ರಾಜಧಾನಿಗೆ ಪ್ರಧಾನಿ ಆಗಮನ; ಎಲ್ಲೆಲ್ಲಿ ಸಂಚಾರ ನಿರ್ಬಂಧ

Date:

  • ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2.30 ರವರೆಗೆ ಸಾರ್ವಜನಿಕ ವಾಹನಗಳ ಸಂಚಾರಕ್ಕೆ ನಿರ್ಬಂಧ
  • ವೈಟ್ ಫೀಲ್ಡ್ ಮೆಟ್ರೋ ಸ್ಟೇಷನ್ ವರೆಗೂ ಸುಮಾರು 1 ಕಿ.ಮೀ. ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ

ರಾಜಧಾನಿ ಬೆಂಗಳೂರಿನಲ್ಲಿ ಮಾರ್ಚ್ 25ರಂದು ವೈಟ್ ಫಿಲ್ಡ್ – ಕೆ.ಆರ್.ಪುರ ನಡುವಿನ ಮೆಟ್ರೋಗೆ ಚಾಲನೆ ನೀಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ನಗರಕ್ಕೆ ಆಗಮಿಸುತ್ತಿರುವ ಹಿನ್ನಲೆ, ನಗರದ ಕೆಲವೆಡೆ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

ವೈಟ್ ಫೀಲ್ಡ್ –ಕೆ.ಆರ್.ಪುರ ನೂತನ ಮೆಟ್ರೋ ಮಾರ್ಗದ ಉದ್ಘಾಟನೆಯ ನಂತರ ಮಹದೇವಪುರ ಕ್ಷೇತ್ರದ ಸತ್ಯ ಸಾಯಿ ಆಶ್ರಮದಿಂದ ವೈಟ್ ಫೀಲ್ಡ್ ಮೆಟ್ರೋ ಸ್ಟೇಷನ್ ವರೆಗೂ ಸುಮಾರು 1 ಕಿ.ಮೀ. ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಲಿದ್ದಾರೆ. ಮೆಟ್ರೋ ಸುತ್ತಮುತ್ತ 5 ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಮಾ.25ರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2.30 ರವರೆಗೆ ಸಾರ್ವಜನಿಕ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಯಾವ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

• ವರ್ತೂರು ಕೋಡಿಯಿಂದ ಹೋಫ್ ಫಾರಂ ಜಂಕ್ಷನ್ ಮೂಲಕ ಕನ್ನಮಂಗಲ ಗೇಟ್ ವರೆಗೆ
• ಚನ್ನಸಂದ್ರದಿಂದ ಹೋಫ್ ಫಾರಂ ಮೂಲಕ ಹೂಡಿ ಸರ್ಕಲ್ ವರೆಗೆ
• ಕುಂದಲಹಳ್ಳಿ ರಸ್ತೆಯಿಂದ ವೈದೇಹಿ ಆಸ್ಪತ್ರೆ ಮೂಲಕ ಹೋಫ್ ಫಾರಂ ಜಂಕ್ಷನ್ ವರೆಗೆ ಸಂಚಾರ ನಿರ್ಬಂಧ

ಸಂಚಾರ ಮಾರ್ಪಾಡು ಮಾಡಿದ ರಸ್ತೆಗಳು

• ವರ್ತೂರು ಕೋಡಿಯಿಂದ ಕುಂದಲಹಳ್ಳಿ ಬ್ರಿಡ್ಜ್ ಮೂಲಕ ಹಳೇ ಏರ್ ಪೋರ್ಟ್ ರಸ್ತೆ ತಲುಪುವುದು
• ಚನ್ನಸಂದ್ರ ಸರ್ಕಲ್ ನಿಂದ ನಾಗೊಂಡನಹಳ್ಳಿ, ಇಮ್ಮಡಿಹಳ್ಳಿ ಹಗದೂರು ಮೂಲಕ ವರ್ತೂರು ಕೋಡಿ ತಲುಪುವುದು
• ಕಾಟಂನಲ್ಲೂರು ಕ್ರಾಸ್ ನಿಂದ ಶೀಗೆಹಳ್ಳಿ ಗೇಟ್, ಕಾಡುಗೋಡಿ ನಾಲಾ ರಸ್ತೆ ಮೂಲಕ ಚನ್ನಸಂದ್ರ
• ಹೂಡಿ ಸರ್ಕಲ್ ನಿಂದ ಗ್ರಾಫೈಟ್ ರಸ್ತೆ ಮೂಲಕ ಕುಂದಲಹಳ್ಳಿ ತಲುಪುವುದು
• ಹೂಡಿ ಸರ್ಕಲ್ ನಿಂದ ಅಯ್ಯಪ್ಪನಗರ, ಭಟ್ಟರಹಳ್ಳಿ-ಮೇಡಹಳ್ಳಿ ಮೂಲಕ ಕಾಟಂನಲ್ಲೂರು ಕ್ರಾಸ್ ತಲುಪುವುದು.

https://twitter.com/blrcitytraffic/status/1639166956291932161?s=20

ಐದು ರಸ್ತೆಗಳಲ್ಲಿ ಭಾರೀ ವಾಹನಗಳ ಸಂಚಾರ ಕೂಡ ನಿರ್ಬಂಧ

• ಕಾಟಂನಲ್ಲೂರು ಕ್ರಾಸ್ ನಿಂದ ಕಾಡುಗೋಡಿ, ಹೋಫ್ ಫಾರಂ ಜಂಕ್ಷನ್-ವರ್ತೂರು ಕೋಡಿವರೆಗೆ
• ಗುಂಜೂರುನಿಂದ ವರ್ತೂರು, ವೈಟ್ ಫೀಲ್ಡ್, ಕಾಡುಗೋಡಿ, ಕಾಟಂನಲ್ಲೂರು ಕ್ರಾಸ್ ವರೆಗೆ.
• ತಿರುಮಲಶೆಟ್ಟಿಹಳ್ಳಿ ಕ್ರಾಸ್ ನಿಂದ ಚನ್ನಸಂದ್ರ, ಹೋಫ್ ಫಾರಂ ಜಂಕ್ಷನ್ ವರೆಗೆ
• ಟಿನ್ ಫ್ಯಾಕ್ಟರಿಯಿಂದ ಹೂಡಿ, ಐಟಿಪಿಎಲ್, ಹೋಫ್ ಫಾರಂ ಜಂಕ್ಷನ್ ವರೆಗೆ.
• ಮಾರತ್ತಹಳ್ಳಿ ಬ್ರಿಡ್ಜ್ ನಿಂದ ಕುಂದಲಹಳ್ಳಿ, ವರ್ತೂರು ಕೋಡಿ, ವೈಟ್ ಫೀಲ್ಡ್ ವರೆಗೆ ಭಾರೀ ವಾಹನಗಳ ಸಂಚಾರ ನಿರ್ಬಂಧ.

ಭಾರೀ ವಾಹನಗಳ ಸಂಚಾರ ಮಾರ್ಪಾಡು

• ಹೊಸಕೋಟೆಯಿಂದ ದೊಡ್ಡಗಟ್ಟಿಗನಬ್ಬೆ, ತಿರುಮಲಶೆಟ್ಟಿಹಳ್ಳಿ, ಚಿಕ್ಕತಿರುಪತಿ ಮೂಲಕ ಸರ್ಜಾಪುರ ತಲುಪುವುದು
• ಸರ್ಜಾಪುರದಿಂದ ಗುಂಜೂರು, ನೆರಿಗೆರಸ್ತೆ, ತಿರುಮಲಶೆಟ್ಟಿಹಳ್ಳಿ ಮೂಲಕ ಹೊಸಕೋಟೆ
• ಟಿನ್ ಫ್ಯಾಕ್ಟರಿಯಿಂದ ಕೆ ಆರ್ ಪುರ, ಭಟ್ಟರಹಳ್ಳಿ ಮೂಲಕ ಹೊಸಕೋಟೆ.
• ಮಾರತ್ತಹಳ್ಳಿಯಿಂದ ದೊಡ್ಡನೆಕ್ಕುಂದಿ ಮಹದೇವಪುರ ಟಿನ್ ಫ್ಯಾಕ್ಟರಿ ಮೂಲಕ ಭಟ್ಟರಹಳ್ಳಿ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...