ಅತ್ಯಾಚಾರದ ಆರೋಪಿಗಳಾದ ಪ್ರಜ್ವಲ್‌, ಎಚ್‌ ಡಿ ರೇವಣ್ಣ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

Date:

ಅತ್ಯಾಚಾರದ ಆರೋಪಿಗಳಾದ ಪ್ರಜ್ವಲ್‌ ರೇವಣ್ಣ ಮತ್ತು ಎಚ್‌ ಡಿ ರೇವಣ್ಣ ಅವರನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿ ʼನಾವೆದ್ದು ನಿಲ್ಲದಿದ್ದರೆ, ಕರ್ನಾಟಕʼ ಸಂಘಟನೆಯಡಿ ಹಲವು ಪ್ರಗತಿಪರ ಚಿಂತಕರು, ಹೋರಾಟಗಾರರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ನೂರಾರು ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಂಡು ವಿಡಿಯೊ ಮಾಡಿದ್ದು ಅಕ್ಷಮ್ಯ. ಅಷ್ಟೇ ಅಲ್ಲ ಅಂತಹ ಅಶ್ಲೀಲ ವಿಡಿಯೊ, ಚಿತ್ರಗಳು ಬಹಿರಂಗಗೊಂಡು ಮಹಿಳೆಯರ ಘನತೆಗೆ ಧಕ್ಕೆಯಾಗಿದೆ. ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಎಂದು ಹೋರಾಟಗಾರರು ಒತ್ತಾಯಿಸಿದರು.

“ಹೊಳೆನರಸೀಪುರದ ದೂರಿಗೆ ಸಂಬಂಧಿಸಿದಂತೆ ಎ 1 ಆರೋಪಿ ಎಚ್‌ ಡಿ ರೇವಣ್ಣ ಅವರು ಹೈಕೋರ್ಟ್‌ಗೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನಿನ ಅರ್ಜಿ ವಾಪಸ್‌ ತೆಗೆದುಕೊಳ್ಳಲು ಕಾರಣವಾಗಿದ್ದು ಆತನನ್ನು ಬಂಧಿಸುವುದಿಲ್ಲ ಎಂದು ಕೋರ್ಟ್‌ಗೆ ಸರ್ಕಾರ ತಿಳಿಸಿದ್ದು. ಇದು ಅಕ್ಷಮ್ಯ, ಗಂಭೀರವಲ್ಲದ ಕಲಂನಡಿ ಎಫ್‌ಐಆರ್‌ ದಾಖಲಿಸಿ ಆರೋಪಿಯನ್ನು ಸರ್ಕಾರ ರಕ್ಷಿಸುತ್ತಿದೆ” ಎಂದು ಎಂದು ಹೋರಾಟಗಾರ್ತಿ ಕೆ ಎಸ್‌ ವಿಮಲಾ ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ದಿನ.ಕಾಮ್‌ ಜೊತೆ ಮಾತನಾಡಿದ ಹಿರಿಯ ಪತ್ರಕರ್ತೆ ಎಸ್‌ ಸತ್ಯಾ, ಎಚ್‌ ಡಿ ದೇವೇಗೌಡರ ಕುಟುಂಬದ  ಫ್ಯೂಡಲ್‌ ಮನಸ್ಥಿತಿಯೇ, ರೇವಣ್ಣ ಮತ್ತು ಪ್ರಜ್ವಲ್‌ ಈ ರೀತಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಲು ಕಾರಣ. ಪ್ರಜ್ವಲ್‌ ಸಂಸದ, ತಂದೆ ಶಾಸಕ, ಸಹೋದರ ಎಂಎಲ್‌ಸಿ, ತಾತ ಮಾಜಿ ಪ್ರಧಾನಿ, ಚಿಕ್ಕಪ್ಪ ಶಾಸಜ, ಮಾಜಿ ಮುಖ್ಯಮಂತ್ರಿ. ಇಷ್ಟೆಲ್ಲ ಅಧಿಕಾರ ತಮ್ಮ ಬಳಿ ಇರುವ ಕಾರಣ ಏನೇ ಮಾಡಿದರು ನಡೆಯುತ್ತದೆ ಎಂಬ ದರ್ಪ ಎದ್ದು ಕಾಣುತ್ತದೆ ಎಂದರು. ಈ ಪ್ರಕರಣದಲ್ಲಿ ಹಲವು ಮಹಿಳೆಯರ ವಿಡಿಯೋಗಳು ಸಾರ್ವಜನಿಕರಿಗೆ ಸಿಕ್ಕಿರುವುದು ಗಂಭೀರ ಲೋಪ. ಹದಿಹರೆಯದ ಯುವಕರು ಈ ವಿಡಿಯೊಗಳನ್ನು ನೋಡಿ ತಾವೂ ತಪ್ಪು ಹಾದಿಗೆ ಇಳಿಯುವ ಅಪಾಯವಿದೆ. ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದರು.

ಸಾಮಾಜಿಕ ಹೋರಾಟಗಾರ್ತಿ ಅಕ್ಕೈ ಮಾತನಾಡಿ, ಮಹಿಳೆಯ ದೇಹ ನಿಮ್ಮ ರಾಜಕೀಯದ ರಣರಂಗವಲ್ಲ. ಮಹಿಳೆಯ ಒಪ್ಪಿಗೆ ಇಲ್ಲದೇ ನಡೆಸುವ ಲೈಂಗಿ, ಕ್ರಿಯೆ ಆತ್ಯಾಚಾರಕ್ಕೆ ಸಮ. ಈ ಪ್ರಕರಣದ ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದರು.

ಹೋರಾಟಗಾರರಾದ ಅಖಿಲಾ ವಿದ್ಯಾಸಂದ್ರ, ಜ್ಯೋತಿ ಅನಂತ ಸುಬ್ಬರಾವ್‌, ಸುರೇಂದ್ರ ರಾವ್‌, ನ್ಯಾಯವಾದಿ ವೆಂಕಟೇಶ್‌, ಕವಿ ದಾದಾಫಿರ್‌, ವಕೀಲೆ ಪೂರ್ಣಾ, ವಿಜ್ಞಾನಿ ಪ್ರಜ್ವಲಾ ಸೇರಿದಂತೆ ಹವಲರು ಉಪಸ್ಥಿತರಿದ್ದರು. ಲಿಂಗತ್ವ ಅಲ್ಪಸಂಖ್ಯಾತರು, ಹಲವು ಸಂಘಟನೆಗಳ ಕಾರ್ಯಕರ್ತರು, ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕಿರು ನಾಟಕವನ್ನು ಪ್ರದರ್ಶಿಸಲಾಯಿತು. ಅತ್ಯಾಚಾರಿಗಳನ್ನು ಬಂಧಿಸಿ ಎಂಬ ಘೋಷಣೆ ಕೂಗಲಾಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...