ನಮ್ಮ ಮೆಟ್ರೋ | ಮಹಿಳೆಯರಿಗಾಗಿ ರೈಲಿನಲ್ಲಿ ಮತ್ತೊಂದು ಬೋಗಿ ಮೀಸಲಿಡಲು ಚಿಂತನೆ

Date:

ರಾಜ್ಯ ರಾಜಧಾನಿ ಬೆಂಗಳೂರಿನ ‘ನಮ್ಮ ಮೆಟ್ರೋ’ ಇತ್ತೀಚಿನ ದಿನಗಳಲ್ಲಿ ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಲ್ಲಿದೆ. ಇದೀಗ, ಮಹಿಳೆಯರ ಜತೆಗೆ ಅಸಭ್ಯ ವರ್ತನೆ ಹಾಗೂ ಲೈಂಗಿಕ ಕಿರುಕುಳದಂತಹ ಪ್ರಕರಣಗಳು ಕಂಡುಬರುತ್ತಿವೆ. ಈ ಹಿನ್ನೆಲೆ, ಮಹಿಳೆಯರಿಗಾಗಿ ಮೆಟ್ರೋ ರೈಲಿನಲ್ಲಿ ಮತ್ತೊಂದು ಬೋಗಿಯನ್ನು ಮೀಸಲಿಡಲು ಚಿಂತನೆ ನಡೆದಿದೆ.

ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಶೀಘ್ರದಲ್ಲೇ ಮಹಿಳೆಯರಿಗೆ ರೈಲಿನಲ್ಲಿ ಎರಡು ಬೋಗಿ ಮೀಸಲಿಡಲು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಚಿಂತನೆ ನಡೆಸಿದೆ.

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ಬಿಎಂಆರ್‌ಸಿಎಲ್‌ ಸಾರ್ವಜನಿಕ ಸಂಪರ್ಕಾಧಿಕಾರಿ ಯಶವಂತ ಚವ್ಹಾಣ್, “ಮಹಿಳೆಯರಿಗಾಗಿ ಇನ್ನೊಂದು ಬೋಗಿ ಮೀಸಲಿಡುವ ಬಗ್ಗೆ ಚಿಂತನೆ ನಡೆದಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯುವತಿಯರೊಂದಿಗೆ ಅಸಭ್ಯ ವರ್ತನೆ

ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪ್ರಯಾಣಿಕರ ನಡುವೆಯೇ ಕಾಮುಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನವೆಂಬರ್ 20ರಂದು ನಡೆದಿತ್ತು.

ಕಾಲೇಜಿಗೆ ತೆರಳಲು ಯುವತಿ ಮೆಟ್ರೋ ನಿಲ್ದಾಣಕ್ಕೆ ಬಂದಿದ್ದಳು. ಮೆಟ್ರೋ ಹತ್ತುವಾಗ ಕೆಂಪು ಅಂಗಿ ಧರಿಸಿದ್ದ ವ್ಯಕ್ತಿ ಹಿಂದಿನಿಂದ ಆಕೆಯನ್ನು ಅಸಭ್ಯವಾಗಿ ಸ್ಪರ್ಶಿಸಿದ್ದಾನೆ ಎಂದು ಆರೋಪಿಸಲಾಗಿತ್ತು. ಮೊದಲಿಗೆ ಆತನ ಅಸಭ್ಯ ವರ್ತನೆ ಯುವತಿಯ ಅರಿವಿಗೆ ಬಂದಿಲ್ಲ. ಪದೇ-ಪದೇ ಅದೇ ರೀತಿ ನಡೆಯುತ್ತಿದ್ದರಿಂದ ಆಕೆಗೆ ಆತನ ವರ್ತನೆ ಅರಿವಾಗಿದೆ. ಬಳಿಕ ಆಕೆ ಸಹ ಪ್ರಯಾಣಿಕರಿಗೆ ಆ ಬಗ್ಗೆ ತಿಳಿಸಿದರೂ ಯಾರು ಆಕೆಯ ನೆರವಿಗೆ ಬಂದಿಲ್ಲ ಎಂದು ದೂರಲಾಗಿತ್ತು.

ಕಿರುಕುಳಕ್ಕೆ ಒಳಗಾದ ಯುವತಿಯ ಸ್ನೇಹಿತರು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ತಪ್ಪಿತಸ್ಥನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು.

ಮತ್ತೊಂದು ಪ್ರಕರಣ

22 ವರ್ಷದ ಯುವತಿಯೊಬ್ಬರು ಬೆಂಗಳೂರಿನ ರಾಜಾಜಿನಗರದ ಮೆಟ್ರೋ ನಿಲ್ದಾಣದಲ್ಲಿ 9:40ರ ಸುಮಾರಿಗೆ ಮೆಟ್ರೋ ಹತ್ತಿದ್ದಾರೆ. ಪೀಕ್ ಅವರ್‌ನಲ್ಲಿ ಹೆಚ್ಚು ಜನಸಂದಣಿ ಕೂಡಿರುವ ಮೆಟ್ರೋದಲ್ಲಿ ಹಿಂದೆ ನಿಂತಿದ್ದ ಆರೋಪಿ ಲೋಕೇಶ್ ಯುವತಿಯ ಮೈ-ಕೈ ಅನ್ನು ಅಶ್ಲೀಲವಾಗಿ ಮುಟ್ಟಿದ್ದಾನೆ. ಇದನ್ನು ಕಂಡ ಯುವತಿ ಜೋರಾಗಿ ಕೂಗಲು ಪ್ರಾರಂಭ ಮಾಡಿದ್ದಾಳೆ. ಈ ವೇಳೆ, ಪರಾರಿಯಾಗಲು ಯತ್ನಿಸಿದ ಆರೋಪಿಯನ್ನು ಮೆಟ್ರೋ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದು, ಉಪ್ಪಾರಪೇಟೆ ಪೊಲೀಸರಿಗೆ ಒಪ್ಪಿಸಿದ್ದರು. ಈ ಘಟನೆ ಡಿಸೆಂಬರ್ 7 ರಂದು ನಡೆದಿತ್ತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 5 ವಾಹನಗಳ ನಡುವೆ ಸರಣಿ ಅಪಘಾತ: ಇಬ್ಬರಿಗೆ ಗಾಯ

ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಜನವರಿ 1 ರಂದು ಯುವಕನೊಬ್ಬ ಹಿಂಬದಿಯಿಂದ ಖಾಸಗಿ ಅಂಗವನ್ನ ಮುಟ್ಟಿ ಲೈಂಗಿಕ ಕಿರುಕುಳ ಕೊಟ್ಟಿದ್ದಾನೆ ಎಂದು ಯುವತಿಯೊಬ್ಬಳು ತೀವ್ರ ತರಾಟೆಗೆ ತೆಗೆದುಕೊಂಡಿದ್ದರು. ಅಲ್ಲದೆ, ವಿಚಾರ ತಿಳಿದ ಭದ್ರತಾ ಸಿಬ್ಬಂದಿ ವ್ಯಕ್ತಿಯನ್ನು ಹಿಡಿದಿದ್ದರು. ಈ ವೇಳೆ ಯುವತಿ ಮುಂದೆ ಆತ ತಪ್ಪೊಪ್ಪಿಕೊಂಡಿದ್ದನು.

ನಿತ್ಯ 6 ಲಕ್ಷಕ್ಕೂ ಹೆಚ್ಚು ಜನ ಸಂಚರಿಸುವ ನಮ್ಮ ಮೆಟ್ರೋ ಇತ್ತೀಚೆಗೆ ಕೆಲವು ವಿಷಯಗಳಿಂದ ಸುದ್ದಿಯಾಗುತ್ತಿದೆ. ಈ ಹಿಂದೆ ವಿದೇಶಿ ಯೂಟ್ಯೂಬರ್‌ ಒಬ್ಬರು ಟಿಕೆಟ್ ನೀಡದೆ ಮೆಟ್ರೋದಲ್ಲಿ ಪ್ರಯಾಣಿಸುವುದು ಹೇಗೆ ಎಂದು ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದರು. ಇದರ ಬೆನ್ನಲ್ಲೇ, ಕಿಡಿಗೇಡಿಯೊಬ್ಬ ಯುವತಿ ಜತೆಗೆ ಅಸಭ್ಯವಾಗಿ ನಡೆದುಕೊಂಡಿದ್ದು ಸುದ್ದಿಯಾಗಿತ್ತು. ಈ ಘಟನೆಗಳ ಬಳಿಕ ಒಂದಾದ ಮೇಲೋಂದರಂತೆ ಒಂದಿಲ್ಲೊಂದು ವಿಚಾರಕ್ಕೆ ನಮ್ಮ ಮೆಟ್ರೋ ಸುದ್ದಿಯಲ್ಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...