ಬೆಂಗಳೂರು | ಪ್ಯಾಲೆಸ್ತೀನ್ ಸ್ವಾತಂತ್ರ್ಯಕ್ಕಾಗಿ ಫ್ರೀಡಂ ಪಾರ್ಕ್‌ನಲ್ಲಿ ಮೊಳಗಿದ ಘೋಷ

Date:

ಪ್ಯಾಲೆಸ್ತೀನ್ ಮೇಲೆ ಇಸ್ರೇಲ್ ನಡೆಸುತ್ತಿರುವ ದಮನವನ್ನು ನಿಲ್ಲಿಸಬೇಕು. ಭಾರತವು ಪ್ಯಾಲೆಸ್ತೀನ್ ಪರವಾಗಿ, ಪ್ಯಾಲೆಸ್ತೀನಿಯರ ಉಳಿವಿಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ತರಬೇಕು ಎಂದು ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಲವಾರು ಮಂದಿ ಒಗ್ಗೂಡಿ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ, ಪ್ಯಾಲೆಸ್ತೀನಿ ಪರ ಪ್ರತಿಭಟನೆಗಳಿಗೆ ಅವಕಾಶ ಕೊಡದ ರಾಜ್ಯ ಕಾಂಗ್ರೆಸ್‌ ಸರ್ಕಾರದ ಧೋರಣೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ಯಾಲೆಸ್ತೀನ್ ಮೇಲಿನ ಇಸ್ತೇಲ್ ದಬ್ಬಾಳಿಕೆ ಮತ್ತು ನರಮೇಧವನ್ನು ಹಲವಾರು ವರ್ಷಗಳಿಂದ ಹಲವು ದೇಶಗಳು ವಿರೋಧಿಸಿವೆ. ಇಸ್ತೇಲಿನ ಪ್ರಜ್ಞಾವಂತ ನಾಗರಿಕರು ಪ್ಯಾಲೆಸ್ತೀನ್ ವಿರುದ್ಧದ ಇಸ್ತೇಲ್ ನೀತಿಯನ್ನು ಮತ್ತು ಯಹೂದಿಗಳ ಪರವಾದ ಧೋರಣೆಗಳನ್ನು ಖಂಡಿಸಿದ್ದಾರೆ. ಇಡೀ ಜಗತ್ತು ಪ್ಯಾಲೆಸ್ತೀನಿಯರ ಪರ ನಿಲ್ಲಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

“ಕಳೆದ 75 ವರ್ಷಗಳಲ್ಲಿ ಇಸ್ರೇಲ್‌ ಸಾವಿರಾರು ಪ್ಯಾಲೆಸ್ತೀನಿಯರನ್ನು ಕೊಂದಿದೆ. ಹಿಂಸಿಸಿದೆ. ಪ್ಯಾಲೆಸ್ತೀನ್ ಭೂ ಭಾಗವನ್ನು ಆಕ್ರಮಿಸಿಕೊಂಡಿದೆ. ಇಸ್ತೇಲ್‌ ನೀತಿಯನ್ನು ಹಲವಾರು ರಾಷ್ಟ್ರಗಳು ವಿರೋಧಿಸಿವೆ. ಭಾರತದ ಮಹಾತ್ಮಾ ಗಾಂಧಿ, ಜವಾಹರಲಾಲ್‌ ನೆಹರು ಸೇರಿದಂತೆ ಹಲವರು ಹಾಗೂ ಭಾರತದಲ್ಲಿ ಆಡಳಿತ ನಡೆಸಿದ ಸರ್ಕಾರಗಳು ಖಂಡಿಸಿವೆ. ಆದರೆ, ಈಗ ಬಿಜೆಪಿ ಸರ್ಕಾರ ಪ್ಯಾಲೆಸ್ತೀನಿ ಪರ ನಿಲುವು ಮಂಡಿಸಿದೆ, ತಟಸ್ಥವಾಗಿ ಉಳಿದಿದೆ. ಇದು ಖಂಡನೀಯ” ಎಂದು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಾರತವು ಪ್ಯಾಲೆಸ್ತೀನ್ ಪರ ನಿಲ್ಲಬೇಕು. ಪ್ಯಾಲೆಸ್ತೀನಿಯರ ಸ್ವಾತಂತ್ರ್ಯ ಮತ್ತು ಉಳಿವಿಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ತರಬೇಕು” ಎಂದು ಆಗ್ರಹಿಸಿದ್ದಾರೆ.

ಪ್ಯಾಲೆಸ್ತೀನ್ 1

ಈ ನಡುವೆ, ಪ್ಯಾಲೆಸ್ತೀನಿ ಪರವಾದ ಕಾರ್ಯಕ್ರಮಗಳು, ಸಭೆಗಳನ್ನು ನಡೆಸಲು ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆ ಅನುಮತಿ ನೀಡದೇ ಇರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, “ಸರ್ಕಾರವು ಪ್ರಜಾಪ್ರಭುತ್ವ ಮತ್ತು ಸಂವಿಧಾನ ವಿರೋಧಿ ಧೋರಣೆಗಳನ್ನು ಜನರ ಮೇಲೆ ಹೇರುತ್ತಿವೆ. ಪೊಲೀಸರು ಸಂವಿಧಾನದಿಂದ ಆಯ್ಕೆಯಾದವರು. ಅವರು ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುತ್ತಿದ್ದಾರೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಮನ” ಎಂದು ಕಿಡಿಕಾರಿದ್ದಾರೆ.

“ಕಾಂಗ್ರೆಸ್‌ ಚುನಾವಣೆಗೂ ಮುನ್ನ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಸಾಕಷ್ಟು ಮಾತನಾಡಿತ್ತು. ಆದರೆ, ಅಧಿಕಾರಕ್ಕೆ ಬಂದ ಮೇಲೆ ಚುನಾವಣಾ ರಾಜಕಾರಣಕ್ಕಾಗಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನೇ ಕಡೆಗಣಿಸುತ್ತಿದೆ. ಕಾಂಗ್ರೆಸ್‌ ವರಿಷ್ಠರೇ ಪ್ಯಾಲೆಸ್ತೀನ್‌ಗೆ ಬೆಂಬಲ ಘೋಷಿಸಿದ್ದಾರೆ. ಆದರೆ, ಅದನ್ನು ಅನುಸರಿಸಲು ಕಾಂಗ್ರೆಸ್‌ ಸರ್ಕಾರ ಹಿಂದೇಟು ಹಾಕುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ರಾಜ್ಯದಲ್ಲಿಯೂ ಮುಸ್ಲಿಮರ 2ಬಿ ಮೀಸಲಾತಿಯನ್ನು ಮರಳಿ ತರುತ್ತೇವೆ. ಜಾತಿ ಗಣತಿಯನ್ನು ಸ್ವೀಕರಿಸಿ, ಬಿಡುಗಡೆ ಮಾಡುತ್ತೇವೆ. ಸದಾಶಿವ ಆಯೋಗ, ಕಾಂತರಾಜ ಆಯೋಗದ ವರದಿಯನ್ನು ಅನುಷ್ಠಾನಗೊಳಿಸುತ್ತೇವೆಂದು ಕಾಂಗ್ರೆಸ್‌ ತನ್ನ ಪ್ರಣಾಳಿಕೆಯನ್ನು ಭರವಸೆ ನೀಡಿತ್ತು. ಆದರೆ, ಈಗ ಅದಾವುದನ್ನೂ ಮಾಡದೆ, ಮೌನವಾಗಿದೆ” ಎಂದು ಕಿಡಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...