‘ನಮ್ಮ ಮೆಟ್ರೋ’ದಿಂದ ಕನ್ನಡಿಗರನ್ನು ಹೊರಗಿಡುವ ಹುನ್ನಾರ; ಪ್ರತಿಭಟನೆ ಎಚ್ಚರಿಕೆ ನೀಡಿದ ಮುಖ್ಯಮಂತ್ರಿ ಚಂದ್ರು

Date:

ಬಿಎಂಆರ್‌ಸಿಎಲ್ ಸಂಸ್ಥೆಯು ಇತ್ತೀಚಿನ ತನ್ನ ಲೋಕೋ ಪೈಲೆಟ್‌ಗಳ ನೇಮಕಾತಿಯಲ್ಲಿನ 3 ವರ್ಷಗಳ ಅನುಭವದ
ಷರತ್ತುಗಳು ಸಂಪೂರ್ಣ ಕನ್ನಡಿಗರನ್ನು ಹೊರಗಿಡುವ ಹುನ್ನಾರವೇ ಹೊರತು ಬೇರೇನೂ ಅಲ್ಲ. ಅನ್ಯ ರಾಜ್ಯಗಳ ಮೆಟ್ರೋಗಳಲ್ಲಿ ಕೆಲಸ ಮಾಡುತ್ತಿರುವ ಅನ್ಯ ಭಾಷಿಕರನ್ನು ಚಾಲಕ ಹುದ್ದೆಗಳಿಗೆ ತುಂಬುವುದೇ ಇವರ ಷಡ್ಯಂತ್ರ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆರೋಪಿಸಿದ್ದಾರೆ.

ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಈಗಾಗಲೇ ಸಂಸ್ಥೆಯಲ್ಲಿ ಉನ್ನತ ಹುದ್ದೆಗಳೆಲ್ಲವೂ ಅನ್ಯ ಭಾಷಿಕರ ಪಾಲಾಗಿದ್ದು ಅವರುಗಳ ಇಚ್ಛಾನುಸಾರವೇ ನೇಮಕಾತಿಗಳು ಸಹ ನಡೆಯುತ್ತಿರುವುದು ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯ. ಕನ್ನಡದ ನೆಲ, ಜಲ, ತೆರಿಗೆ ಎಲ್ಲವನ್ನು ಬಳಸಿಕೊಳ್ಳುತ್ತಿರುವ ಸಂಸ್ಥೆಯು ಕನ್ನಡಿಗರ ನೇಮಕಾತಿಯ ವಿಚಾರದಲ್ಲಿ ಅನವಶ್ಯಕ ಗೊಂದಲಗಳನ್ನು ಸೃಷ್ಟಿಸುತ್ತಿದ್ದಾರೆ. ಈ ಕೂಡಲೇ ಸರ್ಕಾರ ಇಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕಮ ತೆಗೆದುಕೊಳ್ಳಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಅಲ್ಲದೆ ಮೆಟ್ರೋ ಉನ್ನತ ಅಧಿಕಾರಿಗಳು ಅನವಶ್ಯಕವಾಗಿ ಅಧ್ಯಯನದ ಹೆಸರಿನಲ್ಲಿ ವಿದೇಶ ಪ್ರವಾಸಗಳನ್ನು ಕೈಗೊಂಡು ಮೋಜಿನ ಜೀವನ ನಡೆಸುತ್ತಿದ್ದಾರೆ. ಸಂಸ್ಥೆಯಲ್ಲಿ ಅನವಶ್ಯಕ ದುಬಾರಿ ಖರ್ಚುಗಳನ್ನು ಮಾಡುವ ಮೂಲಕ ನಷ್ಟವನ್ನು ತೋರಿಸುತ್ತಿದ್ದಾರೆ. ಸಂಸ್ಥೆಯು ಕನ್ನಡ ನೌಕರರ ಯೂನಿಯನ್ ಜೊತೆ ಯಾವುದೇ ಚರ್ಚೆಗಳನ್ನು ಮಾಡದೆ ಕನ್ನಡ ವಿರೋಧಿ ಧೋರಣೆಯನ್ನು ಪದೇ ಪದೆ ಮುಂದುವರಿಸುತ್ತಲೇ ಬರುತ್ತಿದ್ದಾರೆ. ಇವುಗಳೆಲ್ಲವೂ ತಕ್ಷಣವೇ ನಿಲ್ಲಬೇಕು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

:ಈಗಾಗಲೇ ಸಮಾಜದ ಎಲ್ಲ ವರ್ಗಗಳ ತೀವ್ರ ವಿರೋಧಗಳ ನಡುವೆಯೂ ಸಹ ಮೆಟ್ರೋ ಟಿಕೆಟ್ ಬೆಲೆಯನ್ನು ಏರಿಸಿದ್ದಾರೆ. ಮೆಟ್ರೋ ಅಧಿಕಾರಿಗಳ ಬಂಡತನ ಎಲ್ಲೆ ಮೀರಿದೆ. ಕನ್ನಡಿಗರ ಅಸ್ಮಿತೆಯ ವಿಷಯದಲ್ಲಿ ಸರ್ಕಾರವು ಮಧ್ಯಪ್ರವೇಶ ಮಾಡಲೇಬೇಕಾಗಿದೆ. ಇಂತಹ ಕನ್ನಡ ವಿರೋಧಿ ನೇಮಕಾತಿ ಅಧಿಸೂಚನೆಯನ್ನು ಕೂಡಲೇ ಹಿಂಪಡೆದುಕೊಳ್ಳಬೇಕು. ಇದಕ್ಕಾಗಿ 15 ದಿವಸಗಳ ಗಡುವನ್ನು ಸಹ ನೀಡುತ್ತಿದ್ದೇವೆ. ಇಲ್ಲದಿದ್ದಲ್ಲಿ ಮೆಟ್ರೋ ಸಂಸ್ಥೆಯ ವಿರುದ್ಧ ತೀವ್ರ ಪ್ರತಿಭಟನೆಗೆ ಇಳಿಯಬೇಕಾಗುತ್ತದೆ” ಎಂದು ಮುಖ್ಯಮಂತ್ರಿ ಚಂದ್ರು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...