ಬೆಂಗಳೂರಿಗೆ ಪ್ರಧಾನಿ ಮೋದಿ: ಎಲ್ಲೆಲ್ಲಿ ಸಂಚಾರ ನಿರ್ಬಂಧ? ಇಲ್ಲಿದೆ ನೋಡಿ!

Date:

  • ಸಂಚಾರ ಮಾರ್ಪಾಡುಗಳಿಗೆ ಸಹಕರಿಸುವಂತೆ ನಾಗರಿಕರಲ್ಲಿ ಪೊಲೀಸರ ಮನವಿ
  • ಬೆಂಗಳೂರಿನಲ್ಲಿ 6 ಕಿ.ಮೀ ಮೋದಿ ರೋಡ್‌ ಶೋ ನಡೆಯಲಿದೆ

ರಾಜ್ಯ ವಿಧಾನಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ನೈಸ್​ ರಸ್ತೆಯಿಂದ ಸುಮ್ಮನಹಳ್ಳಿ ಜಂಕ್ಷನ್​ವರೆಗೆ ರೋಡ್ ಶೋ ನಡೆಸಲಿದ್ದಾರೆ. ಈ ಹಿನ್ನಲೆ, ನಗರದ ಕೆಲ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಶನಿವಾರ ಮಧ್ಯಾಹ್ನ 2ರಿಂದ ಸಂಜೆ 7.30ರವರೆಗೆ ಮಾಗಡಿ ರಸ್ತೆಯ ನೈಸ್​ ಜಂಕ್ಷನ್​ನಿಂದ ಸುಮನಹಳ್ಳಿ ಸರ್ಕಲ್​​ವರೆಗೂ ಸಂಚಾರ ನಿರ್ಬಂಧ ಹೇರಲಾಗಿದೆ.

ಎಲ್ಲೆಲ್ಲಿ ಸಂಚಾರ ನಿರ್ಬಂಧ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಓಲ್ಡ್ ಏರ್‌ಪೋರ್ಟ್ ರಸ್ತೆ, ಕಬ್ಬನ್ ರಸ್ತೆ, ಅಂಬೇಡ್ಕರ್ ರಸ್ತೆ, ಕೃಂಬಿಗಲ್ ರಸ್ತೆ, ದೇವಾಂಗ ರಸ್ತೆ, ಕೇಂಬ್ರಿಡ್ಜ್ ಲೇಔಟ್ ರಸ್ತೆ, ಡಿಕನ್‌ಸನ್ ರಸ್ತೆ, ಲಾಲ್‌ಬಾಗ್ ವೆಸ್ಟ್ ಗೇಟ್ ರಸ್ತೆ, ಕೆ.ಆರ್.ಸರ್ಕಲ್, ಆರ್.ವಿ.ಕಾಲೇಜ್ ರಸ್ತೆ, ಲಾಲ್‌ಬಾಗ್‌ ಮುಖ್ಯ ರಸ್ತೆ, ಬಸನವಗುಡಿ 50 ಅಡಿ ರಸ್ತೆ, ಕೆನರಾ ಬ್ಯಾಂಕ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಸಂಚಾರಕ್ಕೆ ಪರ್ಯಾಯ ಮಾರ್ಗ

  • ಮಾಗಡಿ ಕಡೆಯಿಂದ ಬೆಂಗಳೂರು ನಗರದ ಕಡೆಗೆ ಬರುವ ವಾಹನಗಳು ತಾವರೆಕೆರೆ ಜಂಕ್ಷನ್‌ನಲ್ಲಿ ಬಲತಿರುವು ಪಡೆದು ಹೆಮ್ಮಿಗೆಪುರ-ಕೊಮ್ಮಘಟ್ಟ ಕೆಂಗೇರಿ ಮೂಲಕ ಮೈಸೂರು ರಸ್ತೆಗೆ ಸಂಚರಿಸಬಹುದಾಗಿದೆ.
  • ಮಾಗಡಿ ಕಡೆಯಿಂದ ತುಮಕೂರು ರಸ್ತೆ ಕಡೆಗೆ ಸಂಚರಿಸುವ ವಾಹನಗಳು ತಾವರೆಕೆರೆ ಜಂಕ್ಷನ್‌ನಲ್ಲಿ ಎಡತಿರುವು ಪಡೆದು ಸೊಂಡೇಕೊಪ್ಪ ನೆಲಮಂಗಲದ ಮೂಲಕ ಸಂಚರಿಸಬಹುದಾಗಿರುತ್ತದೆ.
  • ತುಮಕೂರು ಕಡೆಯಿಂದ ಬಂದು ನೈಸ್ ರಸ್ತೆಯಲ್ಲಿ ಸಂಚರಿಸುವ ಸರಕು ವಾಹನಗಳು ನೆಲಮಂಗಲ ಸೊಂಡೇಕೊಪ್ಪ ಬೈಪಾಸ್‌ನಲ್ಲಿ ಬಲತಿರುವು ಪಡೆದು ಸೊಂಡೇಕೊಪ್ಪ-ತಾವರೆಕೆರೆ-ಹೆಮ್ಮಿಗೆಪುರ-ಕೊಮ್ಮಘಟ್ಟ ಕೆಂಗೇರಿ ಮೂಲಕ ಮೈಸೂರು ರಸ್ತೆಗೆ ಸಂಚರಿಸಬಹುದಾಗಿದೆ.
  • ನಾಯಂಡಹಳ್ಳಿ ಕಡೆಯಿಂದ ತುಮಕೂರು ರಸ್ತೆ ಕಡೆಗೆ ಬರುವ ವಾಹನಗಳು ನಾಯಂಡಹಳ್ಳಿ ಜಂಕ್ಷನ್‌ನಲ್ಲಿ ಮೈಸೂರು ರಸ್ತೆಗೆ ಚಲಿಸಿ ಕೆಂಗೇರಿ – ಆರ್ ಆರ್ ಕಾಲೇಜು ಮೂಲಕ ರಾಮೋಹಳ್ಳಿ, ಚಂದ್ರಪ್ಪ ಸರ್ಕಲ್-ತಾವರೆಕೆರೆ ಮೂಲಕ ಮಾಗಡಿ ರಸ್ತೆ ಮತ್ತು ತುಮಕೂರು ರಸ್ತೆಗೆ ಸಂಚರಿಸಬಹುದಾಗಿದೆ.
  • ಸಿ.ಎಂ.ಟಿ.ಐ ಜಂಕ್ಷನ್‌ನಿಂದ ನಾಯಂಡಹಳ್ಳಿ ಮೈಸೂರು ರಸ್ತೆ ಕಡೆಗೆ ಹೋಗುವ ವಾಹನಗಳು ಗೊರಗುಂಟೆಪಾಳ್ಯ- ವೆಸ್ಟ್ ಆಫ್ ಕಾರ್ಡ್ ರಸ್ತೆ – ಎಂ.ಸಿ ಸರ್ಕಲ್ – ವಿಜಯನಗರದ ಮೂಲಕ ಮೈಸೂರು ರಸ್ತೆಗೆ ಸಂಚರಿಸಬಹುದಾಗಿದೆ.
  • ಹಳೇ ರಿಂಗ್ ರಸ್ತೆಯಲ್ಲಿ ಕೆಂಗೇರಿ ಕಡೆಯಿಂದ ತುಮಕೂರು ರಸ್ತೆ ಕಡೆಗೆ ಬರುವ ವಾಹನಗಳು ಉಲ್ಲಾಳ ಜಂಕ್ಷನ್‌ನಲ್ಲಿ ಎಡತಿರುವು ಪಡೆದು ಉಲ್ಲಾಳ ವಿಲೇಜ್, ರಾಮಸಂದ್ರ ಬ್ರಿಡ್ಜ್-ಹೆಮ್ಮಿಗೆಪುರ–ತಾವರೆಕೆರೆ ಮೂಲಕ ತುಮಕೂರು ರಸ್ತೆಗೆ ಸಂಚರಿಸಬಹುದಾಗಿದೆ.
  • ನಗರದ ಒಳಭಾಗದಿಂದ ಮಾಗಡಿ ಕಡೆಗೆ ಸಂಚರಿಸುವ ವಾಹನಗಳು ಎಂ.ಸಿ ಸರ್ಕಲ್‌ ನಲ್ಲಿ ಎಡತಿರುವು ಪಡೆದು ಮೈಸೂರು ರಸ್ತೆ ಕೆಂಗೇರಿ ಕೊಮ್ಮಘಟ್ಟ – ಹೆಮ್ಮಿಗೆಪುರ – ತಾವರೆಕೆರೆ ಮೂಲಕ ಸಂಚರಿಸಬಹುದಾಗಿದೆ.

ಈ ಮೇಲ್ಕಂಡಂತೆ ಮಾಡಲಾದ ಸಂಚಾರ ಮಾರ್ಪಾಡುಗಳಿಗೆ ಸಾರ್ವಜನಿಕರು ಸಹಕರಿಸಬೇಕು ಎಂದು ನಗರ ಸಂಚಾರಿ ಪೊಲೀಸ್ ಇಲಾಖೆ ಮನವಿ ಮಾಡಿದೆ.

ಈ ಸುದ್ದಿ ಓದಿದ್ದೀರಾ? 2050ರ ವೇಳೆಗೆ ನೀರಿನ ಕೊರತೆ ಎದುರಿಸಲಿರುವ ಬೆಂಗಳೂರು

ರಾಜಧಾನಿಯಲ್ಲಿ ಮೋದಿ ರೋಡ್‌ ಶೋ

ಬೆಂಗಳೂರಿನಲ್ಲಿ ಬುಲೆಟ್ ಪ್ರೂಫ್ ವಾಹನದಲ್ಲಿ ಒಟ್ಟು 6 ಕಿ.ಮೀ ಮೋದಿ ರೋಡ್‌ ಶೋ ನಡೆಯಲಿದೆ. ಈ ರಸ್ತೆಯುದ್ದಕ್ಕೂ 1 ಸಾವಿರ ಮನೆ ಮತ್ತು ಅಂಗಡಿಗಳಿಗೆ ನೋಟಿಸ್ ನೀಡಲಾಗಿದೆ. ರಸ್ತೆ ಬಳಿಯ ಅಂಗಡಿ ಮುಂಗಟ್ಟು ಬಂದ್ ಮಾಡಿಸಲಾಗುತ್ತದೆ. ರಸ್ತೆಯ ಒಂದು ಭಾಗಕ್ಕೆ ಬ್ಯಾರಿಕೇಡ್​ ಅಳವಡಿಸಲಾಗಿದೆ. ಬಿಜೆಪಿ ಮೋದಿ ರೋಡ್ ಶೋಗೆ 2 ಲಕ್ಷ ಜನರನ್ನು ಸೇರಿಸಲು ಸಿದ್ಧತೆ ನಡೆದಿದೆ.

ಮೋದಿ ಅವರ ಭದ್ರತೆಗಾಗಿ 2600 ಪೊಲೀಸರ ನಿಯೋಜನೆ ಮಾಡಲಾಗಿದೆ. ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು, 6 ಡಿಸಿಪಿ, 18 ಎಸಿಪಿ, 120ಕ್ಕೂ ಹೆಚ್ಚು ಪಿಐ​​, 250 ಪಿಎಸ್​​ಐ, 2,600ಕ್ಕೂ ಹೆಚ್ಚು ಪಿಸಿಗಳು, ಕೆಎಸ್​ಆರ್‌ಪಿ ಸಿಬ್ಬಂದಿ ಮೋದಿ ರೋಡ್​ಶೋ ಭದ್ರತೆಗೆ ನಿಯೋಜಿಸಲಾಗಿದೆ.

ರಾಜ್ಯದಲ್ಲಿ ಪ್ರಧಾನಿ ಮೋದಿ ಎರಡು ದಿನ ಪ್ರವಾಸ ನಡೆಸಲಿದ್ದಾರೆ. ಒಟ್ಟಾರೆ 6 ಸಮಾವೇಶಗಳು 2 ರೋಡ್‌ ಶೋ ನಡೆಸಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...