ಪ್ರಧಾನಿ ಮೋದಿ ದ್ವೇಷ ಭಾಷಣ: ಕ್ರಮಕ್ಕೆ ಆಗ್ರಹಿಸಿ ನಾಗರಿಕ ಸಂಸ್ಥೆಗಳಿಂದ ಚುನಾವಣಾ ಆಯೋಗಕ್ಕೆ ದೂರು

Date:

ಕಳೆದ ಏಪ್ರಿಲ್ 21ರಂದು ಪ್ರಧಾನಿ ನರೇಂದ್ರ ಮೋದಿಯವರು ರಾಜಸ್ಥಾನದಲ್ಲಿ ತಮ್ಮ ಚುನಾವಣಾ ಭಾಷಣದಲ್ಲಿ ಸುಳ್ಳು ಸುದ್ದಿ ಹಾಗೂ ದ್ವೇಷವನ್ನು ಹರಡಿದ್ದಾರೆ. ಇದರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಕೋರಿ ನಾಗರಿಕ ಸಂಸ್ಥೆಗಳು ಹಾಗೂ ಕಾಳಜಿಯುಳ್ಳ ನಾಗರಿಕರು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳಾದ ಮನೋಜ್ ಕುಮಾರ್ ಮೀನಾ ರವರನ್ನು ಭೇಟಿ ಮಾಡಿ ದೂರು ಸಲ್ಲಿಸಿದರು. ದೂರಿನಲ್ಲಿ ಮೋದಿಯವರ ವಿರುದ್ಧ ತುರ್ತು ಮತ್ತು ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಮನೋಜ್ ಕುಮಾರ್ ಮೀನಾ ರವರನ್ನು ಭೇಟಿಯಾದ ತಂಡವು, ಮೋದಿಯ ವಿರುದ್ಧ ನೀಡಿದ ದೂರಿನ ಪ್ರತಿ , ಸಂವಿಧಾನ ಪೀಠಿಕೆ ಮತ್ತು ನೀತಿ ಸಂಹಿತೆ ನಿಯಮಗಳ ಪ್ರತಿಯನ್ನು ನೀಡಿತು.

ಭಾರತೀಯ ಚುನಾವಣಾ ಆಯೋಗವು, ಕಾನೂನಿನ ಪ್ರಕಾರ ಮೋದಿಯವರು ನೀಡಿದ ಭಾಷಣದ ವಿರುದ್ಧ ಕ್ರಮ ಕೈಗೊಂಡು, ಅವರನ್ನು ಅನರ್ಹಗೊಳಿಸಬೇಕು ಮತ್ತು ಅವರನ್ನು ಪ್ರಚಾರ ಮಾಡುವುದರಿಂದ ನಿಷೇಧಿಸಬೇಕೆಂದು ಒತ್ತಾಯಿಸಿತು. ದ್ವೇಷ ಭಾಷಣ ನೀಡುವುದರ ಮೂಲಕ ಸಮಾಜದ ಕೋಮು ಸೌಹಾರ್ದತೆಗೆ ಧಕ್ಕೆ ಉಂಟು ಮಾಡಿರುವುದಕ್ಕಾಗಿ ಅವರ ವಿರುದ್ಧ ಕೂಡಲೇ ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿಂದೂ ಸಮಾಜದ ವೋಟುಗಳನ್ನು ಸಂಗ್ರಹಿಸಲು ಸುಳ್ಳು ಮತ್ತು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದರ ಜೊತೆಗೆ ಮುಸ್ಲಿಂ ಸಮುದಾಯದ ಬಗ್ಗೆ ದ್ವೇಷ ಹಬ್ಬಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾರವರು ಪ್ರತಿಕ್ರಿಯಿಸಿ, ಈ ಘಟನೆಯು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಹಾಗಾಗಿ, ದೂರನ್ನು ಮುಖ್ಯ ಚುನಾವಣಾಧಿಕಾರಿಗಳಿಗೆ ರವಾನಿಸುವುದಾಗಿ ತಿಳಿಸಿದರು.

ಇದನ್ನು ಓದಿದ್ದೀರಾ? ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿಎಂ ಸಿದ್ದರಾಮಯ್ಯ

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (PUCL), ಬಹುತ್ವ ಕರ್ನಾಟಕ, ಆಲ್ ಇಂಡಿಯಾ ಲಾಯೆರ್ಸ್ ಅಸೋಸಿಯೇಷನ್ ಫಾರ್ ಜಸ್ಟಿಸ್ (AILAJ), ದ್ವೇಷ ಭಾಷಣದ ವಿರುದ್ಧ ಜನಾಂದೋಲನ, ಪೀಪಲ್ಸ್ ವಾಚ್, ನ್ಯಾಷನಲ್ ಫೆಡರೇಶನ್ ಫಾರ್ ಇಂಡಿಯನ್ ವಿಮೆನ್ (NFIW), ನ್ಯಾಷನಲ್ ಅಲೈಯನ್ಸ್ ಆಫ್ ಪೀಪಲ್ಸ್ ಮೂವ್ಮೆಂಟ್ಸ್ (NAPM), ನ್ಯೂ ಟ್ರೇಡ್ ಯೂನಿಯನ್ ಇನಿಶಿಯೇಟಿವ್ (NTUI), ಹ್ಯೂಮನ್ ರೈಟ್ಸ್ ಫೋರಮ್ (HRF), ಲಾ ಅಂಡ್ ಪಾಲಿಸಿ ರಿಸರ್ಚ್ ಇನ್ಸ್ಟಿಟ್ಯೂಟ್, ಸೇವ್ ದಿ ನೇಷನ್, ತಮಿಳುನಾಡು ಪೊದುಮೇಡೈ, ಭಾರತ್ ಜೋಡೋ ಅಭಿಯಾನ್, ಮುಂಬೈ, ಸ್ಟೂಡೆಂಟ್ಸ್ ಫಾರ್ ಪೀಪಲ್ಸ್ ಡೆಮಾಕ್ರಸಿ, ಆಲ್ ಇಂಡಿಯಾ ಡೆಮಾಕ್ರೆಟಿಕ್ ವಿಮೆನ್ಸ್ ಅಸೋಸಿಯೇಷನ್ (AIDWA) ಸಂಘಟನೆಗಳು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...