈದು ಮಂದಿ ವಿರೋಧ ಪಕ್ಷದ ನಾಯಕರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಂಡಿರುವುದು ರಾಜಕೀಯ ವಿರೋಧಿಗಳನ್ನು ಹಣಿಯುವ ತಂತ್ರವಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಮರಿಯಪ್ಪ ಹಳ್ಳಿ, ಹಿರಿಯ ಮುಖಂಡರಾದ ಇಂದೂಧರ ಹೊನ್ನಾಪುರ, ಎನ್‌ ವೆಂಕಟೇಶ್‌, ದಂಟರಮಕ್ಕಿ ಶ್ರೀನಿವಾಸ್‌, ಗಂಗನಂಜಯ್ಯ, ಡಾ ಎಂ ಶಿವಲಿಂಗಯ್ಯ, ಶ್ರೀನಿವಾಸ ಸಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...