ನಮ್ಮ ಯಾತ್ರಿ | ಒಕ್ಕೂಟಗಳ ಹಿತಾಸಕ್ತಿಗಿಂತ ಸಮುದಾಯದ ಕಲ್ಯಾಣಕ್ಕೆ ಆದ್ಯತೆ

Date:

ಮೊಬೈಲ್ಆ್ಯಪ್ಆಧರಿತ ಕ್ಯಾಬ್ಸೇವೆ ಒದಗಿಸುವ ಓಲಾ ಮತ್ತು ಉಬರ್ಸಂಸ್ಥೆಗಳಿಗೆ ಸೆಡ್ಡು ಹೊಡೆಯಲು ಆಟೋ ಚಾಲಕರ ಒಕ್ಕೂಟದೊಂದಿಗೆ ‘ನಮ್ಮ ಯಾತ್ರಿ’ ಆ್ಯಪ್ಅಭಿವೃದ್ದಿಪಡಿಸಲಾಗಿತ್ತು. ಆಟೋ ಚಾಲಕರಿಗೆ ನೆರವಾಗುವಂತೆ ಹಾಗೂ ಪ್ರಯಾಣಿಕರಿಗೆ ಕಡಿಮೆ ದರದಲ್ಲಿ ಸೇವೆ ಒದಗಿಸುವುದೇ ಆ್ಯಪ್ ಉದ್ದೇಶವಾಗಿದೆ. ಆಟೋ ರಿಕ್ಷಾ ಡ್ರೈವರ್ಸ್ ಯೂನಿಯನ್ ಬೆಂಬಲದೊಂದಿಗೆ ಕಡಿಮೆ ಅವಧಿಯಲ್ಲಿ ಪ್ರಯಾಣಿಕರು ಮತ್ತು ಆಟೋ ಚಾಲಕರನ್ನು ಸೆಳೆಯುವಲ್ಲಿ ಈ ಆ್ಯಪ್ಜನಪ್ರಿಯತೆ ಗಳಿಸಿದೆ. ಇದೀಗ, ನಮ್ಮ ಯಾತ್ರಿ ಒಕ್ಕೂಟದಿಂದ ದೂರವಿರಲು ಪ್ರಯತ್ನಿಸುತ್ತಿದೆ ಎಂದು ವರದಿಯಾಗಿದೆ.

ಕಳೆದ ವರ್ಷ ನಮ್ಮ ಯಾತ್ರಿ ಆ್ಯಪ್ ಬಿಡುಗಡೆ ಮಾಡುವಲ್ಲಿ ಚಾಲಕರ ಒಕ್ಕೂಟ ಪ್ರಮುಖ ಪಾತ್ರ ವಹಿಸಿತ್ತು. ಆದರೆ, ಈಗ ‘ನಮ್ಮ ಯಾತ್ರಿ’ ಆ್ಯಪ್ಸರ್ವೀಸ್ ಸಂಸ್ಥೆ ಹಾಗೂ ಬೆಂಗಳೂರು ಆಟೋ ಚಾಲಕರ ಸಂಘದ ನಡುವೆ ಬಿರುಕು ಮೂಡಿದೆ. ಪರಿಣಾಮ ಆಟೋಚಾಲಕರ ಸಂಘ ನಮ್ಮ ಯಾತ್ರಿ ಆ್ಯಪ್‌ನಿಂದ ಹೊರಬಂದಿದೆ ಎಂದು ಹೇಳಲಾಗಿದೆ.

ನಗರದ ಪ್ರಮುಖ ಆಟೋ ರಿಕ್ಷಾ ಒಕ್ಕೂಟಗಳಲ್ಲಿ ಒಂದಾದ ಆಟೋ ರಿಕ್ಷಾ ಚಾಲಕರ ಸಂಘ ಬೆಂಬಲಿತ ರೈಡ್ ಅಪ್ಲಿಕೇಶನ್ನಮ್ಮ ಯಾತ್ರಿಯಿಂದ ನಿರ್ಗಮಿಸಿದೆ ಎಂದು ಹೇಳಲಾಗಿದೆ. ಕೆಲ ಚಾಲಕರು ಇನ್ನು ಆ್ಯಪ್ಬಳಸುವುದಾಗಿ ಹೇಳಿರುವುದರಿಂದನಮ್ಮ ಯಾತ್ರಿಕಾರ್ಯಾಚರಣೆಯು ಬೆಂಗಳೂರಿನಲ್ಲಿ ಸಂಪೂರ್ಣವಾಗಿ ಸ್ಥಗಿತಗೊಂಡಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಮ್ಮ ಯಾತ್ರಿಯು ಫಿನ್ಟೆಕ್ ಕಂಪನಿ ಜುಸ್ಪೇಯ ಒಡೆತನದಲ್ಲಿದೆ. ನಮ್ಮ ಯಾತ್ರಿಯನ್ನು ನವೆಂಬರ್ 2022ರಲ್ಲಿ ಚಾಲಕರ ಸ್ವಂತ ಅಪ್ಲಿಕೇಶನ್ ಆಗಿ ಪ್ರಾರಂಭಿಸಲಾಯಿತು. ಆಟೋ ಚಾಲಕರು ತಾವು ಗಳಿಸಿದ ದರದಲ್ಲಿ ನಮ್ಮ ಯಾತ್ರಿಗೆ ಪಾವತಿಸಬೇಕಾದ ಯಾವುದೇ ಕಮಿಷನ್ ಇಲ್ಲದ ಕಾರಣ, ಆ್ಯಪ್ ಬಹುಬೇಗನೇ ಯಶಸ್ವಿಯಾಯಿತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಿಎಂಟಿಸಿ ಬಸ್‌ಗೆ 21 ವರ್ಷದ ಗೃಹಿಣಿ ಬಲಿ

ಅಲ್ಲದೇ, ಅನೇಕ ಚಾಲಕರು ನಮ್ಮ ಯಾತ್ರಿ ಅಪ್ಲಿಕೇಶನ್ಗೆ ಬದಲಾಯಿಸಿದರು. ಪ್ರಯಾಣಿಕರಿಗೆ ಸಹ ಬುಕ್ಕಿಂಗ್ ಮಾಡಿದ ತಕ್ಷಣ ಆಟೋಗಳು ಸಿಗುತ್ತಿದ್ದವು.

ಕಂಪನಿ ಹಾಗೂ ಸಂಘದ ನಡುವೆ ಮೂಡದ ಒಮ್ಮತ

ನಮ್ಮ ಯಾತ್ರಿ ಆ್ಯಪ್ನಲ್ಲಿ ಪ್ರಯಾಣ ದರ ವಿಚಾರಕ್ಕೆ ಸಂಬಂಧಿಸಿದಂತೆ ಕಂಪನಿ ಹಾಗೂ ಆಟೋ ಚಾಲಕರ ಸಂಘದ ನಡುವೆ ಒಮ್ಮತ ಮೂಡಿಲ್ಲ. ಅಲ್ಲದೇ, ಕಂಪನಿ ತೆಗೆದುಕೊಂಡ ನಿರ್ಧಾರಕ್ಕೂ ಆಟೋಚಾಲಕರ ಸಂಘ ಅಸಮಾಧಾನ ವ್ಯಕ್ತಪಡಿಸಿತ್ತು ಎನ್ನಲಾಗಿದೆ.

ಮೆಟ್ರೋ ನಿಲ್ದಾಣದಿಂದ 2 ಕಿಲೋಮೀಟರ್ ವ್ಯಾಪ್ತಿ ಪ್ರದೇಶಕ್ಕೆ ₹40 ದರ ವಿಧಿಸುವಂತೆ ಆಟೋ ಚಾಲಕರು ಆಗ್ರಹಿಸಿದ್ದರು. ಆದರೆ, ನಮ್ಮ ಯಾತ್ರಿ ಪೇಮೆಂಟ್ ಸೊಲ್ಯುಶನ್ ಪ್ರೊವೈಡರ್ ಪ್ರಸ್ತಾವನೆ ಒಪ್ಪಿಕೊಂಡಿಲ್ಲ. ಇದರಿಂದ ಮನಸ್ತಾಪ ಉಂಟಾಗಿದೆ.

ಜತೆಗೆ, ಆ್ಯಪ್ನಡೆಸುವ ಸಂಸ್ಥೆಗೆ ಯಾವುದೇ ಕಮಿಷನ್ ನೀಡದೇ ಚಾಲಕರು ಸವಾರಿ ಬಾಡಿಗೆಯ ಸಂಪೂರ್ಣ ಹಣ ಪಡೆಯುವ ವ್ಯವಸ್ಥೆಯು ಆ್ಯಪ್ಜನಪ್ರಿಯಗೊಳ್ಳಲು ಮುಖ್ಯ ಕಾರಣವಾಗಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿನಮ್ಮ ಯಾತ್ರಿಸಹ ಚಾಲಕರಿಗೆ ಚಂದಾದಾರಿಕೆ ಶುಲ್ಕ ವಿಧಿಸಲು ಪ್ರಾರಂಭಿಸಿದೆ. ದಿನಕ್ಕೆ 25 ಮತ್ತು ಪ್ರತಿ ಸವಾರಿಗೆ 3.50 ಪಾವತಿಸಬೇಕೆನ್ನುವ ಷರತ್ತು ಹಾಕಲಾಗಿತ್ತು. ಹಣವನ್ನು ಆ್ಯಪ್ಸುಧಾರಣೆಗೆ ಬಳಸಲಾಗುವುದು ಎಂದು ಕಂಪನಿ ಹೇಳಿತ್ತು.

“ಸಂಘದ ಬೇಡಿಕೆಗಳನ್ನು ಈಡೇರಿಸುವಲ್ಲಿನಮ್ಮ ಯಾತ್ರಿವಿಫಲವಾಗಿದೆ. ಆರಂಭದಿಂದಲೂ, ಎಆರ್ಡಿಯು ನಮ್ಮ ಯಾತ್ರಿ ಆ್ಯಪ್ ಭಾಗವಾಗಿತ್ತು. ಆ್ಯಪ್ಬಿಡುಗಡೆಯಾಗುವ ಮೊದಲೇ ಒಟ್ಟು 10,000 ಚಾಲಕರು ಸೇರಿದ್ದರು. ಬಿಡುಗಡೆಯಾದ ನಂತರ ಇನ್ನೂ 50,000 ಚಾಲಕರು ನೋಂದಣಿ ಮಾಡಿಕೊಂಡರು. ಆದರೆನಮ್ಮ ಯಾತ್ರಿನಂತರದ ದಿನಗಳಲ್ಲಿ ನಮ್ಮನ್ನು ನಿರ್ಲಕ್ಷಿಸಿತುಎಂದು ಆಟೋ ಚಾಲಕರ ಸಂಘದ ಪ್ರತಿನಿಧಿಯೊಬ್ಬರು ಹೇಳಿದ್ದಾರೆ.

ಫಿನ್ಟೆಕ್ ಕಂಪನಿ ಜಸ್ಟ್ಪೇಮಾಲೀಕತ್ವದ ಸಂಸ್ಥೆಯು ಯೂನಿಯನ್ ಬೆಂಬಲಿತವಾಗಿಲ್ಲ ಎಂದು ಹೇಳಿತ್ತು. ಇದಕ್ಕೆ ಆಟೋ ಚಾಲಕರ ಸಂಘಟನೆ ಆಕ್ಷೇಪಿಸಿದೆ. ಇನ್ನು ಕಾರ್ಪೊರೇಟ್ ಕಂಪನಿಗಳು ಜನಸಾಮಾನ್ಯರಿಂದ ಮಾತ್ರ ಯಶಸ್ವಿಯಾಗುತ್ತವೆ ಎಂದು ರುದ್ರಮೂರ್ತಿ ಅವರು ನಮ್ಮ ಯಾತ್ರಿ ಸಿಇಒ ವಿಮಲ್ ಕುಮಾರ್ ಅವರನ್ನು ಟೀಕಿಸಿದ್ದಾರೆ ಎಂದು ಹೇಳಲಾಗಿದೆ.

ನಮ್ಮ ಯಾತ್ರಿಯು ಒಂದು ಲಕ್ಷಕ್ಕೂ ಹೆಚ್ಚು ಚಾಲಕರೊಂದಿಗೆ ಸಹಯೋಗ ಹೊಂದಿದೆ. ಅವರಲ್ಲಿ ಹೆಚ್ಚಿನವರು ಯಾವುದೇ ಒಕ್ಕೂಟದೊಂದಿಗೆ ಸಂಬಂಧ ಹೊಂದಿಲ್ಲ. ನಾವು ವೈಯಕ್ತಿಕ ಒಕ್ಕೂಟಗಳ ಹಿತಾಸಕ್ತಿಗಳಿಗಿಂತ ಸಮುದಾಯದ ಕಲ್ಯಾಣಕ್ಕೆ ಆದ್ಯತೆ ನೀಡುತ್ತೇವೆಎಂದು ಕಂಪನಿ ಟ್ವೀಟ್ ಮೂಲಕ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...