₹2,000 ನೋಟು ವಾಪಸ್; ಹವಾಲಾ ದಂಧೆ ಹೆಚ್ಚುವ ಬಗ್ಗೆ ಪೊಲೀಸರ ಶಂಕೆ

Date:

  • ಮೇ 23ರಿಂದ ನೋಟ್‌ ಬದಲಾವಣೆಗಾಗಿ ಬ್ಯಾಂಕ್‌ಗಳತ್ತ ಮುಖ ಮಾಡಿದ ಜನ
  • ಹೆಚ್ಚಿನ ಹಣ ಬದಲಾವಣೆಗಾಗಿ ಜನರು ಮಧ್ಯವರ್ತಿಗಳ ಮೊರೆ ಹೋದರೆ ಸಂಕಷ್ಟ

ರಿಸರ್ವ್‌ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ₹2,000 ಮುಖಬೆಲೆಯ ನೋಟುಗಳನ್ನು ಹಿಂಪಡೆಯುವುದಾಗಿ ಘೋಷಿಸಿದೆ. ಬ್ಯಾಂಕ್‌ಗಳಲ್ಲಿ ನೋಟುಗಳನ್ನು ಬದಲಾವಣೆ ಮಾಡಿಕೊಳ್ಳಲು ಅವಕಾಶ ನೀಡಿದೆ. ಇದನ್ನೇ ಕೆಲವು ವಂಚಕರು ಬಂಡವಾಳ ಮಾಡಿಕೊಂಡು ಹವಾಲಾ ದಂಧೆ ಮಾಡಬಹುದು ಎಂದು ಬೆಂಗಳೂರು ಪೊಲೀಸರು ಹಾಗೂ ಇಡಿ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

₹2,000 ಮುಖಬೆಲೆಯ ನೋಟುಗಳನ್ನು ಸೆಪ್ಟೆಂಬರ್‌ 30ರೊಳಗೆ ಬ್ಯಾಂಕ್‌ಗಳಲ್ಲಿ ಬದಲಾವಣೆ ಮಾಡಿಕೊಳ್ಳಲು ಆರ್‌ಬಿಐ ಸೂಚನೆ ಹೊರಡಿಸಿದೆ. ನೋಟು ಬದಲಾವಣೆಗಾಗಿ ಜನರು ಮೇ 23ರಿಂದ ಬ್ಯಾಂಕ್‌ಗಳತ್ತ ಮುಖ ಮಾಡಿದ್ದಾರೆ.

“ನೋಟು ಬದಲಾವಣೆಯ ಸಮಯವನ್ನು ಕೆಲವು ವಂಚಕರು ಬಳಸಿಕೊಂಡು ಹವಾಲಾ ದಂಧೆ ನಡೆಸುವ ಸಾಧ್ಯತೆ ಇದೆ. ಕೆಲವರು ಮಧ್ಯವರ್ತಿಗಳ ಹೆಸರಿನಲ್ಲಿ ಹೆಚ್ಚಿನ ಹಣ ಬದಲಾಯಿಸಿ ಕೊಡುವುದಾಗಿ ಹೇಳಿ ಮೋಸ ಮಾಡುವ ಸಾಧ್ಯತೆ ಇದೆ. ಹೆಚ್ಚಿನ ಕಮಿಷನ್ ಪಡೆದು ಹಣ ಬದಲಾಯಿಸುವ ಸಾಧ್ಯತೆ ಇದೆ” ಎಂದು ಪೊಲೀಸರು ಶಂಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೆಲವು ಬ್ಯಾಂಕ್‌ಗಳಲ್ಲಿ ಮಾತ್ರ ಹಣ ಬದಲಾವಣೆ ಮಾಡಲು ಅವಕಾಶವಿದೆ. ಜನರು ಹೆಚ್ಚಿನ ಹಣ ಬದಲಾವಣೆಗಾಗಿ ಮಧ್ಯವರ್ತಿಗಳ ಮೊರೆ ಹೋದರೆ ಸಂಕಷ್ಟ ಎದುರಾಗಲಿದೆ” ಎಂದು ಇಡಿ ಅಧಿಕಾರಿಗಳು ಹವಾಲಾ ದಂಧೆ ಮೇಲೆ ಕಣ್ಣಿಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ: ಹವಾಮಾನ ಇಲಾಖೆ

“₹2,000 ಮುಖಬೆಲೆಯ ನೋಟುಗಳಲ್ಲಿರುವ ಕಪ್ಪು ಹಣ ಹವಾಲಾ ಆಗುವ ಸಾಧ್ಯತೆಯಿದೆ. ಹವಾಲಾ ಮಾಡಲು ಬಳಸುತ್ತಿದ್ದ ಹಣ ಇದೀಗ ಹೊರಗೆ ಬರುತ್ತದೆ. ಈಗ ಹೊರಗೆ ಬರುವ ಹಣಕ್ಕೆ ಯಾವುದೇ ದಾಖಲಾತಿ ಇರುವುದಿಲ್ಲ. ಹಾಗಾಗಿ ಇಂತಹ ಹಣ ಜಪ್ತಿಯಾಗಬೇಕು. ₹2,000 ಇದೀಗ ಸಣ್ಣ ಪ್ರಮಾಣದಲ್ಲಿ ಐದುನೂರು ನೋಟಾಗಿ ಬದಲಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ” ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

₹2000 ನೋಟ್‌ಗಳನ್ನು ಬ್ಯಾಂಕ್‌ಗೆ ಹಿಂತಿರುಗಿಸಿ

ಚಲಾವಣೆಯಲ್ಲಿರುವ ₹2000 ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ರಿಸರ್ವ್‌ ಬ್ಯಾಂಕ್‌ ಮೇ 19ರಂದು ಆದೇಶ ಹೊರಡಿಸಿದ್ದು, ಮೇ 23 ರಿಂದ ಸೆಪ್ಟೆಂಬರ್‌ 30ರೊಳಗೆ ಈ ನೋಟುಗಳನ್ನು ಕಡಿಮೆ ಮುಖಬೆಲೆಯ ಇತರೆ ಕರೆನ್ಸಿಗೆ ವಿನಿಮಯ ಮಾಡಿಕೊಳ್ಳಲು ಅವಕಾಶವಿದೆ. ಅದರಂತೆ ಮೇ 23ರಿಂದ ಎಲ್ಲ ಬ್ಯಾಂಕ್‌ ಶಾಖೆಗಳಲ್ಲಿ ₹2,000 ನೋಟುಗಳ ವಿನಿಮಯ ಆರಂಭವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...