ಮನರೇಗಾ ಮಾನವ ಉದ್ಯೋಗಗಳನ್ನು 18,000 ಕೋಟಿಗೆ ಹೆಚ್ಚಿಸಲು ಪ್ರಸ್ತಾವನೆ

Date:

ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದು, ಮನರೇಗಾ ಅಡಿಯಲ್ಲಿ ನೀಡಲಾಗುವ ಉದ್ಯೋಗಗಳನ್ನು 13,000 ಕೋಟಿ ಮಾನವ ಉದ್ಯೋಗಗಳನ್ನು 18,000 ಕೋಟಿಗೆ ಹೆಚ್ಚಿಸುವಂತೆ ಪ್ರಸ್ತಾವನೆ ಸಲ್ಲಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ನೇತೃತ್ವದ ಬರಗಾಲ ಸಂಪುಟ ಉಪಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.

ಅಲ್ಲದೆ, ರಾಜ್ಯವು ಬರಗಾಲದಿಂದ ತತ್ತರಿಸಿರುವುದರಿಂದ ಒಬ್ಬ ವ್ಯಕ್ತಿಗೆ ವಾರ್ಷಿಕವಾಗಿ 100 ದಿನಗಳ ಉದ್ಯೋಗವನ್ನು 150 ದಿನಗಳಿಗೆ ಹೆಚ್ಚಿಸಬೇಕು ಎಂದು ಉಪಸಮಿತಿ ಹೇಳಿದೆ.

“ಸೆಪ್ಟೆಂಬರ್‌ನಲ್ಲಿ ಸಲ್ಲಿಸಿದ್ದ ರಾಜ್ಯದ ಪ್ರಸ್ತಾವನೆಗೆ ಕೇಂದ್ರವು ಸ್ಪಂದಿಸಿಲ್ಲ. ಉದ್ಯೋಗ ದಿನ ಹೆಚ್ಚಳವನ್ನು ಐಚ್ಛಿಕವಾಗಿ ಮಾಡಲು ಸಾಧ್ಯವಿಲ್ಲ. ಇದನ್ನು ಕಾಯಿದೆಯ ಪ್ರಕಾರ ಹೆಚ್ಚಿಸಬೇಕು. ನಾವು ಅದಕ್ಕಾಗಿ ಕೇಂದ್ರದೊಂದಿಗೆ ಹೋರಾಡಬೇಕಾಗಿದೆ” ಎಂದು ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಫಸಲ್ ಬಿಮಾ ಯೋಜನೆಯಡಿ ರೈತರಿಗೆ ತಕ್ಷಣದ ಪರಿಹಾರವಾಗಿ 230 ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕಿದೆ” ಎಂದು ಅವರು ಹೇಳಿದ್ದಾರೆ.

“ಶಾಸಕರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಕಾರ್ಯಪಡೆಗಳು ತಹಶೀಲ್ದಾರ್ ಖಾತೆಗಳಿಗೆ ಜಮೆಯಾಗಿರುವ ಅನುದಾನದಲ್ಲಿ ಬರ ಪರಿಹಾರ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳಬೇಕು. ಬರ ನಿರ್ವಹಣೆಗೆ ತಮ್ಮ ಖಾತೆಯಲ್ಲಿ ಲಭ್ಯವಿರುವ 783 ಕೋಟಿ ರೂ.ಗಳನ್ನು ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲು ಸಚಿವ ಸಂಪುಟ ಉಪಸಮಿತಿ ನಿರ್ಧರಿಸಿದೆ” ಎಂದು ಸಚಿವರು ಹೇಳಿದ್ದಾರೆ.

”ಕುಡಿಯುವ ನೀರಿನ ಪರಿಸ್ಥಿತಿ ಸ್ವಲ್ಪ ಮಟ್ಟಿಗೆ ಸುಧಾರಿಸಿದೆ. ಆದರೆ, ಮುಂದಿನ ದಿನಗಳಲ್ಲಿ ಬರ ಪರಿಸ್ಥಿತಿ ಎದುರಾಗುವ ನಿರೀಕ್ಷೆ ಇರುವುದರಿಂದ ಕ್ರಮಕೈಗೊಳ್ಳಬೇಕು. ಜಾನುವಾರುಗಳಿಗೆ ಮೇವು ಬೆಳೆಯಲು ಬಿತ್ತನೆ ಬೀಜದ ಕಿಟ್‌ಗಳನ್ನು ವಿತರಿಸಲಾಗಿದೆ. ನೆರೆಯ ರಾಜ್ಯಗಳಿಗೆ ಮೇವು ಸಾಗಣೆಯನ್ನು ನಿಷೇಧಿಸಲಾಗಿದೆ” ಎಂದು ಅವರು ತಿಳಿಸಿದ್ದಾರೆ.

“2015 ರಿಂದ ಕೃಷಿ ಗಣತಿಯನ್ನು ನಡೆಸಲಾಗಿಲ್ಲ. ಆದ್ದರಿಂದ, ಕೇಂದ್ರದ ಅಂಕಿಅಂಶಗಳು ಹಳೆಯದಾಗಿದೆ. ನಾವು ರೈತರ ಮಾಹಿತಿಯನ್ನು ನವೀಕರಿಸಿದ್ದೇವೆ. ಪರಿಹಾರದ ಲೆಕ್ಕಾಚಾರ ಮಾಡುವಾಗ ಈ ಬಗ್ಗೆ ಕೇಂದ್ರಕ್ಕೆ ಮನವರಿಕೆ ಮಾಡಿಕೊಡುತ್ತಿದ್ದೇವೆ. ಕೇಂದ್ರವು ನಮ್ಮ ಅಂಕಿಅಂಶಗಳನ್ನು ಪರಿಗಣಿಸದಿದ್ದರೆ, ರಾಜ್ಯಕ್ಕೆ ಅನ್ಯಾಯವಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಸಭೆಯಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...