ನಮ್ಮ ಮೆಟ್ರೋ | ಡಿಸೆಂಬರ್‌ನಲ್ಲಿ ಬರೋಬ್ಬರಿ 2 ಕೋಟಿ ಜನ ಸಂಚಾರ: ₹55 ಕೋಟಿ ಆದಾಯ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಉಂಟಾಗುವ ವಾಹನ ಸಂಚಾರ ದಟ್ಟಣೆಗೆ ‘ನಮ್ಮ ಮೆಟ್ರೋ’ ಮದ್ದಾಗಿ ಕಾರ್ಯನಿರ್ವಹಿಸುತ್ತಿದೆ. ಪ್ರತಿ ನಿತ್ಯ 6.88 ಲಕ್ಷ ಮಂದಿ ನಮ್ಮ ಮೆಟ್ರೋದಲ್ಲಿ ಪ್ರಯಾಣ ಮಾಡುತ್ತಾರೆ. ಡಿಸೆಂಬರ್‌ ತಿಂಗಳಿನಲ್ಲಿ ನಮ್ಮ ಮೆಟ್ರೋವನ್ನು ಬರೋಬ್ಬರಿ 2 ಕೋಟಿ ಜನ ಬಳಕೆ ಮಾಡಿದ್ದು, ಬರೋಬ್ಬರಿ ₹55 ಕೋಟಿ ಆದಾಯ ಸಂಗ್ರಹವಾಗಿದೆ.

ಹೊಸ ವರ್ಷದ ಹಿನ್ನೆಲೆ, ಅಂದರೆ, ಡಿ.31ರಂದು ಒಂದೇ ದಿನ ಬರೋಬ್ಬರಿ 6,26,202 ಜನ ಸಂಚಾರ ಮಾಡಿದ್ದು, ಬರೊಬ್ಬರಿ ₹1,64,74,918 ಆದಾಯ ಬಂದಿದೆ.

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಬಳಕೆಯ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಡಿಸೆಂಬರ್‌ನ ಒಟ್ಟು ಪ್ರಯಾಣಿಕರ ಸಂಖ್ಯೆ 2,13,34,076 ಕೋಟಿ ಇದೆ. ದಿನದ ಸರಾಸರಿ ಪ್ರಯಾಣಿಕರ ಸಂಖ್ಯೆ 6,88,196 ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಮಾನ್ಯವಾಗಿ ಭಾನುವಾರ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಕಡಿಮೆ ಇರುತ್ತದೆ. ಆದರೆ, ಹೊಸ ವರ್ಷದ ಹಿನ್ನೆಲೆ, ಅಂದಿನ ದಿನ ಲಕ್ಷಾಂತರ ಜನ ಸಂಚಾರ ಮಾಡಿದ್ದಾರೆ. ಅಲ್ಲದೇ, ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಹೊಸ ವರ್ಷದ ಹಿನ್ನೆಲೆ, ರಾತ್ರಿ 2:15ರವರೆಗೆ ಮೆಟ್ರೋ ಸೇವೆ ಒದಗಿಸಿತ್ತು.

ಈ ಸುದ್ದಿ ಓದಿದ್ದೀರಾ? ಬ್ಯಾಂಕ್ ಕಿರುಕುಳ | ಸಚಿವ ಜಮೀರ್ ನ್ಯಾಯ ಕೊಡಿಸಲಿಲ್ಲವೆಂದು ವಿಧಾನಸೌಧದ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ದಂಪತಿ

ರೀಲ್ಸ್‌ ಮಾಡಿ ಹುಚ್ಚಾಟ ಮೇರೆದವನಿಗೆ ದಂಡ

ಇತ್ತೀಚಿನ ದಿನಗಳಲ್ಲಿ ನಮ್ಮ ಮೆಟ್ರೋ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿದೆ. ಕಳೆದ ಕೆಲವು ದಿನಗಳ ಹಿಂದೆ ಮೆಟ್ರೋದಲ್ಲಿ ಪ್ರಯಾಣ ಮಾಡುವಾಗ ‘ಅಮ್ಮ’ ಎಂದು ಕಿರುಚಿ ರೀಲ್ಸ್‌ ಮಾಡಿ ಹುಚ್ಚಾಟ ಮೆರೆದಿದ್ದ ವ್ಯಕ್ತಿಯಿಂದ ಭದ್ರತಾ ವಿಭಾಗದ ಅಧಿಕಾರಿಗಳು ದಂಡ ವಸೂಲಿ ಮಾಡಿದ್ದಾರೆ.

ನಮ್ಮ ಮೆಟ್ರೋದಲ್ಲಿ ನ್ಯೂಸೆನ್ಸ್ (59) 1 ಉಂಟುಮಾಡಿದ ಆರೋಪದಡಿ ಯೂಟ್ಯೂಬರ್ ಸಂತೋಷ್ ಕುಮಾರ್ ಎಂಬುವವರ ವಿರುದ್ಧ ಪ್ರಕರಣ ದಾಖಲು ಮಾಡಿ ₹500 ದಂಡ ವಿಧಿಸಿ ಎಚ್ಚರಿಕೆ ನೀಡಿದ್ದಾರೆ.

ಸಂತೋಷ್ ಕುಮಾರ್ ಈತ ಬಂಡೆಪಾಳ್ಯದ ಗೆದ್ದನಹಳ್ಳಿಯ ನಿವಾಸಿ. ಈತನು ಯೂಟ್ಯೂಬರ್‌ ಡಿಸೆಂಬರ್ 24ರಂದು ಚಲಿಸುವ ಮೆಟ್ರೋದಲ್ಲಿ ರೀಲ್ಸ್‌ ಮಾಡಿ ಸಹ ಪ್ರಯಾಣಿಕರಿಗೆ ತೊಂದರೆ ಕೊಟ್ಟಿದ್ದನು. ಅಲ್ಲದೇ, ಕಿರುಚಾಡಿ ಹುಚ್ಚಾಟ ಮೆರೆದಿದ್ದನು. ಈತನ ಹುಚ್ಚಾಟಕ್ಕೆ ಸಹ ಪ್ರಯಾಣಿಕರು ಕೆಲಕಾಲ ಗಾಬರಿಗೊಂಡರು.

ರೀಲ್ಸ್‌ ಮಾಡಿ ಇನ್‌ಸ್ಟಾಗ್ರಾಮ್‌ನ ಯಶ್ ಗೌಡ ಎಂಬ ಅಕೌಂಟ್ ಮೂಲಕ ಅಪ್‌ಲೋಡ್ ಮಾಡಲಾಗಿತ್ತು. ಈ ವಿಡಿಯೋ ಹಿನ್ನೆಲೆ, ಸಂತೋಷ್‌ಗೆ ಅಧಿಕಾರಿಗಳು ದಂಡ ವಿಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...