ಪುನೀತ್​ ಕೆರೆಹಳ್ಳಿ ಬಂಧನ; ಠಾಣೆಯಲ್ಲಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Date:

ಬೆಂಗಳೂರಿಗೆ ಬೇರೆ ರಾಜ್ಯದಿಂದ ನಾಯಿ ಮಾಂಸ ಸಾಗಾಟ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಹಿಂದೂ ಸಂಘಟನೆಯ ಮುಖಂಡ ಪುನೀತ್​ ಕೆರೆಹಳ್ಳಿ ಠಾಣೆಯಲ್ಲೇ ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಕರಣದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಕಾಟನ್​ಪೇಟೆ ಪೊಲೀಸರು ಪುನೀತ್​ ಕೆರೆಹಳ್ಳಿ ಅವರನ್ನು ರಾತ್ರಿ 12 ಗಂಟೆ ವೇಳೆಗೆ ಬಂಧಿಸಿದ್ದರು. ಠಾಣೆಯಲ್ಲಿ ಮಲಗಿದ್ದ ಪುನೀತ್ ಮುಂಜಾನೆ 4.45ರ ವೇಳೆಗೆ ಅಸ್ವಸ್ಥಗೊಂಡಿದ್ದು ಕೆ.ಸಿ.ಜನರಲ್​​ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಬಳಿಕ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಏನಿದು ನಾಯಿ ಮಾಂಸ ಸಾಗಾಟ ಆರೋಪ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶುಕ್ರವಾರ ರಾತ್ರಿ ಜೈಪುರದಿಂದ ಸುಮಾರು 50ಕ್ಕೂ ಹೆಚ್ಚು ಬಾಕ್ಸ್‌ಗಳಲ್ಲಿ 4,500 ಕೆಜಿ ಕುರಿ ಮಾಂಸ ಸಾಗಿಸಲಾಗಿದ್ದು, ಇದರಲ್ಲಿ ನಾಯಿ ಮಾಂಸವನ್ನು ಕೂಡಾ ಸೇರ್ಪಡೆ ಮಾಡಲಾಗಿದೆ ಎಂದು ಪುನೀತ್​ ಕೆರೆಹಳ್ಳಿ ಆರೋಪಿಸಿದ್ದಾರೆ.

ರೈಲಿನಿಂದ ಈ ಬಾಕ್ಸ್‌ಗಳನ್ನು ಹೊರಗೆ ತರುತ್ತಿದ್ದಂತೆ ಪುನೀತ್ ಕೆರೆಹಳ್ಳಿ ಮತ್ತು ಇತರರು ರೈಲು ನಿಲ್ದಾಣದಲ್ಲೇ ಬಾಕ್ಸ್‌ಗಳ ರವಾನೆಗೆ ಅಡ್ಡಿಪಡಿಸಿದ್ದರು. ಈ ಬಾಕ್ಸ್‌ಗಳಲ್ಲಿ ನಾಯಿ ಮಾಂಸ ಇದೆ, ಸ್ವಚ್ಛವಾಗಿಲ್ಲ ಎಂದು ದೂರಿದ್ದರು.

ಇದನ್ನು ಓದಿದ್ದೀರಾ?  ಕೋಮು ದ್ವೇಷ ಹರಡಲು ಯತ್ನ: ಪುನೀತ್ ಕೆರೆಹಳ್ಳಿ ವಿರುದ್ಧ ಪೊಲೀಸ್ ದೂರು

ಆದರೆ ಮಾಂಸ ವ್ಯಾಪಾರಿ ಅಬ್ದುಲ್ ರಜಾಕ್, “ಇದು ಕುರಿ ಮಾಂಸವಾಗಿದೆ. ಪುನೀತ್ ಕೆರೆಹಳ್ಳಿ ಅವರಿಗೆ ರೋಲ್‌ ಕಾಲ್ ಕೊಡಲಿಲ್ಲ ಎಂಬ ಕಾರಣಕ್ಕೆ ಈ ರೀತಿ ಆರೋಪ ಮಾಡುತ್ತಿದ್ದಾರೆ. ಈ ಮಾಂಸ ಸಾಗಾಟಕ್ಕೆ ನನ್ನ ಬಳಿ ಪರವಾನಗಿ ಇದೆ” ಎಂದು ಹೇಳಿದ್ದಾರೆ.

ಈ ಪ್ರಕರಣದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಪುನೀತ್ ಕೆರೆಹಳ್ಳಿ ಬಂಧಿಸಲಾಗಿದ್ದು, ಸದ್ಯ ಅಸ್ವಸ್ಥರಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಈ ಮಾಂಸವನ್ನು ಬಿಬಿಎಂಪಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಅಧಿಕಾರಿಗಳು ಗುಣಮಟ್ಟ ಹಾಗೂ ಮಾಂಸ ದೃಢೀಕರಣಕ್ಕಾಗಿ ಪರೀಕ್ಷೆಗೆ ಕಳುಹಿಸಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಬಿಬಿಎಂಪಿ ಆಹಾರ ಸುರಕ್ಷತೆ ಅಧಿಕಾರಿ ಸುಬ್ರಮಣ್ಯ, “ನಾವು ಒಟ್ಟು ನಾಲ್ಕು ಬಾಕ್ಸ್‌ಗಳಿಗೆ ಸ್ಯಾಂಪಲ್ ಸಂಗ್ರಹಿಸಿದ್ದೇವೆ. ವಿವಿಧ ಭಾಗಗಳಿಂದ ಮಾಂಸದ ಮಾದರಿ ಪಡೆದಿದ್ದೇವೆ. ಇದನ್ನು ಲ್ಯಾಬ್‌ಗೆ ರವಾನಿಸಿ ಪರೀಕ್ಷಿಸಲಾಗುತ್ತದೆ” ಎಂದು ಹೇಳಿದ್ದಾರೆ.

“ಈ ಮಾಂಸದ ಪರೀಕ್ಷೆಯ ವರದಿ ಬರಲು 14 ದಿನಗಳು ಬೇಕಾಗುತ್ತದೆ. ಪರೀಕ್ಷೆಯಲ್ಲಿ ಈ ಮಾಂಸದ ಗುಣಮಟ್ಟ ಮತ್ತು ಇದು ಯಾವುದರ ಮಾಂಸ ಎಂದು ತಿಳಿಯಲಿದೆ. ಒಂದು ವೇಳೆ ದೂರಿನಂತೆ ಇದು ನಾಯಿ ಮಾಂಸವಾಗಿದ್ದರೆ ವ್ಯಾಪಾರಿಯ ಮೇಲೆ ಕ್ರಮ ಕೈಗೊಳ್ಳಲಾಗುವುದು. ಕುರಿ ಮಾಂಸವೇ ಆಗಿದ್ದರೆ ದೂರುದಾರನ ಮೇಲೆ ಕ್ರಮ ತೆಗೆದುಕೊಳ್ಳಲು ಅವಕಾಶವಿದೆ” ಎಂದು ತಿಳಿಸಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...