ಬೆಂಗಳೂರಲ್ಲಿ ಮಳೆಯ ಅವಾಂತರ ತಪ್ಪಿಸಲು ವರ್ಕ್ ಫ್ರಮ್‌ ಹೋಮ್‌ ನೀಡುವಂತೆ ಕಂಪನಿಗಳಿಗೆ ಪೊಲೀಸರ ಮನವಿ

Date:

ದೀರ್ಘ ವಾರಾಂತ್ಯ ಮತ್ತು ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮಳೆಯ ಅವಾಂತರ ಮತ್ತು ಟ್ರಾಫಿಕ್‌ ಸಮಸ್ಯೆ ತಪ್ಪಿಸಲು ಬೆಂಗಳೂರಿನ ಔಟರ್ ​​ರಿಂಗ್ ರಸ್ತೆಯ ಕಂಪನಿಗಳ ಉದ್ಯೋಗಿಗಳಿಗೆ ವರ್ಕ್ ಫ್ರಮ್‌ ಹೋಮ್‌ ಅವಕಾಶ ಕೊಡಬೇಕು ಎಂದು ಸಂಚಾರಿ ಪೊಲೀಸರು ವಿನಂತಿಸಿದ್ದಾರೆ.

ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಕಂಪನಿಗಳಿಗೆ ರಜೆ ಇದೆ. ಶುಕ್ರವಾರ ಒಂದು ದಿನ ರಜೆ ಮಾಡಿದರೂ ನಾಲ್ಕು ದಿನ ರಜೆ ಸಿಗಲಿದೆ. ಹೀಗಾಗಿ ಆ.14ರಂದು ಕಚೇರಿಯಿಂದ ಮನೆಗೆ ತೆರಳುವವರು, ನಂತರ ಊರಿಗೆ ತೆರಳುವವರ ಸಂಖ್ಯೆಯಲ್ಲಿ ಹೆಚ್ಚಳವಾಗಲಿದೆ. ಪರಿಣಾಮವಾಗಿ ಸಂಚಾರ ದಟ್ಟಣೆ ನಿರೀಕ್ಷಿಸಲಾಗಿದೆ. ಇದರ ಜೊತೆಗೆ ಮಳೆಯೂ ಇರುವುದರಿಂದ ಮಳೆಯ ಅವಾಂತರ ತಪ್ಪಿಸಲು ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್ ನೀಡಿ ಎಂದು ಸಂಚಾರಿ ಜಂಟಿ ಆಯುಕ್ತ ಎಂ ಎನ್ ಅನುಚೇತ್ ಮನವಿ ಮಾಡಿದ್ದಾರೆ.

ಸಿಬ್ಬಂದಿಗೆ ವರ್ಕ್ ಫ್ರಮ್ ಹೊಮ್ ಕೊಡುವುದರಿಂದ ರಸ್ತೆಯಲ್ಲಿ ವಾಹನಗಳ ಸಂಖ್ಯೆ ಕಡಿಮೆಯಾಗಲಿದೆ. ಪ್ರಯಾಣಿಸಬೇಕಾದ ಎಲ್ಲರಿಗೂ ಅನುಕೂಲವಾಗಲಿದೆ. ಈ ವಿಷಯದಲ್ಲಿ ನಿಮ್ಮ ಸಹಕಾರವನ್ನು ನಾವು ನಿರೀಕ್ಷಿಸುತ್ತೇವೆ. ನಿಮ್ಮ ಬೆಂಬಲ ಅಗತ್ಯ ಎಂದು ಪತ್ರ ಮೂಲಕ ಅನುಚೇತ್ ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...