ಹಬ್ಬಕ್ಕೆ ಖರೀದಿ ಜೋರು: ಕೋಮು ಸಂಘಟನೆಗಳಿಂದ ಹಲಾಲ್‌ ಮುಕ್ತ ಗಣೇಶೋತ್ಸವಕ್ಕೆ ಕರೆ

Date:

ರಾಜ್ಯ ರಾಜ್ಯಧಾನಿ ಬೆಂಗಳೂರಿನಲ್ಲಿ ಗೌರಿ ಗಣೇಶ ಹಬ್ಬ ಸಂಭ್ರಮ ಮನೆ ಮಾಡಿದೆ. ಹಬ್ಬದ ಹಿನ್ನೆಲೆ, ನಗರದಲ್ಲಿರುವ ಜನತೆ ಎಲೆ, ಬಾಳೆ, ಪೂಜಾ ಸಾಮಗ್ರಿ, ಹೂವು-ಹಣ್ಣು-ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಯಲ್ಲಿ ತೊಡಗಿದ್ದಾರೆ.

ನಗರದ ಕೆ.ಆರ್‌.ಮಾರ್ಕೆಟ್, ರಾಜಾಜಿನಗರ, ನವರಂಗ್ ಬ್ರಿಡ್ಜ್‌, ಮಲ್ಲೇಶ್ವರಂ, ವಿಜಯನಗರ ಸೇರಿದಂತೆ ಹಲವೆಡೆ ಖರೀದಿಗಾಗಿ ಜನ ಮುಗಿಬಿದ್ದಿದ್ದಾರೆ.

ಬೆಳ್ಳಂಬೆಳಗ್ಗೆ ಗಣೇಶನನ್ನು ಪೂಜೆ ಮಾಡಿ ಮನೆಗೆ ಕರೆದುಕೊಂಡು ಹೋಗಲು ಜನರು ಉತ್ಸುಕರಾಗಿದ್ದು ನಗರದ ಹಲವೆಡೆ ಕಂಡುಬಂದಿತು. ಗಂಡು ಮಕ್ಕಳು ಯಾವ ಗಣಪತಿಯನ್ನು ಮನೆಗೆ ತೆಗೆದುಕೊಂಡು ಹೋಗಬೇಕು ಎಂಬ ಆಯ್ಕೆಯಲ್ಲಿ ಮಗ್ನರಾಗಿದ್ದರೆ, ಹೆಣ್ಣುಮಕ್ಕಳು ಹೂವು, ಹಣ್ಣು ಸೇರಿದಂತೆ ಇನ್ನಿತರ ಆಲಂಕಾರಿಕ ವಸ್ತುಗಳ ಆಯ್ಕೆಯಲ್ಲಿ ತೊಡಗಿದ್ದು ಮಾರುಕಟ್ಟೆಯಲ್ಲಿ ಕಂಡುಬಂದಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಣೇಶ ಹಬ್ಬದ ದಿನವಾದ ಇಂದು ಮನೆಗಳಲ್ಲಿ ಗಣೇಶನನ್ನು ಪ್ರತಿಷ್ಠಾಪನೆ ಮಾಡಿ, ಪೂಜೆ ಸಲ್ಲಿಸುತ್ತಾರೆ. ಮನೆಯಲ್ಲಿ ಮೋದಕ, ಕಡುಬು, ಚಕ್ಕುಲಿ, ಉಂಡೆ ಸೇರಿದಂತೆ ಗಣೇಶನಿಗೆ ಪ್ರಿಯವಾದ ತಿಂಡಿ ತಿನಿಸುಗಳನ್ನು ತಯಾರು ಮಾಡಿ ಗಣೇಶನಿಗೆ ಅರ್ಪಿಸುತ್ತಾರೆ.

ಮಾರುಕಟ್ಟೆಯಲ್ಲಿ ಹೂವು ಮತ್ತು ಹಣ್ಣಿನ ಬೆಲೆ ಕೊಂಚ ಏರಿಕೆ ಕಂಡಂತಿದ್ದು, ಮಲ್ಲಿಗೆ ಹೂವು ಕೆಜಿಗೆ ₹1000 ರಿಂದ ₹1200 ಇದೆ. ಸೇವಂತಿಗೆ ₹250 ರಿಂದ ₹350, ಗುಲಾಬಿ ₹150 ರಿಂದ ₹200, ಕನಕಾಂಬರ ₹1000 ದಿಂದ ₹1200, ಮಳ್ಳೆ ಹೂವು ₹650 ರಿಂದ ₹800 ಇದೆ.

ಹಣ್ಣುಗಳಲ್ಲಿ ಏಲಕ್ಕಿ ಬಾಳೆ ₹120 ರಿಂದ ₹140, ಅನಾನಸ್ ಹಣ್ಣು ₹30 ರಿಂದ ₹70, ದಾಳಿಂಬೆ ₹50 ರಿಂದ ₹100, ಸೇಬು ₹180 ರಿಂದ ₹250, ಸೀಬೆ ₹60 ರಿಂದ ₹80 ಇದೆ.

ಅದರಂತೆ ತರಕಾರಿ ದರ ಕೆಜಿಗೆ ಹಾಗಲಕಾಯಿ ₹60, ಬಿಟ್ರೋಟ್ ₹40, ಬೀನ್ಸ್ ₹80, ಬದನೆಕಾಯಿ ₹60, ಎಲೆಕೋಸು ₹80, ಮೂಲಂಗಿ ₹60, ಹಸಿರುಮೆಣಸಿನ ಕಾಯಿ ₹60, ಬೆಂಡೆಕಾಯಿ ₹40, ನುಗ್ಗೆಕಾಯಿ ₹60, ಟೋಮಾಟೋ ₹15, ಈರುಳ್ಳಿ ₹30, ಬೆಳ್ಳುಳ್ಳಿ ₹80 ಇದೆ.

ಕಳೆದ ಯುಗಾದಿ ಹಬ್ಬ ಮತ್ತು ಮಹಾಲಕ್ಷ್ಮೀ ಹಬ್ಬದ ಸಮಯದಲ್ಲಿ ತರಕಾರಿ, ಹೂವು-ಹಣ್ಣುಗಳ ಬೆಲೆ ಗಗನಕ್ಕೇರಿತ್ತು. ಈ ಬಾರಿ ತರಕಾರಿ ಬೆಲೆ ಎಲ್ಲವೂ ಕಡಿಮೆಯಿದೆ. ಆದರೆ, ಹೂವು-ಹಣ್ಣಿನ ಬೆಲೆಯಲ್ಲಿ ಕೊಂಚ ಏರಿಕೆ ಕಂಡುಬಂದಿದೆ. ಹಬ್ಬದ ಸಂಭ್ರಮದಲ್ಲಿ ಮುಳುಗಿರುವ ಜನತೆ ವ್ಯಾಪಾರದಲ್ಲಿ ತೊಡಗಿದ್ದಾರೆ.

ಈ ಸುದ್ದಿ ಓದಿದ್ದೀರಾ? 2026ರ ವೇಳೆಗೆ ಕೆ.ಆರ್.ಪುರಂ – ಕೆಐಎ ವಿಮಾನ ನಿಲ್ದಾಣ ಮಾರ್ಗದ ಮೆಟ್ರೋ ಸಿದ್ಧ

ಹಲಾಲ್‌ ಮುಕ್ತ ಗಣೇಶೋತ್ಸವಕ್ಕೆ ಕರೆ

ಯುಗಾದಿ ಬಳಿಕ ಹಿಂದುತ್ವವಾದಿ ಕೋಮು ಸಂಘಟನೆಗಳು ಈ ಬಾರಿ ಹಲಾಲ್ ಮುಕ್ತ ಗಣೇಶೋತ್ಸವಕ್ಕೆ ಕರೆ ನೀಡಿವೆ. ಗಣೇಶ ಮಂಡಳಿಗಳಿಗೆ ಭೇಟಿ ನೀಡುತ್ತಿರುವ ಹಿಂದುತ್ವವಾದಿ ಕೋಮು ಸಂಘಟನೆಗಳ ಕಾರ್ಯಕರ್ತರು ಹಲಾಲ್ ಪ್ರಮಾಣಿಕೃತ ವಸ್ತುಗಳ ಖರೀದಿ ಮಾಡದಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...