ವಾಹನ ತೊಳೆಯುವವರ ವಿರುದ್ಧ ಜಲಮಂಡಳಿ ಬಿಸಿ, 12 ಪ್ರಕರಣ ದಾಖಲು, ₹5.60 ಲಕ್ಷ ದಂಡ ವಸೂಲಿ

Date:

ಬೆಂಗಳೂರು ಜನತೆ ಕುಡಿಯುವ ನೀರನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡುವುದನ್ನು ಜಲಮಂಡಳಿ ನಿಷೇಧಿಸಿದ್ದು ನಿಯಮ ಉಲ್ಲಂಘಿಸಿದವರಿಗೆ 5 ಸಾವಿರ ದಂಡ ವಿಧಿಸುತ್ತಿದೆ. ಜಲಮಂಡಳಿ ಸಿಬ್ಬಂದಿ ಕಳೆದ 7 ದಿನಗಳಲ್ಲಿ ಕುಡಿಯುವ ನೀರನ್ನು ಪೋಲು ಮಾಡಿದವರ ವಿರುದ್ಧ ತಪಾಸಣೆ ನಡೆಸಿ ದೂರುಗಳನ್ನು ದಾಖಲಿಸಿದ್ದು, ದಂಡ ವಸೂಲಿ ಮಾಡಿ ಕ್ರಮ ಕೈಗೊಂಡಿರುವ ಬಗ್ಗೆ ಜಲಮಂಡಳಿ ಅಧ್ಯಕ್ಷ ರಾಮ್‌ ಪ್ರಸಾದ್ ಮನೋಹರ್‌ ಮಾಹಿತಿ ನೀಡಿದ್ದಾರೆ.

ಕುಡಿಯುವ ನೀರನ್ನು ಅನಗತ್ಯವಾಗಿ ಪೋಲು ಮಾಡುವವರ ವಿರುದ್ಧ ‘ದಂಡ’ದ ಅಭಿಯಾನ ನಡೆಸುತ್ತಿರುವ ಜಲಮಂಡಳಿಗೆ ಒಂದು ವಾರದಲ್ಲಿ 112 ಪ್ರಕರಣಗಳನ್ನು ದಾಖಲಾಗಿದ್ದು, ₹5.60 ಲಕ್ಷ ದಂಡ ವಸೂಲಿಯಾಗಿದೆ. ಫೆ.23ರವರೆಗೆ 112 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಇದರಲ್ಲಿ ದಕ್ಷಿಣ ವಲಯದಲ್ಲಿ ಹೆಚ್ಚು ಪ್ರಕರಣಗಳು (33) ದಾಖಲಾಗಿವೆ. ಉತ್ತರ ವಲಯದಲ್ಲಿ 23, ಪಶ್ಚಿಮ ವಲಯದಲ್ಲಿ 28, ಪೂರ್ವ ವಲಯದಲ್ಲಿ 28 ಪ್ರಕರಣಗಳು ದಾಖಲಾಗಿವೆ.

ಬೇಸಿಗೆ ಅವಧಿಯಲ್ಲಿ ರಾಜಧಾನಿ ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದು ಎಂದು ಐಐಎಸ್‌ಸಿ ವಿಜ್ಞಾನಿಗಳು ವರದಿ ಸಲ್ಲಿಸಿದ್ದು, ಬೆಂಗಳೂರು ನಗರದಲ್ಲಿ ಕುಡಿಯುವ ನೀರನ್ನು ವಾಹನಗಳ ಸ್ವಚ್ಚತೆಗೆ, ಕೈದೋಟಕ್ಕೆ, ಕಟ್ಟಡ ನಿರ್ಮಾಣಕ್ಕೆ, ಮನೋರಂಜಕವಾಗಿ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆಗೆ, ಸಿನಿಮಾ ಮಂದಿರ ಮತ್ತು ಮಾಲ್‌ಗಳಲ್ಲಿನ ಕುಡಿಯುವ ನೀರಿನ ಹೊರತು ಇನ್ನಿತರೆ ಬಳಕೆಗೆ, ರಸ್ತೆ ನಿರ್ಮಾಣ ಹಾಗೂ ಸ್ವಚ್ಚತೆಗೆ ಬಳಸಲು ಬೆಂಗಳೂರು ನೀರುಸರಬರಾಜು ಮತ್ತು ಒಳಚರಂಡಿಕಾಯ್ದೆ-1964ರ ಕಲಂ 33 ಮತ್ತು 34ರ ಅನುಸಾರ ನೀಷೇಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ನಿಷೇಧ ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ, ಉಲ್ಲಂಘನೆ ಮಾಡುವವರ ವಿರುದ್ದ ಜಲಮಂಡಳಿಯ ಕಾಯ್ದೆ 1964 ರ ಕಲಂ 109 ರಂತೆ ₹5 ಸಾವಿರ ದಂಡ ವಿಧಿಸಲಾಗುವುದು. ಮರುಕಳಿಸಿದಲ್ಲಿ ದಂಡದ ಮೊತ್ತ ₹5 ಸಾವಿರ ಜತೆಗೆ ಹೆಚ್ಚುವರಿಯಾಗಿ ₹500 ಪ್ರತಿ ದಿನದಂತೆ ದಂಡ ಹಾಕಲಾಗುವುದು ಎಂದು ತಿಳಿಸಲಾಗಿದೆ.

ನಗರದ ಕೆಲವು ವಾರ್ಡ್‌ಗಳಲ್ಲಿ ಅಂತರ್ಜಲದ ಮಟ್ಟ ಕುಸಿಯಬಹುದು ಎಂದು ಐಐಎಸ್‌ಸಿ ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಈ ಕಾರಣದಿಂದ ಇಂಥ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕರು ಕುಡಿಯುವ ನೀರನ್ನು ಅನಗತ್ಯ ಪೋಲು ಮಾಡುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ‘ದಂಡ ಅಭಿಯಾನ’ವನ್ನು ಇನ್ನಷ್ಟು ವ್ಯಾಪಕಗೊಳಿಸಲಾಗುವುದು’ ಎಂದು ಜಲಮಂಡಳಿ ಎಚ್ಚರಿಸಿದೆ.

ಬೆಂಗಳೂರು ಮಹಾನಗರಕ್ಕೆ ಸುಮಾರು 100 ಕಿಲೋಮೀಟರ್‌ಗಳ ದೂರದಿಂದ ಕುಡಿಯುವ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಅಂತರ್ಜಲ ಕುಸಿತದಿಂದ ನೀರಿನ ಕೊರತೆ ಹೆಚ್ಚಾಗಬಹುದು ಎನ್ನುವ ಎಚ್ಚರಿಕೆಯಿಂದ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕರು ಅಮೂಲ್ಯವಾಗಿರುವ ಶುದ್ಧ ಕುಡಿಯುವ ನೀರನ್ನು ಅನಗತ್ಯವಾಗಿ ವ್ಯರ್ಥ ಮಾಡುವುದನ್ನು ನಿಲ್ಲಿಸಬೇಕು. ಈ ಮೂಲಕ ಅಗತ್ಯವಿರುವ ಜನರಿಗೆ ಹಾಗೂ ಪ್ರದೇಶಗಳಿಗೆ ಕುಡಿಯುವ ನೀರು ಸರಬರಾಜು ಮಾಡಲು ಜಲ ಮಂಡಳಿಯ ಜೊತೆ ಕೈಜೋಡಿಸಬೇಕು ಎಂದು ಬಿಡಬ್ಲ್ಯುಎಸ್ಎಸ್​ಬಿ ಮನವಿ ಮಾಡಿದೆ.

ಸಾರ್ವಜನಿಕರಿಗೆ ಮಂಡಳಿ ನೀಡಿದ ಆದೇಶಗಳನ್ನು ಯಾರಾದರೂ ಉಲ್ಲಂಘನೆ ಮಾಡುವುದು ಕಂಡುಬಂದರೆ, ಕೂಡಲೇ ಮಂಡಳಿಯ ಕಾಲ್ ಸೆಂಟರ್ ಸಂಖ್ಯೆ 1916 ಗೆ ತಿಳಿಸಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...