ಶಾಸಕ ಎಸ್‌ ಸುರೇಶ್‌ ಕುಮಾರ್‌ ಮನೆ ಮುಂದೆ ಭಿತ್ತಿಪತ್ರ ಅಂಟಿಸಿ ಕಾಂಗ್ರೆಸ್‌ ಪ್ರತಿಭಟನೆ

Date:

ರಾಜಾಜಿನಗರ ಶಾಸಕ ಎಸ್‌ ಸುರೇಶ್‌ ಕುಮಾರ್‌ ಅವರು ಶುಕ್ರವಾರ ವಿಧಾನಸಭೆಯ ಕಲಾಪದ ವೇಳೆ ಸಚಿವ ಬೈರತಿ ಸುರೇಶ್‌ ವಿರುದ್ಧ ಅವಮಾನಕರ ಹೇಳಿಕೆ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರಿಂದ ಶಾಸಕರ ಮನೆ ಕಾಂಪೌಂಡ್‌ಗೆ ಭಿತ್ತಿಪತ್ರ ಅಂಟಿಸಿ ಪ್ರತಿಭಟನೆ ನಡೆಸಿದ್ದಾರೆ.

ಕಲಾಪದಲ್ಲಿ ಮಾತನಾಡುವಾಗ ಶಾಸಕರು, ಸಚಿವ ಬೈರತಿ ಸುರೇಶ್‌ ಅವರನ್ನು ಉದ್ದೇಶಿಸಿ, “ಏಳು ತಿಂಗಳಿಗೆ ಹುಟ್ಟಿದವರು ಮಾತ್ರ ನಿಮ್ಮಂತೆ ಆಡ್ತಾರೆ, ಒಂಭತ್ತು ತಿಂಗಳಿಗೆ ಹುಟ್ಟಿದವರು ಸರಿ ಇರ್ತಾರೆ” ಎಂದು ಲಘವಾದ ಹೇಳಿಕೆ ನೀಡಿದ್ದರು. ಇದಕ್ಕೆ ಸಚಿವರಾದ ಬೈರತಿ ಸುರೇಶ್‌ ಮತ್ತು ಪ್ರಿಯಾಂಕ್‌ ಖರ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಆಕ್ಷೇಪ ವ್ಯಕ್ತಪಡಿಸಿ ಸದನದ ಕಡತದಿಂದ ಈ ಹೇಳಿಕೆಯನ್ನು ತೆಗೆದು ಹಾಕುವಂತೆ ಸಲಹೆ ನೀಡಿದ್ದರು. ಸ್ಪೀಕರ್‌ ಖಾದರ್‌ ಕೂಡಾ ಕಡತದಿಂದ ತೆಗೆಯುವಂತೆ ಸಿಬ್ಬಂದಿಗೆ ಸೂಚಿಸಿದ್ದರು. ಇಂದು ಮುಂಜಾನೆ ಕಾಂಗ್ರೆಸ್‌ ಕಾರ್ಯಕರ್ತರು ಭಿತ್ತಿ ಪತ್ರ ಅಂಟಿಸಿ ಪ್ರತಿಭಟಿಸಿದ್ದಾರೆ. ಅಷ್ಟೇ ಅಲ್ಲ ಸುರೇಶ್‌ ಕುಮಾರ್‌ ಅವರು ತಾಯಂದಿರಿಗೆ ಅವಮಾನ ಮಾಡಿದ್ದಾರೆ. ಅವರು ಬಹಿರಂಗ ಕ್ಷಮೆ ಯಾಚಿಸಬೇಕು ಎಂದು ಕಾಂಗ್ರೆಸ್‌ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

WhatsApp Image 2026 01 24 at 1.33.45 PM

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...